AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?

ಟೀಸರ್​ನಲ್ಲಿ ಒಂದು ದೃಶ್ಯ ಬರುತ್ತದೆ. ಅದರಲ್ಲಿ ಹೀರೋಯಿನ್​ ಬಂದು ಪುನೀತ್​ ಬಳಿ ನೀವು ಥೇಟ್​ ಅಣ್ಣನ ರೀತಿ ಕಾಣುತ್ತೀರಿ ಎಂದು ಹೇಳುತ್ತಾರೆ. ಇದೇ ವಿಚಾರವಾಗಿ ಪುನೀತ್​ಗೆ ಪ್ರಶ್ನೆ ಕೇಳಲಾಯಿತು.

ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?
ರಾಜೇಶ್ ದುಗ್ಗುಮನೆ
|

Updated on: Mar 20, 2021 | 6:52 PM

Share

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬರುತ್ತಿದೆ. ಇಂದು ರಿಲೀಸ್​ ಆದ ಚಿತ್ರದ ಟ್ರೇಲರ್​ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಮೂಡಿಸಿದೆ. ಸಿನಿಮಾ ರಿಲೀಸ್​ಗೂ ಮೊದಲು ಪುನೀತ್​ ರಾಜ್​ಕುಮಾರ್​ ಟಿವಿ9 ಕನ್ನಡಕ್ಕೆ ವಿಶೇಷ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ಅಪ್ಪು ವಿಶೇಷ ಮನವಿ ಒಂದನ್ನು ಮಾಡಿದ್ದಾರೆ. ಟೀಸರ್​ನಲ್ಲಿ ಒಂದು ದೃಶ್ಯ ಬರುತ್ತದೆ. ಅದರಲ್ಲಿ ಹೀರೋಯಿನ್​ ಬಂದು ಪುನೀತ್​ ಬಳಿ ನೀವು ಥೇಟ್​ ಅಣ್ಣನ ರೀತಿ ಕಾಣುತ್ತೀರಿ ಎಂದು ಹೇಳುತ್ತಾರೆ. ಹೌದು, ಆದ್ರೆ, ಅಣ್ಣ ಎಂದು ಮಾತ್ರ ಕರೆಯಬೇಡಿ ಎಂದು ಪುನೀತ್​ ಮನವಿ ಮಾಡುತ್ತಾರೆ. ಇದೇ ವಿಚಾರವಾಗಿ ಪುನೀತ್​ಗೆ ಪ್ರಶ್ನೆ ಕೇಳಲಾಯಿತು. ನೀವು ಈ ಡೈಲಾಗ್​ ಹೇಳಿದ್ದು, ನಾಯಕಿಗೋ ಅಥವಾ ಸಮಸ್ತ ಯುವತಿಯರಿಗೋ ಎಂದು ಕೇಳಲಾಯಿತು. ಇದಕ್ಕೆ ಪುನೀತ್​ ಫನ್ನಿಯಾಗಿ ಉತ್ತರಿಸಿದ್ದಾರೆ.

ನನ್ನನ್ನು ಯಾರೂ ಪ್ರೀತಿಸಬೇಡಿ. ನನಗೆ ಮದುವೆ ಆಗಿದೆ ಎಂದು ನಕ್ಕರು ಪುನೀತ್​. ನಂತರ ಮಾತನಾಡಿದ ಅವರು, ಅವರು ಪ್ರೀತಿ ಮಾಡಲಿ. ಅವರ ಪ್ರೀತಿ-ಅಭಿಮಾನವೇ ಇಲ್ಲಿವರೆಗೆ ತಂದು ನಿಲ್ಲಿಸಿದೆ ಎಂದು ಸಂತಸ ಹೊರಹಾಕಿದರು. ಇನ್ನು ಆಹಾರದಲ್ಲಿ ಏನು ಇಷ್ಟ ಎನ್ನು ಪ್ರಶ್ನೆಗೆ ಉತ್ತರಿಸಿದ ಪುನೀತ್​, ನನಗೆ ನಾನ್​ ವೆಜ್​ ಎಂದರೆ ತುಂಬಾನೇ ಇಷ್ಟ. ಊಟ ಎಂದ್ರೆ ಇಷ್ಟ. ಎಲ್ಲಾ ಊರುಗಳಲ್ಲಿ ಎಲ್ಲಾ ರೀತಿಯ ಊಟ ಮಾಡಿದ್ದೇನೆ ಎಂದರು.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್