ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?

ಟೀಸರ್​ನಲ್ಲಿ ಒಂದು ದೃಶ್ಯ ಬರುತ್ತದೆ. ಅದರಲ್ಲಿ ಹೀರೋಯಿನ್​ ಬಂದು ಪುನೀತ್​ ಬಳಿ ನೀವು ಥೇಟ್​ ಅಣ್ಣನ ರೀತಿ ಕಾಣುತ್ತೀರಿ ಎಂದು ಹೇಳುತ್ತಾರೆ. ಇದೇ ವಿಚಾರವಾಗಿ ಪುನೀತ್​ಗೆ ಪ್ರಶ್ನೆ ಕೇಳಲಾಯಿತು.

ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?
Follow us
|

Updated on: Mar 20, 2021 | 6:52 PM

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬರುತ್ತಿದೆ. ಇಂದು ರಿಲೀಸ್​ ಆದ ಚಿತ್ರದ ಟ್ರೇಲರ್​ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಮೂಡಿಸಿದೆ. ಸಿನಿಮಾ ರಿಲೀಸ್​ಗೂ ಮೊದಲು ಪುನೀತ್​ ರಾಜ್​ಕುಮಾರ್​ ಟಿವಿ9 ಕನ್ನಡಕ್ಕೆ ವಿಶೇಷ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ಅಪ್ಪು ವಿಶೇಷ ಮನವಿ ಒಂದನ್ನು ಮಾಡಿದ್ದಾರೆ. ಟೀಸರ್​ನಲ್ಲಿ ಒಂದು ದೃಶ್ಯ ಬರುತ್ತದೆ. ಅದರಲ್ಲಿ ಹೀರೋಯಿನ್​ ಬಂದು ಪುನೀತ್​ ಬಳಿ ನೀವು ಥೇಟ್​ ಅಣ್ಣನ ರೀತಿ ಕಾಣುತ್ತೀರಿ ಎಂದು ಹೇಳುತ್ತಾರೆ. ಹೌದು, ಆದ್ರೆ, ಅಣ್ಣ ಎಂದು ಮಾತ್ರ ಕರೆಯಬೇಡಿ ಎಂದು ಪುನೀತ್​ ಮನವಿ ಮಾಡುತ್ತಾರೆ. ಇದೇ ವಿಚಾರವಾಗಿ ಪುನೀತ್​ಗೆ ಪ್ರಶ್ನೆ ಕೇಳಲಾಯಿತು. ನೀವು ಈ ಡೈಲಾಗ್​ ಹೇಳಿದ್ದು, ನಾಯಕಿಗೋ ಅಥವಾ ಸಮಸ್ತ ಯುವತಿಯರಿಗೋ ಎಂದು ಕೇಳಲಾಯಿತು. ಇದಕ್ಕೆ ಪುನೀತ್​ ಫನ್ನಿಯಾಗಿ ಉತ್ತರಿಸಿದ್ದಾರೆ.

ನನ್ನನ್ನು ಯಾರೂ ಪ್ರೀತಿಸಬೇಡಿ. ನನಗೆ ಮದುವೆ ಆಗಿದೆ ಎಂದು ನಕ್ಕರು ಪುನೀತ್​. ನಂತರ ಮಾತನಾಡಿದ ಅವರು, ಅವರು ಪ್ರೀತಿ ಮಾಡಲಿ. ಅವರ ಪ್ರೀತಿ-ಅಭಿಮಾನವೇ ಇಲ್ಲಿವರೆಗೆ ತಂದು ನಿಲ್ಲಿಸಿದೆ ಎಂದು ಸಂತಸ ಹೊರಹಾಕಿದರು. ಇನ್ನು ಆಹಾರದಲ್ಲಿ ಏನು ಇಷ್ಟ ಎನ್ನು ಪ್ರಶ್ನೆಗೆ ಉತ್ತರಿಸಿದ ಪುನೀತ್​, ನನಗೆ ನಾನ್​ ವೆಜ್​ ಎಂದರೆ ತುಂಬಾನೇ ಇಷ್ಟ. ಊಟ ಎಂದ್ರೆ ಇಷ್ಟ. ಎಲ್ಲಾ ಊರುಗಳಲ್ಲಿ ಎಲ್ಲಾ ರೀತಿಯ ಊಟ ಮಾಡಿದ್ದೇನೆ ಎಂದರು.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ