AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಡಾ. ರಾಜ್​​ಕುಮಾರ್ ಅವರ 'ಶ್ರೀ ಚಾಮುಂಡೇಶ್ವರಿ' ಹಾಡನ್ನು ಹಂಚಿಕೊಂಡಿರುವುದು ಕನ್ನಡಿಗರಿಗೆ ಮತ್ತು ಅಣ್ಣಾವ್ರ ಅಭಿಮಾನಿಗಳಿಗೆ ಸಂತಸ ತಂದಿದೆ. 1970ರ 'ಶ್ರೀ ಕೃಷ್ಣದೇವರಾಯ' ಚಿತ್ರದ ಈ ಹಾಡು ಜಗತ್ಜನನಿ ಮಾತೆಯ ಮೇಲಿನ ನಂಬಿಕೆಯನ್ನು ಸಾರುತ್ತದೆ. ರಾಜ್​​ಕುಮಾರ್ ಅವರ ವಿಶ್ವಾದ್ಯಂತ ಖ್ಯಾತಿ ಮತ್ತು ಬಹುಮುಖಿ ಪ್ರತಿಭೆಗೆ ಇದು ಮತ್ತೊಂದು ಸಾಕ್ಷಿ.

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?
ಮೋದಿ-ರಾಜ್​​​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 21, 2026 | 9:58 AM

Share

ಕನ್ನಡದ ವರನಟ ಡಾ. ರಾಜ್​​ಕುಮಾರ್ (Rajkumar) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ನೀಡಿದ ಸಿನಿಮಾಗಳು ಈಗಲೂ ಅನೇಕರಿಗೆ ಮಾದರಿ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಕನ್ನಡದ ಮಾತ್ರವಲ್ಲದೆ, ಪರಭಾಷೆಯ ಮಂದಿಗೂ ರಾಜ್​​ಕುಮಾರ್ ತಿಳಿದಿದ್ದಾರೆ. ರಾಜ್​​ಕುಮಾರ್ ಅವರ ಹಾಡುಗಳು ಕೂಡ ಅನೇಕರ ಫೇವರಿಟ್. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜ್​​ಕುಮಾರ್ ಅವರ ಹಾಡನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಅಣ್ಣಾವ್ರ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಕೊಟ್ಟಿದೆ.

ರಾಜ್​​ಕುಮಾರ್ ಅವರು ಬಾಂಡ್ ಸಿನಿಮಾಗಳಿಂದ ಹಿಡಿದು, ಪೌರಾಣಿಕ ಸಿನಿಮಾಗಳವರೆಗೆ, ಆ್ಯಕ್ಷನ್ ಸಿನಿಮಾದಿಂದ ಹಿಡಿದು ಭಕ್ತಿ ಪ್ರಧಾನ ಸಿನಿಮಾವರೆಗೆ ಎಲ್ಲ ರೀತಿಯ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ‘ಶ್ರೀ ಕೃಷ್ಣದೇವರಾಯ’ ಸಿನಿಮಾ ಕೂಡ ಒಂದು. ಈ ಚಿತ್ರದಲ್ಲಿ ರಾಜ್​​ಕುಮಾರ್ ಅವರು ಕೃಷ್ಣದೇವರಾಯ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ 1970ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ‘ಶ್ರೀ ಚಾಂಮುಂಡೇಶ್ವರಿ..’ ಹಾಡು ಗಮನ ಸೆಳೆಯಿತು. ಇದನ್ನು ಮೋದಿ ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು

‘ಶ್ರೀ ಚಾಂಮುಂಡೇಶ್ವರಿ..’ ಹಾಡಿನ ಯೂಟ್ಯೂಬ್ ಲಿಂಕ್ ಶೇರ್ ಮಾಡಿಕೊಂಡಿರೋ ಮೋದಿ, ‘ಜಗತ್ಜನನಿ ಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಶಕ್ತಿಯನ್ನು ತುಂಬಲಿದೆ’ ಎಂದು ಹೇಳಿದ್ದಾರೆ. ಈ ಮೂಲಕ ದೈವದ ಭಕ್ತಿ ಸಾರುವ ವಿಡಿಯೋ ಹಂಚಿಕೊಂಡಿದ್ದಾರೆ.

‘ಶ್ರೀ ಚಾಂಮುಂಡೇಶ್ವರಿ..’ಹಾಡನ್ನು ಪಿ. ಲೀಲಾ, ಎಸ್​ ಗೋವಿಂದರಾಜು ಹಾಡಿದ್ದಾರೆ. ಪ್ರಭಾಕರ ಶಾಸ್ತ್ರಿ ಅವರು ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಟಿಜಿ ಲಿಂಗಪ್ಪ ಅವರು ಹಾಡಿಗೆ ಸಂಗೀತ ನೀಡಿದ್ದಾರೆ. ರಾಜ್​​ಕುಮಾರ್ ಹಾಗೂ ಭಾರತಿ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:58 am, Sat, 21 March 26

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ