AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಹಿಂದೆ ಬಿದ್ದ ತೆಲುಗು ಸ್ಟಾರ್​ ನಿರ್ದೇಶಕ? ಇದು ಧೂಳ್​ ಧಮಾಕಾ ಕಾಂಬಿನೇಷನ್​!

ಧ್ರುವ ಸರ್ಜಾ ಅಭಿಮಾನಿಗಳು ಫುಲ್​ ಖುಷ್​ ಆಗುವಂತಹ ಸುದ್ದಿ ಕೇಳಿಬರುತ್ತಿದೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಜೊತೆ ಅವರು ಕೈ ಜೋಡಿಸಲಿದ್ದಾರೆ ಎನ್ನಲಾಗುತ್ತಿದೆ.

ಧ್ರುವ ಹಿಂದೆ ಬಿದ್ದ ತೆಲುಗು ಸ್ಟಾರ್​ ನಿರ್ದೇಶಕ? ಇದು ಧೂಳ್​ ಧಮಾಕಾ ಕಾಂಬಿನೇಷನ್​!
ಪುರಿ ಜಗನ್ನಾಥ್​- ಧ್ರುವ ಸರ್ಜಾ
ಮದನ್​ ಕುಮಾರ್​
|

Updated on:Mar 19, 2021 | 7:59 AM

Share

ಕನ್ನಡ ಚಿತ್ರರಂಗದ ‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ ಅವರು ಸದ್ಯ ‘ಪೊಗರು’ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ತೇಲುತ್ತಿದ್ದಾರೆ. ಆ ಚಿತ್ರದ ಗೆಲುವಿನಿಂದಾಗಿ ಅವರ ಖ್ಯಾತಿ ಅಕ್ಕಪಕ್ಕದ ರಾಜ್ಯಗಳಿಗೂ ಹಬ್ಬಿದೆ. ಪರಭಾಷೆಯಲ್ಲೂ ಅವರಿಗೆ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಅಷ್ಟೇ ಅಲ್ಲದೆ, ಅಲ್ಲಿನ ಸ್ಟಾರ್​ ನಿರ್ದೇಶಕರು ಕೂಡ ಧ್ರುವ ಜೊತೆ ಸಿನಿಮಾ ಮಾಡಲು ಇಂಟರೆಸ್ಟ್​ ತೋರಿಸುತ್ತಿದ್ದಾರೆ.

ಹೌದು, ಇಂಥದ್ದೊಂದು ಸುದ್ದಿ ಬಲವಾಗಿ ಕೇಳಿಬರುತ್ತಿದೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಜೊತೆ ಧ್ರುವ ಸಿನಿಮಾ ಮಾಡಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಟಾಲಿವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿರುವ ಪುರಿ ಜಗನ್ನಾಥ್​ ಅವರಿಗೆ 2019ರಲ್ಲಿ ‘ಇಸ್ಮಾರ್ಟ್​ ಶಂಕರ್​’ ಮೂಲಕ ಭರ್ಜರಿ ಗೆಲುವು ಸಿಕ್ಕಿತ್ತು. ಅದರ ನಂತರ ಅವರು ವಿಜಯ್​ ದೇವರಕೊಂಡ ಜೊತೆ ‘ಲೈಗರ್​’ ಸಿನಿಮಾ ಅನೌನ್ಸ್​ ಮಾಡಿದರು. ಈಗ ಅವರು ಧ್ರುವ ಜೊತೆ ಕೈ ಜೋಡಿಸಲಿರುವುದು ವಿಶೇಷ.

ತಮ್ಮ ಸಿನಿಮಾದ ಹೀರೋಗಳನ್ನು ಸಿಕ್ಕಾಪಟ್ಟೆ ರಗಡ್​ ಆಗಿ ತೋರಿಸುವಲ್ಲಿ ಪುರಿ ಜಗನ್ನಾಥ್​ ಫೇಮಸ್​. ಅದಕ್ಕೆ ‘ಇಸ್ಮಾರ್ಟ್​ ಶಂಕರ್’ ಚಿತ್ರವೇ​ ಲೇಟೆಸ್ಟ್​ ಉದಾಹರಣೆ. ಇನ್ನು, ಧ್ರುವ ಕೂಡ ಪೊಗರು ಸಿನಿಮಾದಲ್ಲಿ ಹಿಂದೆಂದಿಗಿಂತಲೂ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಈಗ ಇವರಿಬ್ಬರ ಕಾಂಬಿನೇಷನ್​ನ ಸಿನಿಮಾ ಸೆಟ್ಟೇರಿದ್ದೇ ಹೌದಾದರೆ ಧೂಳ್ ಧಮಾಕಾ ಆಗುವುದರಲ್ಲಿ ಅನುಮಾನವೇ ಇಲ್ಲ. ಈ ಕುರಿತಂತೆ ಧ್ರುವ ಮತ್ತು ಪುರಿ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಧಿಕೃತವಾಗಿ ಸುದ್ದಿ ನೀಡುವುದೊಂದೇ ಬಾಕಿ ಇದೆ ಎಂಬುದು ಮೂಲಗಳ ಮಾಹಿತಿ.

ಧ್ರುವ ಸರ್ಜಾಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಪೊಗರು ಬಳಿಕ ಮತ್ತೆ ಅವರು ನಿರ್ದೇಶಕ ನಂದಕಿಶೋರ್​ ಜೊತೆ ಸಿನಿಮಾ ಮಾಡುತ್ತಿದ್ದು, ಆ ಚಿತ್ರಕ್ಕೆ ದುಬಾರಿ ಎಂದು ಶೀರ್ಷಿಕೆ ಇಡಲಾಗಿದೆ. ಅತ್ತ, ಪುರಿ ಕೂಡ ‘ಲೈಗರ್​’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದು ಮುಗಿದ ಬಳಿಕವೇ ಧ್ರುವ-ಪುರಿ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ.

ಇನ್ನು, ಕನ್ನಡ ಚಿತ್ರರಂಗದ ಜೊತೆ ಪುರಿ ಜಗನ್ನಾಥ್​ ಅವರಿಗೆ ಮೊದಲಿನಿಂದಲೂ ನಂಟು ಇದೆ. ಪುನೀತ್​ ರಾಜ್​ಕುಮಾರ್​ ಮೊದಲ ಬಾರಿಗೆ ಹೀರೋ ಆದ ‘ಅಪ್ಪು’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದು ಇದೇ ಪುರಿ ಜಗನ್ನಾಥ್​. ಶಿವರಾಜ್​ಕುಮಾರ್​ ನಟನೆಯ ‘ಯುವರಾಜ’ ಮತ್ತು ಇಶಾನ್​ ಅಭಿನಯದ ‘ರೋಗ್​’ ಚಿತ್ರಗಳು ಮೂಡಿಬಂದಿದ್ದು ಕೂಡ ಪುರಿ ನಿರ್ದೇಶನದಲ್ಲೇ.

ಇದನ್ನೂ ಓದಿ: ಧ್ರುವ ಸರ್ಜಾರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಬಿತ್ತು ಪೊಲೀಸ್ ಲಾಠಿ ಏಟು

Pogaru First Day Collection: ಧ್ರುವ ಸರ್ಜಾ ನಟನೆಯ ಪೊಗರು ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?

Published On - 7:55 am, Fri, 19 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ