AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು

Jo Lindner Death: ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಜೋ ಲಿಂಡ್ನರ್​ ನಟಿಸಿದ್ದರು. ಕ್ಲೈಮ್ಯಾಕ್ಸ್​ ದೃಶ್ಯದಲ್ಲಿ ಅಬ್ಬರಿಸಿದ್ದ ಅವರು ಈಗ ನೆನಪು ಮಾತ್ರ.

Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು
ಜೋ ಲಿಂಡ್ನರ್​, ಧ್ರುವ ಸರ್ಜಾ
ಮದನ್​ ಕುಮಾರ್​
|

Updated on: Jul 02, 2023 | 11:24 AM

Share

ಫಿಟ್ನೆಸ್​ ಮತ್ತು ಬಾಡಿ ಬಿಲ್ಡಿಂಗ್​ ಬಗ್ಗೆ ಅತಿಯಾಗಿ ಕಾಳಜಿ ವಹಿಸುವವರಿಗೆ ಒಂದು ಶಾಕಿಂಗ್​ ಸುದ್ದಿ ಎದುರಾಗಿದೆ. ಬಾಡಿ ಬಿಲ್ಡಿಂಗ್​​ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ನರ್​ (Jo Lindner) ಅವರು ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಕಬ್ಬಿಣದಂತಹ ದೇಹ ಹೊಂದಿದ್ದ ಅವರು ಏಕಾಏಕಿ ನಿಧನರಾಗಿರುವುದು ಅನುಮಾನಕ್ಕೆ ಕಾರಣ ಆಗಿದೆ. ಇತ್ತೀಚೆಗೆ ಅವರಿಗೆ ಕುತ್ತಿಗೆಯಲ್ಲಿ ನೋವು ಕಾಣಿಸಿಕೊಂಡಿತ್ತು. ರಕ್ತನಾಳದ ಸಮಸ್ಯೆಯೇ ಅವರ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಜೋ ಲಿಂಡ್ನರ್​ ನಿಧನದ ಸುದ್ದಿಯನ್ನು ಅವರ ಪ್ರೇಯಸಿ ಖಚಿತಪಡಿಸಿದ್ದಾರೆ. ಕನ್ನಡದ ‘ಪೊಗರು’ (Pogaru) ಸಿನಿಮಾದಲ್ಲಿ ಜೋ ಲಿಂಡ್ನರ್​ ನಟಿಸಿದ್ದರು. ನಟ ಧ್ರುವ ಸರ್ಜಾ (Dhruva Sarja) ಎದುರು ಅವರು ಫೈಟ್​ ಮಾಡಿದ್ದರು. ಕ್ಲೈಮ್ಯಾಕ್ಸ್​ ದೃಶ್ಯದಲ್ಲಿ ಅಬ್ಬರಿಸಿದ್ದ ಜೋ ಲಿಂಡ್ನರ್​ ಈಗ ನೆನಪು ಮಾತ್ರ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಜೋ ಲಿಂಡ್ನರ್​ ಅವರು ಅಪಾರ ಜನಪ್ರಿಯತೆ ಹೊಂದಿದ್ದರು. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಲಕ್ಷಾಂತರ ಮಂದಿ ಫಾಲೋ ಮಾಡುತ್ತಿದ್ದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು 87 ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಹೊಂದಿದ್ದರು. ‘ಜೋಎಸ್ತೆಟಿಕ್​’ ಎಂಬ ಹೆಸರಿನಿಂದ ಅವರು ಫೇಮಸ್​ ಆಗಿದ್ದರು. ಫಿಟ್ನೆಸ್​ ಬಗ್ಗೆ ಅವರು ಅನೇಕ ಟಿಪ್ಸ್​ ನೀಡುತ್ತಿದ್ದರು. ಬಾಡಿ ಬಿಲ್ಡಿಂಗ್​ ಕ್ಷೇತ್ರದಲ್ಲಿ ಅವರು ಅನೇಕರಿಗೆ ಮಾದರಿ ಆಗಿದ್ದರು. ಆದರೆ ಅವರು ಕೇವಲ 30ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಅದು ಅವರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?