Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು

Jo Lindner Death: ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಜೋ ಲಿಂಡ್ನರ್​ ನಟಿಸಿದ್ದರು. ಕ್ಲೈಮ್ಯಾಕ್ಸ್​ ದೃಶ್ಯದಲ್ಲಿ ಅಬ್ಬರಿಸಿದ್ದ ಅವರು ಈಗ ನೆನಪು ಮಾತ್ರ.

Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು
ಜೋ ಲಿಂಡ್ನರ್​, ಧ್ರುವ ಸರ್ಜಾ
Follow us
|

Updated on: Jul 02, 2023 | 11:24 AM

ಫಿಟ್ನೆಸ್​ ಮತ್ತು ಬಾಡಿ ಬಿಲ್ಡಿಂಗ್​ ಬಗ್ಗೆ ಅತಿಯಾಗಿ ಕಾಳಜಿ ವಹಿಸುವವರಿಗೆ ಒಂದು ಶಾಕಿಂಗ್​ ಸುದ್ದಿ ಎದುರಾಗಿದೆ. ಬಾಡಿ ಬಿಲ್ಡಿಂಗ್​​ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ನರ್​ (Jo Lindner) ಅವರು ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಕಬ್ಬಿಣದಂತಹ ದೇಹ ಹೊಂದಿದ್ದ ಅವರು ಏಕಾಏಕಿ ನಿಧನರಾಗಿರುವುದು ಅನುಮಾನಕ್ಕೆ ಕಾರಣ ಆಗಿದೆ. ಇತ್ತೀಚೆಗೆ ಅವರಿಗೆ ಕುತ್ತಿಗೆಯಲ್ಲಿ ನೋವು ಕಾಣಿಸಿಕೊಂಡಿತ್ತು. ರಕ್ತನಾಳದ ಸಮಸ್ಯೆಯೇ ಅವರ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಜೋ ಲಿಂಡ್ನರ್​ ನಿಧನದ ಸುದ್ದಿಯನ್ನು ಅವರ ಪ್ರೇಯಸಿ ಖಚಿತಪಡಿಸಿದ್ದಾರೆ. ಕನ್ನಡದ ‘ಪೊಗರು’ (Pogaru) ಸಿನಿಮಾದಲ್ಲಿ ಜೋ ಲಿಂಡ್ನರ್​ ನಟಿಸಿದ್ದರು. ನಟ ಧ್ರುವ ಸರ್ಜಾ (Dhruva Sarja) ಎದುರು ಅವರು ಫೈಟ್​ ಮಾಡಿದ್ದರು. ಕ್ಲೈಮ್ಯಾಕ್ಸ್​ ದೃಶ್ಯದಲ್ಲಿ ಅಬ್ಬರಿಸಿದ್ದ ಜೋ ಲಿಂಡ್ನರ್​ ಈಗ ನೆನಪು ಮಾತ್ರ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಜೋ ಲಿಂಡ್ನರ್​ ಅವರು ಅಪಾರ ಜನಪ್ರಿಯತೆ ಹೊಂದಿದ್ದರು. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಲಕ್ಷಾಂತರ ಮಂದಿ ಫಾಲೋ ಮಾಡುತ್ತಿದ್ದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು 87 ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಹೊಂದಿದ್ದರು. ‘ಜೋಎಸ್ತೆಟಿಕ್​’ ಎಂಬ ಹೆಸರಿನಿಂದ ಅವರು ಫೇಮಸ್​ ಆಗಿದ್ದರು. ಫಿಟ್ನೆಸ್​ ಬಗ್ಗೆ ಅವರು ಅನೇಕ ಟಿಪ್ಸ್​ ನೀಡುತ್ತಿದ್ದರು. ಬಾಡಿ ಬಿಲ್ಡಿಂಗ್​ ಕ್ಷೇತ್ರದಲ್ಲಿ ಅವರು ಅನೇಕರಿಗೆ ಮಾದರಿ ಆಗಿದ್ದರು. ಆದರೆ ಅವರು ಕೇವಲ 30ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಅದು ಅವರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ