AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​
ಧ್ರುವ ಸರ್ಜಾ ಪೊಗರು
ರಾಜೇಶ್ ದುಗ್ಗುಮನೆ
|

Updated on:Apr 28, 2021 | 7:11 PM

Share

 ಧ್ರುವ ಸರ್ಜಾ ಕೇವಲ ಸ್ಯಾಂಡಲ್​ವುಡ್​ನಲ್ಲಿ ಮಾತ್ರ ಅಭಿಮಾನಿಗಳನ್ನು ಹೊಂದಿಲ್ಲ. ಅವರ ಎಲ್ಲಾ ಚಿತ್ರಗಳು ಹಿಂದಿಗೆ ಡಬ್​ ಆಗಿ ತೆರೆಕಂಡಿವೆ. ಹಿಂದಿ ಪ್ರೇಕ್ಷಕರು ಕೂಡ ಧ್ರುವ ಸಿನಿಮಾವನ್ನು ತುಂಬಾನೇ ಇಷ್ಟಪಟ್ಟು ನೋಡುತ್ತಾರೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ. ಪೊಗರು ಸಿನಿಮಾ ಡಬ್​ ಆಗಿ ಹಿಂದಿಗೆ ತೆರೆಕಂಡಿದೆ. ನಾಲ್ಕೇ ದಿನಕ್ಕೆ ಈ ಚಿತ್ರ ಕೋಟಿ ಕೋಟಿ ವೀಕ್ಷಣೆ ಕಂಡಿದೆ.

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಏಪ್ರಿಲ್​ 25ರಂದು ಪೊಗರು ಸಿನಿಮಾ ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ತೆರೆಕಂಡಿದೆ. ಕೇವಲ ನಾಲ್ಕು ದಿನಕ್ಕೆ ಸಿನಿಮಾ ಬರೋಬ್ಬರಿ 35 ಮಿಲಿಯನ್​ ಅಂದರೆ, 3.5 ಕೋಟಿ ವೀಕ್ಷಣೆ ಕಂಡಿದೆ. ಈ ಮೂಲಕ ಈ ಮಾಸ್​ ಸಿನಿಮಾಗೆ ಹಿಂದಿಯಲ್ಲೂ ಭಾರೀ ಬೇಡಿಕೆ ಸೃಷ್ಟಿ ಆಗಿರುವುದು ಸ್ಪಷ್ಟವಾಗಿದೆ.

ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ನಟಿಸಿರುವುದಲ್ಲದೆ ಈಗ ಬಾಲಿವುಡ್​​ಗೂ ಕಾಲಿಟ್ಟಿದ್ದಾರೆ. ಹೀಗಾಗಿ ದೇಶಾದ್ಯಂತ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಪೊಗರು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಅವರನ್ನು ಕಣ್ತುಂಬಿಕೊಳ್ಳಬೇಕು ಎನ್ನುವ ಕಾರಣಕ್ಕೂ ಅನೇಕರು ಈ ಸಿನಿಮಾ ವೀಕ್ಷಿಸಿರಬಹುದು. ಈ ಕಾರಣಕ್ಕೂ ಸಿನಿಮಾದ ವೀಕ್ಷಣೆ ಹೆಚ್ಚಿರಬಹುದು ಎನ್ನಲಾಗುತ್ತಿದೆ.

ಫೆಬ್ರವರಿ 11ರಂದು ಪೊಗರು ರಿಲೀಸ್​ ಆಗಿತ್ತು.  ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ಕೆಲವು ಆಕ್ಷೇಪಾರ್ಹ ಅಂಶಗಳಿವೆ ಎಂಬ ಕಾರಣಕ್ಕೆ ಸಾಕಷ್ಟು ವಿವಾದ ಕೂಡ ಆಗಿತ್ತು. ಯುಗಾದಿ ಪ್ರಯುಕ್ತ ಈ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು.

ಇದನ್ನೂ ಓದಿ: ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?

Published On - 7:09 pm, Wed, 28 April 21

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?