ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​
ಧ್ರುವ ಸರ್ಜಾ ಪೊಗರು
Follow us
|

Updated on:Apr 28, 2021 | 7:11 PM

 ಧ್ರುವ ಸರ್ಜಾ ಕೇವಲ ಸ್ಯಾಂಡಲ್​ವುಡ್​ನಲ್ಲಿ ಮಾತ್ರ ಅಭಿಮಾನಿಗಳನ್ನು ಹೊಂದಿಲ್ಲ. ಅವರ ಎಲ್ಲಾ ಚಿತ್ರಗಳು ಹಿಂದಿಗೆ ಡಬ್​ ಆಗಿ ತೆರೆಕಂಡಿವೆ. ಹಿಂದಿ ಪ್ರೇಕ್ಷಕರು ಕೂಡ ಧ್ರುವ ಸಿನಿಮಾವನ್ನು ತುಂಬಾನೇ ಇಷ್ಟಪಟ್ಟು ನೋಡುತ್ತಾರೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ. ಪೊಗರು ಸಿನಿಮಾ ಡಬ್​ ಆಗಿ ಹಿಂದಿಗೆ ತೆರೆಕಂಡಿದೆ. ನಾಲ್ಕೇ ದಿನಕ್ಕೆ ಈ ಚಿತ್ರ ಕೋಟಿ ಕೋಟಿ ವೀಕ್ಷಣೆ ಕಂಡಿದೆ.

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಏಪ್ರಿಲ್​ 25ರಂದು ಪೊಗರು ಸಿನಿಮಾ ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ತೆರೆಕಂಡಿದೆ. ಕೇವಲ ನಾಲ್ಕು ದಿನಕ್ಕೆ ಸಿನಿಮಾ ಬರೋಬ್ಬರಿ 35 ಮಿಲಿಯನ್​ ಅಂದರೆ, 3.5 ಕೋಟಿ ವೀಕ್ಷಣೆ ಕಂಡಿದೆ. ಈ ಮೂಲಕ ಈ ಮಾಸ್​ ಸಿನಿಮಾಗೆ ಹಿಂದಿಯಲ್ಲೂ ಭಾರೀ ಬೇಡಿಕೆ ಸೃಷ್ಟಿ ಆಗಿರುವುದು ಸ್ಪಷ್ಟವಾಗಿದೆ.

ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ನಟಿಸಿರುವುದಲ್ಲದೆ ಈಗ ಬಾಲಿವುಡ್​​ಗೂ ಕಾಲಿಟ್ಟಿದ್ದಾರೆ. ಹೀಗಾಗಿ ದೇಶಾದ್ಯಂತ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಪೊಗರು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಅವರನ್ನು ಕಣ್ತುಂಬಿಕೊಳ್ಳಬೇಕು ಎನ್ನುವ ಕಾರಣಕ್ಕೂ ಅನೇಕರು ಈ ಸಿನಿಮಾ ವೀಕ್ಷಿಸಿರಬಹುದು. ಈ ಕಾರಣಕ್ಕೂ ಸಿನಿಮಾದ ವೀಕ್ಷಣೆ ಹೆಚ್ಚಿರಬಹುದು ಎನ್ನಲಾಗುತ್ತಿದೆ.

ಫೆಬ್ರವರಿ 11ರಂದು ಪೊಗರು ರಿಲೀಸ್​ ಆಗಿತ್ತು.  ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ಕೆಲವು ಆಕ್ಷೇಪಾರ್ಹ ಅಂಶಗಳಿವೆ ಎಂಬ ಕಾರಣಕ್ಕೆ ಸಾಕಷ್ಟು ವಿವಾದ ಕೂಡ ಆಗಿತ್ತು. ಯುಗಾದಿ ಪ್ರಯುಕ್ತ ಈ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು.

ಇದನ್ನೂ ಓದಿ: ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?

Published On - 7:09 pm, Wed, 28 April 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ