AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​
ಧ್ರುವ ಸರ್ಜಾ ಪೊಗರು
ರಾಜೇಶ್ ದುಗ್ಗುಮನೆ
|

Updated on:Apr 28, 2021 | 7:11 PM

Share

 ಧ್ರುವ ಸರ್ಜಾ ಕೇವಲ ಸ್ಯಾಂಡಲ್​ವುಡ್​ನಲ್ಲಿ ಮಾತ್ರ ಅಭಿಮಾನಿಗಳನ್ನು ಹೊಂದಿಲ್ಲ. ಅವರ ಎಲ್ಲಾ ಚಿತ್ರಗಳು ಹಿಂದಿಗೆ ಡಬ್​ ಆಗಿ ತೆರೆಕಂಡಿವೆ. ಹಿಂದಿ ಪ್ರೇಕ್ಷಕರು ಕೂಡ ಧ್ರುವ ಸಿನಿಮಾವನ್ನು ತುಂಬಾನೇ ಇಷ್ಟಪಟ್ಟು ನೋಡುತ್ತಾರೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ. ಪೊಗರು ಸಿನಿಮಾ ಡಬ್​ ಆಗಿ ಹಿಂದಿಗೆ ತೆರೆಕಂಡಿದೆ. ನಾಲ್ಕೇ ದಿನಕ್ಕೆ ಈ ಚಿತ್ರ ಕೋಟಿ ಕೋಟಿ ವೀಕ್ಷಣೆ ಕಂಡಿದೆ.

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಏಪ್ರಿಲ್​ 25ರಂದು ಪೊಗರು ಸಿನಿಮಾ ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ತೆರೆಕಂಡಿದೆ. ಕೇವಲ ನಾಲ್ಕು ದಿನಕ್ಕೆ ಸಿನಿಮಾ ಬರೋಬ್ಬರಿ 35 ಮಿಲಿಯನ್​ ಅಂದರೆ, 3.5 ಕೋಟಿ ವೀಕ್ಷಣೆ ಕಂಡಿದೆ. ಈ ಮೂಲಕ ಈ ಮಾಸ್​ ಸಿನಿಮಾಗೆ ಹಿಂದಿಯಲ್ಲೂ ಭಾರೀ ಬೇಡಿಕೆ ಸೃಷ್ಟಿ ಆಗಿರುವುದು ಸ್ಪಷ್ಟವಾಗಿದೆ.

ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ನಟಿಸಿರುವುದಲ್ಲದೆ ಈಗ ಬಾಲಿವುಡ್​​ಗೂ ಕಾಲಿಟ್ಟಿದ್ದಾರೆ. ಹೀಗಾಗಿ ದೇಶಾದ್ಯಂತ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಪೊಗರು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಅವರನ್ನು ಕಣ್ತುಂಬಿಕೊಳ್ಳಬೇಕು ಎನ್ನುವ ಕಾರಣಕ್ಕೂ ಅನೇಕರು ಈ ಸಿನಿಮಾ ವೀಕ್ಷಿಸಿರಬಹುದು. ಈ ಕಾರಣಕ್ಕೂ ಸಿನಿಮಾದ ವೀಕ್ಷಣೆ ಹೆಚ್ಚಿರಬಹುದು ಎನ್ನಲಾಗುತ್ತಿದೆ.

ಫೆಬ್ರವರಿ 11ರಂದು ಪೊಗರು ರಿಲೀಸ್​ ಆಗಿತ್ತು.  ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ಕೆಲವು ಆಕ್ಷೇಪಾರ್ಹ ಅಂಶಗಳಿವೆ ಎಂಬ ಕಾರಣಕ್ಕೆ ಸಾಕಷ್ಟು ವಿವಾದ ಕೂಡ ಆಗಿತ್ತು. ಯುಗಾದಿ ಪ್ರಯುಕ್ತ ಈ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು.

ಇದನ್ನೂ ಓದಿ: ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?

Published On - 7:09 pm, Wed, 28 April 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ