AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಬರ್ಟ್​’ ನಿರ್ಮಾಪಕ ಉಮಾಪತಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜೇಶ್​ ಬಂಧನ

ವ್ಯವಸ್ಥಿತವಾಗಿ ಸಂಚು ರೂಪಿಸಿ ದರೋಡೆ ಮುಂತಾದ ಭೂಗತ ಚಟುವಟಿಕೆಗಳನ್ನು ನಡೆಸಲು ಬಾಂಬೆ ರವಿ ಮತ್ತು ಆತನ ಸಹಚರರು ಪ್ಲ್ಯಾನ್​ ರೂಪಿಸಿದ್ದರು. ಬೆಂಗಳೂರಿನಿಂದ ಹೊರಗೆ ಇದ್ದುಕೊಂಡು, ನಗರದಲ್ಲಿನ ಹಣವಂತರಿಗೆ ಧಮ್ಕಿ ಹಾಕುತಿದ್ದರು.

‘ರಾಬರ್ಟ್​’ ನಿರ್ಮಾಪಕ ಉಮಾಪತಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜೇಶ್​ ಬಂಧನ
ಕರಿಯ ರಾಜೇಶ್​ ಬಂಧನ
TV9 Web
| Edited By: |

Updated on:Jun 15, 2021 | 2:22 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾಗೆ ಬಂಡವಾಳ ಹೂಡಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬಾಂಬೆ ರವಿ ಸಹಚರನಾದ ರಾಜೇಶ್​ ಅಲಿಯಾಸ್​ ಕರಿಯ ರಾಜೇಶ್​ನನ್ನು ಬಂಧಿಸಿದ್ದಾರೆ. ಬಾಂಬೆ ರವಿ ತಂಡಕ್ಕೆ ಸೇರಿದವನಾಗಿದ್ದ ಈತ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಆದರೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಳೆದ ವರ್ಷ ಉಮಾಪತಿ ಶ್ರೀನಿವಾಸ್​ ಗೌಡ ಮತ್ತು ಅವರ ಸಹೋದರ ದೀಪಕ್​ ಅವರ ಹತ್ಯೆಗೆ ಸಂಚುರೂಪಿಸಲಾಗಿತ್ತು. ಅಲ್ಲದೆ, ಕೊಲೆ ಬೆದರಿಕೆ ಹಾಕಿದ್ದರು. ವ್ಯವಸ್ಥಿತವಾಗಿ ಸಂಚು ರೂಪಿಸಿ ದರೋಡೆ ಮುಂತಾದ ಭೂಗತ ಚಟುವಟಿಕೆಗಳನ್ನು ನಡೆಸಲು ಬಾಂಬೆ ರವಿ ಮತ್ತು ಆತನ ಸಹಚರರು ಪ್ಲ್ಯಾನ್​ ರೂಪಿಸಿದ್ದರು. ಬೆಂಗಳೂರಿನಿಂದ ಹೊರಗೆ ಇದ್ದುಕೊಂಡು, ನಗರದಲ್ಲಿನ ಹಣವಂತರಿಗೆ ಧಮ್ಕಿ ಹಾಕುತಿದ್ದ ಈ ಗ್ಯಾಂಗ್​ನ ಹಲವರನ್ನು ಈ ಮೊದಲೇ ವಶಕ್ಕೆ ಪಡೆಯಲಾಗಿತ್ತು.

ಘಟನೆ ಕುರಿತಂತೆ ಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಹನ್ನೊಂದು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಎರಡು ತಿಂಗಳಿಗೂ ಹೆಚ್ಚು ಕಾಲ ಕಾರ್ಯಚರಣೆ ನಡೆಸಿದ್ದ ದಕ್ಷಿಣ ವಿಭಾಗದ ಪೊಲೀಸರು ಈಗ ರಾಜೇಶ್​ ಅಲಿಯಾಸ್​ ಕರಿಯ ರಾಜೇಶ್​ನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆಯಾದ ಹಳೆ ರೌಡಿ ಪರಂದಾಮಯ್ಯನ ಜೊತೆ ಇರುತ್ತಿದ್ದ ಕರಿಯ ರಾಜೇಶ್​ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್ ನಟನೆಯ ‘ರಾಬರ್ಟ್​’ ಚಿತ್ರವನ್ನು ನಿರ್ಮಾಣ ಮಾಡಿರುವ ಉಮಾಪತಿ ಶ್ರೀನಿವಾಸ್​ ಗೌಡ ಅವರು ಈ ಚಿತ್ರದಿಂದ ಗೆಲುವು ಪಡೆದುಕೊಂಡಿದ್ದಾರೆ. ಲಾಕ್​ಡೌನ್​ ಸಡಿಲಿಕೆ ಬಳಿಕ ಬಿಡುಗಡೆಯಾದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿತು. ನೂರು ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ರಾಬರ್ಟ್​ ಸಿನಿಮಾದ ಹೆಚ್ಚುಗಾರಿಕೆ. ಈಗ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್​ ಗೌಡ ಅವರು ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

Published On - 12:34 pm, Tue, 15 June 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ