AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಬರ್ಟ್​’ ನಿರ್ಮಾಪಕ ಉಮಾಪತಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜೇಶ್​ ಬಂಧನ

ವ್ಯವಸ್ಥಿತವಾಗಿ ಸಂಚು ರೂಪಿಸಿ ದರೋಡೆ ಮುಂತಾದ ಭೂಗತ ಚಟುವಟಿಕೆಗಳನ್ನು ನಡೆಸಲು ಬಾಂಬೆ ರವಿ ಮತ್ತು ಆತನ ಸಹಚರರು ಪ್ಲ್ಯಾನ್​ ರೂಪಿಸಿದ್ದರು. ಬೆಂಗಳೂರಿನಿಂದ ಹೊರಗೆ ಇದ್ದುಕೊಂಡು, ನಗರದಲ್ಲಿನ ಹಣವಂತರಿಗೆ ಧಮ್ಕಿ ಹಾಕುತಿದ್ದರು.

‘ರಾಬರ್ಟ್​’ ನಿರ್ಮಾಪಕ ಉಮಾಪತಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜೇಶ್​ ಬಂಧನ
ಕರಿಯ ರಾಜೇಶ್​ ಬಂಧನ
TV9 Web
| Edited By: |

Updated on:Jun 15, 2021 | 2:22 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾಗೆ ಬಂಡವಾಳ ಹೂಡಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬಾಂಬೆ ರವಿ ಸಹಚರನಾದ ರಾಜೇಶ್​ ಅಲಿಯಾಸ್​ ಕರಿಯ ರಾಜೇಶ್​ನನ್ನು ಬಂಧಿಸಿದ್ದಾರೆ. ಬಾಂಬೆ ರವಿ ತಂಡಕ್ಕೆ ಸೇರಿದವನಾಗಿದ್ದ ಈತ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಆದರೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಳೆದ ವರ್ಷ ಉಮಾಪತಿ ಶ್ರೀನಿವಾಸ್​ ಗೌಡ ಮತ್ತು ಅವರ ಸಹೋದರ ದೀಪಕ್​ ಅವರ ಹತ್ಯೆಗೆ ಸಂಚುರೂಪಿಸಲಾಗಿತ್ತು. ಅಲ್ಲದೆ, ಕೊಲೆ ಬೆದರಿಕೆ ಹಾಕಿದ್ದರು. ವ್ಯವಸ್ಥಿತವಾಗಿ ಸಂಚು ರೂಪಿಸಿ ದರೋಡೆ ಮುಂತಾದ ಭೂಗತ ಚಟುವಟಿಕೆಗಳನ್ನು ನಡೆಸಲು ಬಾಂಬೆ ರವಿ ಮತ್ತು ಆತನ ಸಹಚರರು ಪ್ಲ್ಯಾನ್​ ರೂಪಿಸಿದ್ದರು. ಬೆಂಗಳೂರಿನಿಂದ ಹೊರಗೆ ಇದ್ದುಕೊಂಡು, ನಗರದಲ್ಲಿನ ಹಣವಂತರಿಗೆ ಧಮ್ಕಿ ಹಾಕುತಿದ್ದ ಈ ಗ್ಯಾಂಗ್​ನ ಹಲವರನ್ನು ಈ ಮೊದಲೇ ವಶಕ್ಕೆ ಪಡೆಯಲಾಗಿತ್ತು.

ಘಟನೆ ಕುರಿತಂತೆ ಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಹನ್ನೊಂದು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಎರಡು ತಿಂಗಳಿಗೂ ಹೆಚ್ಚು ಕಾಲ ಕಾರ್ಯಚರಣೆ ನಡೆಸಿದ್ದ ದಕ್ಷಿಣ ವಿಭಾಗದ ಪೊಲೀಸರು ಈಗ ರಾಜೇಶ್​ ಅಲಿಯಾಸ್​ ಕರಿಯ ರಾಜೇಶ್​ನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆಯಾದ ಹಳೆ ರೌಡಿ ಪರಂದಾಮಯ್ಯನ ಜೊತೆ ಇರುತ್ತಿದ್ದ ಕರಿಯ ರಾಜೇಶ್​ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್ ನಟನೆಯ ‘ರಾಬರ್ಟ್​’ ಚಿತ್ರವನ್ನು ನಿರ್ಮಾಣ ಮಾಡಿರುವ ಉಮಾಪತಿ ಶ್ರೀನಿವಾಸ್​ ಗೌಡ ಅವರು ಈ ಚಿತ್ರದಿಂದ ಗೆಲುವು ಪಡೆದುಕೊಂಡಿದ್ದಾರೆ. ಲಾಕ್​ಡೌನ್​ ಸಡಿಲಿಕೆ ಬಳಿಕ ಬಿಡುಗಡೆಯಾದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿತು. ನೂರು ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ರಾಬರ್ಟ್​ ಸಿನಿಮಾದ ಹೆಚ್ಚುಗಾರಿಕೆ. ಈಗ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್​ ಗೌಡ ಅವರು ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

Published On - 12:34 pm, Tue, 15 June 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!