ದರ್ಶನ್ ಯಾಕೆ ಜೈಲಿನಲ್ಲೇ ಇರಬೇಕು? ಪೊಲೀಸರು ನೀಡಿದ 30 ಕಾರಣಗಳು ಇಲ್ಲಿವೆ..

ನಟ ದರ್ಶನ್​ಗೆ ಕಾನೂನಿನ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ರೇಣುಕಾ ಸ್ವಾಮಿಯ ಕೊಲೆ ಕೇಸ್​ನಲ್ಲಿ ಆರೋಪಿಗಳಾಗಿರುವ ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನುಳಿದ ಸಹಚರರ ನ್ಯಾಯಾಂಗ ಬಂಧನವನ್ನು ಆಗಸ್ಟ್​ 1ರವರೆಗೆ ಮುಂದುವರಿಸಲಾಗಿದೆ. ದರ್ಶನ್​ ಯಾಕೆ ಇನ್ನೂ ಕೆಲವು ದಿನಗಳ ಕಾಲ ಜೈಲಿನಲ್ಲಿ ಇರಬೇಕು ಎಂಬುದಕ್ಕೆ ಪೊಲೀಸರು 30 ಕಾರಣಗಳನ್ನು ನೀಡಿದ್ದಾರೆ.

ದರ್ಶನ್ ಯಾಕೆ ಜೈಲಿನಲ್ಲೇ ಇರಬೇಕು? ಪೊಲೀಸರು ನೀಡಿದ 30 ಕಾರಣಗಳು ಇಲ್ಲಿವೆ..
ದರ್ಶನ್​
Follow us
| Updated By: ಮದನ್​ ಕುಮಾರ್​

Updated on: Jul 18, 2024 | 4:48 PM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದರ್ಶನ್​, ಪವಿತ್ರಾ ಗೌಡ ಮುಂತಾದವರು ಮತ್ತೆ 14 ದಿನ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ. ಈ ಕೇಸ್​ ತನಿಖಾ ಹಂತದಲ್ಲಿ ಇದೆ. ಅನೇಕ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದು, ಇನ್ನೂ ಒಂದಷ್ಟು ಮಾಹಿತಿ ಸಂಗ್ರಹಿಸುವುದು ಬಾಕಿ ಇದೆ. ದರ್ಶನ್​, ಪವಿತ್ರಾ ಗೌಡ ಮತ್ತು ಗ್ಯಾಂಗ್​ನವರ ನ್ಯಾಯಾಂಗ ಬಂಧನವನ್ನು ಯಾಕೆ ಮುಂದುವರಿಸಬೇಕು ಎಂಬುದಕ್ಕೆ ಪೊಲೀಸರು ಬರೋಬ್ಬರಿ 30 ಕಾರಣಗಳನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ..

1. ಆರೋಪಿಗಳು ಕಿಡ್ನಾಪ್, ಕೊಲೆ, ಒಳ ಸಂಚು ಮತ್ತು ಸಾಕ್ಷಿನಾಶದಲ್ಲಿ‌ಭಾಗಿ. 2. ನೇರವಾಗಿ ಭಾಗಿಯಾಗಿರುವುದು ತನಿಖೆಯಲ್ಲಿ ಪತ್ತೆ. 3. ಐ ವಿಟ್ನೇಸ್, ಟೆಕ್ನಿಕಲ್, ಡಿಜಿಟಲ್ ಸಾಕ್ಷಿಯಲ್ಲಿ‌ ಧೃಢ. 4. ಕೇಸ್ ನಲ್ಲಿ 83,55,500 ರೂಪಾಯಿ ಆರೋಪಿಗಳಿಂದ ಸೀಜ್. 5. ಸೀಜ್ ಹಣ ನೀಡಿದ ವ್ಯಕ್ತಿಗಳ ಪತ್ತೆ ಬಾಕಿ ಇದೆ. 6. ಹಣ ನೀಡಿದ ವ್ಯಕ್ತಿಗಳ ಹೇಳಿಕೆ ದಾಖಲಿಸಬೇಕು. 7. ಜೊತೆಗೆ ಕೆಲ ಆರೋಪಿಗಳಿಂದ ಹಣದ ಮೂಲ ಪತ್ತೆ ಬಾಕಿ ಇದೆ. 8. ಕೃತ್ಯಕ್ಕೆ ಬಳಸಿದ ವಾಹನಗಳ ಆರ್.ಸಿ. ಮಾಲೀಕನ ಪತ್ತೆ ಬಾಕಿ ಇದೆ. 9. ಎಲ್ಲಾ ಆರೋಪಿಗಳು ಒಳಸಂಚು ಮಾಡಿರೋದು ಧೃಡ. 10. ಸಾಕ್ಷಿನಾಶ ಮಾಡಲು ಒಳಸಂಚು ಮಾಡಿರೋದು ಧೃಡ.

11. ಟೆಕ್ನಿಕಲ್, ಸೈಂಟಿಫಿಕ್ ಹಾಗೂ ಫಿಸಿಕಲ್ ಸಾಕ್ಷಿಗಳ ನಾಶ ಮಾಡಿದ್ದು ಧೃಡ. 12. ಎ 13 ದೀಪಕ್ ಬಳಸಿದ ಸ್ಕೂಟರ್ ಕಳ್ಳತನದ ಗಾಡಿ. 13. ಹೆಬ್ಬಗೋಡಿ ಠಾಣೆಯಲ್ಲಿ ಕಳ್ಳತನ ಕೇಸ್ ಇರುವ ಗಾಡಿ. 14. ಹೊಂಡಾ ಡಿಯೋ ಕೆ.ಎ- 51 ಹೆಚ್‌ಡಿ-9022 ಸ್ಕೂಟರ್. 15. ನಕಲಿ ಸಿಮ್ ಬಳಕೆ ಮಾಡಿದ್ದೇಕೆ ಎಂಬ ತನಿಖೆ ಬಾಕಿ. 16. FSL ವರದಿ ಬಳಿಕ ಮತ್ತಷ್ಟು ತನಿಖೆ ಬಾಕಿ ಇದೆ. 17. ಮೊಬೈಲ್ ಡಾಟಾ ಒರಿಜಿನಲಿಟಿ ಚೆಕ್ ರಿಪೋರ್ಟ್ ಬರಬೇಕಿದೆ. 18. ಸಿ.ಎಫ್.ಎಸ್.ಎಲ್ ಹೈದ್ರಾಬಾದ್‌ ವರದಿ ಬರಬೇಕಿದೆ. 19. ಸೀಜ್ ಆಗಿರುವ ಸಿಸಿಟಿವಿ ಡಿವಿಆರ್ ರಿಟ್ರೀವ್ ಇನ್ನೂ ನಡೆಯುತ್ತಿದೆ. 20. ಡಿವಿಆರ್ ಡಾಟಾ ಪಡೆದ ನಂತರ ತನಿಖೆ ಬಾಕಿ ಇದೆ.

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

21. ಕೊಲೆ ಮುಂಚೆ ಕೊಲೆ ಬಳಿಕ ಅನೇಕರ ಜೊತೆ ಮಾತುಕತೆ. 22. ಆ ವ್ಯಕ್ತಿಗಳ ಪತ್ತೆ ಮಾಡಿ ವಿಚಾರಣೆ ಬಾಕಿ ಇದೆ. 23. ಈ ವೇಳೆ ಆರೋಪಿಗಳಿಗೆ ಜಾಮೀನು ನೀಡೋದು ಸೂಕ್ತವಲ್ಲ. 24. ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಜಾಸ್ತಿ ಇದೆ. 25. ಇನ್ನೂ ಅನೇಕರ ಪ್ರತ್ಯಕ್ಷ ಮತ್ತು ಪರೋಕ್ಷ ವ್ಯಕ್ತಿಗಳ 164 ಬಾಕಿ ಇದೆ. 26. ಹಣ ಬಲ, ಪ್ರಭಾವಿ ಬಲ ಇರುವ ಆರೋಪಿಗೆ ಜಾಮೀನಿಗೆ ಯೋಗ್ಯವಲ್ಲ. 27. ಸಾಕ್ಷಿಗಳಿಗೆ ಬೆದರಿಕೆ ಹಾಕಿ ಸಾಕ್ಷಿ ಹೇಳದಂತೆ ತಡೆ ಸಾಧ್ಯ. 28. ಪ್ರಕರಣದಲ್ಲಿ ಆರೋಪಿಗಳ ಪ್ರತ್ಯೇಕ ಪಾತ್ರದ ವಿಚಾರಣೆ ಬಾಕಿ. 29. ಆರೋಪಿಗಳ ಸಂಪೂರ್ಣ ಪಾತ್ರದ ಸಾಕ್ಷಿ ಕಲೆ ಹಾಕಬೇಕು. 30. ಪ್ರಕರಣದಲ್ಲಿ ಇನ್ನೂ ತನಿಖೆ ಹಂತದಲ್ಲಿದ್ದು ವಿಚಾರಣೆ ನಡೆಯುತ್ತಿದೆ.

ಈ ಎಲ್ಲ ಕಾರಣಗಳಿಂದ ಆರೋಪಿಗಳನ್ನು ಜೈಲಿನಲ್ಲಿಯೇ ಇಡಲು ತನಿಖಾಧಿಕಾರಿಗಳ ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಬೆರಳಿಗೆ ಎಂಜಲು ಹಚ್ಚಿ ಹಣ ಎಣಿಸಬಾರದು ಏಕೆ? ವಿಡಿಯೋ ನೋಡಿ
ಬೆರಳಿಗೆ ಎಂಜಲು ಹಚ್ಚಿ ಹಣ ಎಣಿಸಬಾರದು ಏಕೆ? ವಿಡಿಯೋ ನೋಡಿ
Nithya Bhavishya: ಶನಿವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕ್ರೀಡಾಕೂಟ ವೇಳೆ ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಕ್ರೀಡಾಕೂಟ ವೇಳೆ ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ