AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕರಣದಲ್ಲಿ ಇದ್ದಾರೆ ಪ್ರತ್ಯಕ್ಷ ಸಾಕ್ಷಿಗಳು: ಪೊಲೀಸರ ಮಾಹಿತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ, ಆದರೆ ಈಗ ಪೊಲೀಸರು ನ್ಯಾಯಾಲಯಕ್ಕೆ ನೀಡಿರುವ ಮಾಹಿತಿಯಂತೆ ಪ್ರಕರಣದಲ್ಲಿ ಪ್ರತ್ಯಕ್ಷ್ಯ ಸಾಕ್ಷಿಗಳಿದ್ದಾರೆ. ಪ್ರತ್ಯಕ್ಷ್ಯ ಸಾಕ್ಷಿಗಳು ಪ್ರಕರಣದ ದಿಕ್ಕನ್ನೆ ಬದಲಿಸುವ ಸಾಧ್ಯತೆ ಇದೆ.

ಪ್ರಕರಣದಲ್ಲಿ ಇದ್ದಾರೆ ಪ್ರತ್ಯಕ್ಷ ಸಾಕ್ಷಿಗಳು: ಪೊಲೀಸರ ಮಾಹಿತಿ
ದರ್ಶನ್-ರೇಣುಕಾ ಸ್ವಾಮಿ
ಮಂಜುನಾಥ ಸಿ.
|

Updated on: Jun 20, 2024 | 6:22 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪದಲ್ಲಿ ಈವರೆಗೆ ಸುಮಾರು 19 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲ ಆರೋಪಿಗಳು ರೇಣುಕಾ ಸ್ವಾಮಿ ಕೊಲೆಯಲ್ಲಿ ಒಂದಲ್ಲ ಒಂದು ರೀತಿ ಪಾತ್ರವಹಿಸಿದ್ದಾರೆ ಎಂಬುದು ಪೊಲೀಸರ ಆರೋಪ. ಇಂದು (ಜೂನ್ 20) ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನಡೆದ ವಾದ ವಿವಾದದಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷ್ಯಗಳು ಇದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಜೂನ್ 20ಕ್ಕೆ ಆರೋಪಿಗಳ ಪೊಲೀಸ್ ಕಸ್ಟಡಿ ಮುಗಿದ ಕಾರಣ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದ 17 ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಮತ್ತೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೆಲವು ಕಾರಣಗಳನ್ನು ಸಹ ನೀಡಲಾಗಿತ್ತು. ಅದರಲ್ಲಿ ಮಹತ್ವದ ಕಾರಣವೆಂದರೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿ ಇದ್ದಾರೆಂಬುದು.

ಈವರೆಗೆ ತಿಳಿದು ಬಂದಿದ್ದ ಅಂಶವೆಂದರೆ ಪಟ್ಟಣಗೆರೆ ಶೆಡ್​ನಲ್ಲಿ ದರ್ಶನ್, ಪವಿತ್ರಾ ಮತ್ತು ಅವರ ಆಪ್ತರು ರೇಣುಕಾ ಸ್ವಾಮಿ ಹಲ್ಲೆ ಮಾಡಿದ್ದರು, ಆತನನ್ನು ಕೊಂದ ಬಳಿಕ ಕೆಲವರಿಗೆ ಹಣ ನೀಡಿ ಶವವನ್ನು ಮೋರಿಗೆ ಎಸೆಯಲಾಗಿತ್ತು. ಶೆಡ್​ನ ಸಿಸಿಟಿವಿ ಕ್ಯಾಮೆರಾ ಆಫ್ ಮಾಡಿ ಕೃತ್ಯ ಎಸೆಗಲಾಗಿತ್ತು. ಯಾವುದೇ ಪ್ರತ್ಯಕ್ಷ್ಯ ಸಾಕ್ಷ್ಯಗಳು ಸಿಗದಂತೆ ಆರೋಪಿಗಳು ಎಚ್ಚರ ವಹಿಸಿದ್ದಾರೆ ಎಂಬ ಅಂಶಗಳು ತಿಳಿದು ಬಂದಿತ್ತು. ಆದರೆ ಈಗ ತಿಳಿದು ಬಂದಿರುವ ಮಾಹಿತಿಯೆಂದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ್ಯ ಸಾಕ್ಷ್ಯಗಳು ಇದ್ದಾರೆ ಎಂಬುದು. ಇದು ಈ ಪ್ರಕರಣಕ್ಕೆ ಅತ್ಯಂತ ಮಹತ್ವದ ತಿರುವು ನೀಡಲಿದೆ.

ಇದನ್ನೂ ಓದಿ:Breaking: ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಜೈಲು ಪಾಲು

ಪ್ರತ್ಯಕ್ಷ ಸಾಕ್ಷ್ಯ ಎಂಬುದು ಯಾವುದೇ ಪ್ರಕರಣದಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸುತ್ತದೆ. ದರ್ಶನ್ ಹಾಗೂ ಗ್ಯಾಂಗ್ ಹಲ್ಲೆ ಮಾಡುವಾಗ ಯಾರೋ ಒಬ್ಬ ಅಥವಾ ಕೆಲವರು ಪ್ರತ್ಯಕ್ಷ್ಯವಾಗಿ ಅದನ್ನು ನೋಡಿದವರು ಇದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ದರ್ಶನ್ ಹಾಗೂ ಇತರರನ್ನು ಪುನಃ ಪೊಲೀಸ್ ಕಸ್ಟಡಿಗೆ ಪಡೆಯಲು ಇದನ್ನು ಪ್ರಮುಖ ಕಾರಣವನ್ನಾಗಿ ಪೊಲೀಸರು ಬಳಸಿದ್ದಾರೆ. ಯಾರು ಆ ಪ್ರತ್ಯಕ್ಷ್ಯ ದರ್ಶಿ, ಶೆಡ್​ನ ನೌಕರನಾ? ಅಥವಾ ಶೆಡ್​ನ ಅಕ್ಕ-ಪಕ್ಕ ಇರುವವರಾ? ಆ ವ್ಯಕ್ತಿ ಯಾವ ಘಟನೆಗೆ ಪ್ರತ್ಯಕ್ಷ ಸಾಕ್ಷಿ? ಹಲ್ಲೆಗಾ? ಅಥವಾ ಶವ ವಿಲೇವಾರಿ ಆಗಿದ್ದನ್ನು ನೋಡಿದನಾ? ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ