AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಪ್ರಕರಣ: ಆರೋಪಿಗಳು ಚಾಪೆ ಕೆಳಗೆ, ಪೊಲೀಸರು ರಂಗೋಲಿ ಕೆಳಗೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳು ಕೆಲವರು ಮೊಬೈಲ್​ನಲ್ಲಿದ್ದ ಸಾಕ್ಷ್ಯವನ್ನು ನಾಶ ಮಾಡಿದ್ದಾರೆ. ಆದರೆ ಪೊಲೀಸರು ಡಿಜಿಟಲ್ ಸಾಕ್ಷ್ಯದ ಬೆನ್ನುಬಿದ್ದಿದ್ದು ಹೊಸ ತಂತ್ರಜ್ಞಾನಗಳನ್ನು ಬಳಸಿ ಡಾಟಾ ಪಡೆಯುವ ಯತ್ನ ನಡೆಸಿದ್ದಾರೆ.

ರೇಣುಕಾ ಸ್ವಾಮಿ ಪ್ರಕರಣ: ಆರೋಪಿಗಳು ಚಾಪೆ ಕೆಳಗೆ, ಪೊಲೀಸರು ರಂಗೋಲಿ ಕೆಳಗೆ
ದರ್ಶನ್-ರೇಣುಕಾ
ಮಂಜುನಾಥ ಸಿ.
|

Updated on:Jun 23, 2024 | 12:43 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಝಟಿಲವಾಗುತ್ತಾ ಸಾಗುತ್ತಿದೆ. ರೇಣುಕಾ ಸ್ವಾಮಿಯನ್ನು ಹಲವರು ಸೇರಿ ಹತ್ಯೆ ಮಾಡಿರುವುದು ತಿಳಿದಿದೆಯಾದರೂ, ಯಾರ ಪಾತ್ರ ಏನು? ನಿರ್ದಿಷ್ಟವಾಗಿ ರೇಣುಕಾ ಸ್ವಾಮಿಯ ಜೀವ ತೆಗೆದವರ್ಯಾರು? ಜೀವ ತೆಗೆಯಲು ಆದೇಶಿಸಿದವರ್ಯಾರು? ಹತ್ಯೆ ಆದಾಗ ಯಾರ್ಯಾರಿದ್ದರು, ಯಾರು ಯಾರಿಗೆಲ್ಲ ಕೊಲೆಯ ಮಾಹಿತಿ ಇತ್ತು, ಕೊಲೆಯ ಮುಚ್ಚಿ ಹಾಕುವ ಪ್ರಯತ್ನ ನಡೆದಿದ್ದು ಯಾರಿಂದ ಮತ್ತು ಹೇಗೆ? ಇನ್ನೂ ಹಲವು ವಿಷಯಗಳು ಸ್ಪಷ್ಟವಾಗಿ ಬಹಿರಂಗವಾಗಬೇಕಿದೆ. ಈ ಕುರಿತು ಪೊಲೀಸರು ಈಗಾಗಲೇ ಹಲವು ಸಾಕ್ಷ್ಯಗಳನ್ನು ಒಟ್ಟು ಮಾಡಿದ್ದಾರೆ. ಆದರೆ ಆರೋಪಿಗಳು ಸಹ ಬುದ್ಧಿ ಉಪಯೋಗಿಸಿ ಕೆಲ ಸಾಕ್ಷ್ಯಗಳನ್ನು ನಾಶ ಮಾಡಿದ್ದಾರೆ. ಆದರೆ ಈಗ ಪೊಲೀಸರು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಹೊರತೆಗೆಯುವ ಪ್ರಯತ್ನದಲ್ಲಿದ್ದಾರೆ.

ಇತ್ತೀಚೆಗಿನ ಯಾವುದೇ ಅಪರಾಧ ಪ್ರಕರಣದಲ್ಲಿ ಮೊಬೈಲ್ ಬಹಳ ಪ್ರಮುಖ ಪಾತ್ರವಹಿಸುತ್ತಿದೆ. ಮೊಬೈಲ್​ನ ಡಿಜಿಟಲ್ ಸಾಕ್ಷ್ಯ ಅತ್ಯಂತ ಪ್ರಮುಖವಾಗಿದೆ. ಇದನ್ನು ಮೊದಲೇ ಅರಿತಿದ್ದ ಆರೋಪಿಗಳು ಕೆಲವರು ತಮ್ಮ ಮೊಬೈಲ್​ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಸಂತ್ರಸ್ತ ರೇಣುಕಾ ಸ್ವಾಮಿಯ ಮೊಬೈಲ್ ಸೇರಿದಂತೆ ಕೆಲವು ಮಹತ್ವದ ಸಾಕ್ಷ್ಯಗಳಿದ್ದ ರಘು ಮೊಬೈಲ್ ಅನ್ನು ಕಾಣದಂತೆ ಮಾಡಿದ್ದಾರೆ. ಇದು ಪೊಲೀಸರಿಗೆ ಸಮಸ್ಯೆ ಆಗಿತ್ತು. ಆದರೆ ಈಗ ಪೊಲೀಸರು ಹೊಸ ಹಾದಿಯನ್ನು ಹುಡುಕಿಕೊಂಡಿದ್ದಾರೆ.

ಎಲ್ಲ ಆರೋಪಿಗಳ ಮೊಬೈಲ್ ಅನ್ನು ಪರಿಶೀಲಿಸಲು ಪೊಲೀಸರು ನ್ಯಾಯಾಲಯದ ಅನುಮತಿ ಕೇಳಿದ್ದರು, ಅಂತೆಯೇ ನ್ಯಾಯಾಲಯ ಅನುಮತಿ ನೀಡಿದೆ. ಈಗ ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್​ಗಳ ಡಾಟಾ ರಿಟ್ರೀವ್ ಮಾಡಲು ಪೊಲೀಸರು ಮುಂದಾಗಿದ್ದು, ಅವರಿಗೆ ಕೆಲವು ಸಮಸ್ಯೆಗಳು ಎದುರಾಗಿವೆ. ಆರೋಪಿಗಳಲ್ಲಿ ಕೆಲವರು ವೆಬ್ ಅಪ್ಲಿಕೇಶನ್ ಬಳಸಿ ಡಾಟಾ ಅಳಿಸಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಆದರೆ ಆಧುನಿಕ ತಂತ್ರಜ್ಞಾನ ಬಳಸಿ ಡಿಲೀಟ್ ಆಗಿರುವ ಡಾಟಾ ಅನ್ನು ಮರಳಿ ಪಡೆಯುವ ಕುರಿತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:ದರ್ಶನ್ ಬೆಂಬಲಿಸುವವರು, ರೇಣುಕಾ ಸ್ವಾಮಿ ತಂದೆಯ ಪ್ರಶ್ನೆಗೆ ಉತ್ತರಿಸುವರೇ?

ಪಂಚರ ಸಮ್ಮುಖದಲ್ಲಿಯೇ ಮೊಬೈಲ್​ಗಳನ್ನು ತೆಗೆದು ಪರಿಶೀಲನೆ ನಡೆಸಲಾಗುತ್ತದೆ. ಇನ್ನು ರಾಘು, ರೇಣುಕಾ ಸ್ವಾಮಿ ಹಾಗೂ ಇನ್ನು ಕೆಲವರ ಮೊಬೈಲ್​ಗಳನ್ನು ನಾಶ ಮಾಡಲಾಗಿದೆ. ಅವರ ಮೊಬೈಲ್ ಡಾಟಾ ಪಡೆಯಲು, ಪೊಲೀಸರು ಅವರ ಮೊಬೈಲ್​ ನಂಬರ್​ನಲ್ಲಿ ಹೊಸ ಸಿಮ್​ಗಳನ್ನು ಖರೀದಿಸಿ ಆಕ್ಟಿವ್ ಮಾಡಲಿದ್ದಾರೆ. ಹಾಗೂ ಸರ್ವೀಸ್ ಪ್ರೊವೈಡರ್​ಗಳ ನೆರವು ಪಡೆದು ಕರೆ ಮಾಹಿತಿಯನ್ನು ತರಿಸಿಕೊಳ್ಳಲಿದ್ದಾರೆ. ಆದರೆ ರಾಘು ಮೊಬೈಲ್​ನಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಮಾಡಲಾಗಿತ್ತು ಎನ್ನಲಾಗಿದೆ. ಇದನ್ನು ಪೊಲೀಸರು ಹೇಗೆ ಮರಳಿ ಪಡೆದುಕೊಳ್ಳುತ್ತಾರೆ ಎಂಬುದು ಕುತೂಹಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Sun, 23 June 24

Follow Us
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ