ರೇಣುಕಾ ಸ್ವಾಮಿ ಪ್ರಕರಣ: ಆರೋಪಿಗಳು ಚಾಪೆ ಕೆಳಗೆ, ಪೊಲೀಸರು ರಂಗೋಲಿ ಕೆಳಗೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳು ಕೆಲವರು ಮೊಬೈಲ್​ನಲ್ಲಿದ್ದ ಸಾಕ್ಷ್ಯವನ್ನು ನಾಶ ಮಾಡಿದ್ದಾರೆ. ಆದರೆ ಪೊಲೀಸರು ಡಿಜಿಟಲ್ ಸಾಕ್ಷ್ಯದ ಬೆನ್ನುಬಿದ್ದಿದ್ದು ಹೊಸ ತಂತ್ರಜ್ಞಾನಗಳನ್ನು ಬಳಸಿ ಡಾಟಾ ಪಡೆಯುವ ಯತ್ನ ನಡೆಸಿದ್ದಾರೆ.

ರೇಣುಕಾ ಸ್ವಾಮಿ ಪ್ರಕರಣ: ಆರೋಪಿಗಳು ಚಾಪೆ ಕೆಳಗೆ, ಪೊಲೀಸರು ರಂಗೋಲಿ ಕೆಳಗೆ
ದರ್ಶನ್-ರೇಣುಕಾ
Follow us
|

Updated on:Jun 23, 2024 | 12:43 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಝಟಿಲವಾಗುತ್ತಾ ಸಾಗುತ್ತಿದೆ. ರೇಣುಕಾ ಸ್ವಾಮಿಯನ್ನು ಹಲವರು ಸೇರಿ ಹತ್ಯೆ ಮಾಡಿರುವುದು ತಿಳಿದಿದೆಯಾದರೂ, ಯಾರ ಪಾತ್ರ ಏನು? ನಿರ್ದಿಷ್ಟವಾಗಿ ರೇಣುಕಾ ಸ್ವಾಮಿಯ ಜೀವ ತೆಗೆದವರ್ಯಾರು? ಜೀವ ತೆಗೆಯಲು ಆದೇಶಿಸಿದವರ್ಯಾರು? ಹತ್ಯೆ ಆದಾಗ ಯಾರ್ಯಾರಿದ್ದರು, ಯಾರು ಯಾರಿಗೆಲ್ಲ ಕೊಲೆಯ ಮಾಹಿತಿ ಇತ್ತು, ಕೊಲೆಯ ಮುಚ್ಚಿ ಹಾಕುವ ಪ್ರಯತ್ನ ನಡೆದಿದ್ದು ಯಾರಿಂದ ಮತ್ತು ಹೇಗೆ? ಇನ್ನೂ ಹಲವು ವಿಷಯಗಳು ಸ್ಪಷ್ಟವಾಗಿ ಬಹಿರಂಗವಾಗಬೇಕಿದೆ. ಈ ಕುರಿತು ಪೊಲೀಸರು ಈಗಾಗಲೇ ಹಲವು ಸಾಕ್ಷ್ಯಗಳನ್ನು ಒಟ್ಟು ಮಾಡಿದ್ದಾರೆ. ಆದರೆ ಆರೋಪಿಗಳು ಸಹ ಬುದ್ಧಿ ಉಪಯೋಗಿಸಿ ಕೆಲ ಸಾಕ್ಷ್ಯಗಳನ್ನು ನಾಶ ಮಾಡಿದ್ದಾರೆ. ಆದರೆ ಈಗ ಪೊಲೀಸರು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಹೊರತೆಗೆಯುವ ಪ್ರಯತ್ನದಲ್ಲಿದ್ದಾರೆ.

ಇತ್ತೀಚೆಗಿನ ಯಾವುದೇ ಅಪರಾಧ ಪ್ರಕರಣದಲ್ಲಿ ಮೊಬೈಲ್ ಬಹಳ ಪ್ರಮುಖ ಪಾತ್ರವಹಿಸುತ್ತಿದೆ. ಮೊಬೈಲ್​ನ ಡಿಜಿಟಲ್ ಸಾಕ್ಷ್ಯ ಅತ್ಯಂತ ಪ್ರಮುಖವಾಗಿದೆ. ಇದನ್ನು ಮೊದಲೇ ಅರಿತಿದ್ದ ಆರೋಪಿಗಳು ಕೆಲವರು ತಮ್ಮ ಮೊಬೈಲ್​ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಸಂತ್ರಸ್ತ ರೇಣುಕಾ ಸ್ವಾಮಿಯ ಮೊಬೈಲ್ ಸೇರಿದಂತೆ ಕೆಲವು ಮಹತ್ವದ ಸಾಕ್ಷ್ಯಗಳಿದ್ದ ರಘು ಮೊಬೈಲ್ ಅನ್ನು ಕಾಣದಂತೆ ಮಾಡಿದ್ದಾರೆ. ಇದು ಪೊಲೀಸರಿಗೆ ಸಮಸ್ಯೆ ಆಗಿತ್ತು. ಆದರೆ ಈಗ ಪೊಲೀಸರು ಹೊಸ ಹಾದಿಯನ್ನು ಹುಡುಕಿಕೊಂಡಿದ್ದಾರೆ.

ಎಲ್ಲ ಆರೋಪಿಗಳ ಮೊಬೈಲ್ ಅನ್ನು ಪರಿಶೀಲಿಸಲು ಪೊಲೀಸರು ನ್ಯಾಯಾಲಯದ ಅನುಮತಿ ಕೇಳಿದ್ದರು, ಅಂತೆಯೇ ನ್ಯಾಯಾಲಯ ಅನುಮತಿ ನೀಡಿದೆ. ಈಗ ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್​ಗಳ ಡಾಟಾ ರಿಟ್ರೀವ್ ಮಾಡಲು ಪೊಲೀಸರು ಮುಂದಾಗಿದ್ದು, ಅವರಿಗೆ ಕೆಲವು ಸಮಸ್ಯೆಗಳು ಎದುರಾಗಿವೆ. ಆರೋಪಿಗಳಲ್ಲಿ ಕೆಲವರು ವೆಬ್ ಅಪ್ಲಿಕೇಶನ್ ಬಳಸಿ ಡಾಟಾ ಅಳಿಸಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಆದರೆ ಆಧುನಿಕ ತಂತ್ರಜ್ಞಾನ ಬಳಸಿ ಡಿಲೀಟ್ ಆಗಿರುವ ಡಾಟಾ ಅನ್ನು ಮರಳಿ ಪಡೆಯುವ ಕುರಿತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:ದರ್ಶನ್ ಬೆಂಬಲಿಸುವವರು, ರೇಣುಕಾ ಸ್ವಾಮಿ ತಂದೆಯ ಪ್ರಶ್ನೆಗೆ ಉತ್ತರಿಸುವರೇ?

ಪಂಚರ ಸಮ್ಮುಖದಲ್ಲಿಯೇ ಮೊಬೈಲ್​ಗಳನ್ನು ತೆಗೆದು ಪರಿಶೀಲನೆ ನಡೆಸಲಾಗುತ್ತದೆ. ಇನ್ನು ರಾಘು, ರೇಣುಕಾ ಸ್ವಾಮಿ ಹಾಗೂ ಇನ್ನು ಕೆಲವರ ಮೊಬೈಲ್​ಗಳನ್ನು ನಾಶ ಮಾಡಲಾಗಿದೆ. ಅವರ ಮೊಬೈಲ್ ಡಾಟಾ ಪಡೆಯಲು, ಪೊಲೀಸರು ಅವರ ಮೊಬೈಲ್​ ನಂಬರ್​ನಲ್ಲಿ ಹೊಸ ಸಿಮ್​ಗಳನ್ನು ಖರೀದಿಸಿ ಆಕ್ಟಿವ್ ಮಾಡಲಿದ್ದಾರೆ. ಹಾಗೂ ಸರ್ವೀಸ್ ಪ್ರೊವೈಡರ್​ಗಳ ನೆರವು ಪಡೆದು ಕರೆ ಮಾಹಿತಿಯನ್ನು ತರಿಸಿಕೊಳ್ಳಲಿದ್ದಾರೆ. ಆದರೆ ರಾಘು ಮೊಬೈಲ್​ನಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಮಾಡಲಾಗಿತ್ತು ಎನ್ನಲಾಗಿದೆ. ಇದನ್ನು ಪೊಲೀಸರು ಹೇಗೆ ಮರಳಿ ಪಡೆದುಕೊಳ್ಳುತ್ತಾರೆ ಎಂಬುದು ಕುತೂಹಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Sun, 23 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ