
[lazy-load-videos-and-sticky-control id=”YLcF_XOX_40″]
ಬೆಂಗಳೂರು: ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ಗೆ ಇಂದು 46ನೇ ಹುಟ್ಟುಹಬ್ಬದ ಸಂಭ್ರಮ. ವಾಡಿಕೆಯಂತೆ ಪ್ರತಿ ವರ್ಷ ಅಭಿಮಾನಿಗಳ ಜೊತೆಯಲ್ಲಿ ಕುಟ್ಟುಹಬ್ಬ ಆಚರಿಸಿಕೊಳ್ಳುತಿದ್ರು. ಈ ಹಿನ್ನೆಲೆಯಲ್ಲಿ ತಡ ರಾತ್ರಿಯಿಂದಲೇ ಪುಟ್ಟೇನಹಳ್ಳಿಯಲ್ಲಿರುವ ಸುದೀಪ್ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಪೊಲೀಸರು ನಟ ಸುದೀಪ್ ಅಭಿಮಾನಿಗಳನ್ನ ಚದುರಿಸಿದ್ದಾರೆ.
ಸುದೀಪ್ ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆ ಬೇಡವೆಂದಿದ್ದರು. ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಆದ್ರೂ ಸುದೀಪ್ ಮನೆ ಬಳಿ ಅಭಿಮಾನಿಗಳು ಜಮಾಯಿಸಿದ್ದರು. ಹೀಗಾಗಿ ಅಭಿಮಾನಿಗಳಿಗೆ ಲಾಠಿ ತೋರಿಸಿ ಕೂಡಲೇ ಸ್ಥಳದಿಂದ ತೆರಳುವಂತೆ ಪೊಲೀಸರು ಸೂಚಿಸಿದ್ರು.
Published On - 7:32 am, Wed, 2 September 20