AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾತಿಥ್ಯ ಪ್ರಕರಣ: ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ ಧನ್ವೀರ್?

Dhanveer Gowda case: ದರ್ಶನ್ ತೂಗುದೀಪ ಆಪ್ತ, ನಟ ಧನ್ವೀರ್ ಗೌಡ ಅವರನ್ನು ಈ ಹಿಂದೆ ಪೊಲೀಸರು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಲಾಗಿರುವ ಪ್ರಕರಣದಲ್ಲಿ ಈ ವಿಚಾರಣೆ ನಡೆಸಲಾಗಿತ್ತು. ಧನ್ವೀರ್ ಅವರ ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡು ಡಾಟಾ ರಿಟ್ರೀವ್ ಮಾಡಿದ್ದರು. ಆದರೆ ಈ ವೇಳೆ ಧನ್ವೀರ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದರೆ ಎಂಬ ಅನುಮಾನ ವ್ಯಕ್ತವಾಗಿದೆ.

ರಾಜಾತಿಥ್ಯ ಪ್ರಕರಣ: ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ ಧನ್ವೀರ್?
Darshan Thoogudeepa
ಮಂಜುನಾಥ ಸಿ.
|

Updated on:Dec 10, 2025 | 11:19 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ತೂಗುದೀಪ ಅವರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಬಗ್ಗೆ ಈ ಹಿಂದೆಯೇ ಪ್ರಕರಣ ದಾಖಲಾಗಿತ್ತು. ಅದಾದ ಬಳಿಕ ದರ್ಶನ್​ ಜಾಮೀನಾಗಿ ಬಳಿಕ ಮತ್ತೆ ಬಂಧನವಾಗಿದ್ದು ಪ್ರಸ್ತುತ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದರ ನಡುವೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳಿಗೆ ರಾಜಾತಿಥ್ಯ ನೀಡಲಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಮೊಬೈಲ್ ಫೋನ್ ಹಿಡಿದಿರುವ ಖೈದಿಗಳು, ಜೈಲಿನಲ್ಲಿ ಖೈದಿಗಳು ಎಣ್ಣೆ ಪಾರ್ಟಿ ಮಾಡುತ್ತಿರುವ ಚಿತ್ರ, ವಿಡಿಯೋಗಳು ಹರಿದಾಡಿದ್ದವು. ಈ ಪ್ರಕರಣ ಕುರಿತಾಗಿ ದರ್ಶನ್ ಆಪ್ತ ಧನ್ವೀರ್ ಅನ್ನು ವಿಚಾರಣೆ ಮಾಡಲಾಗಿತ್ತು. ಆದರೆ ಈಗ ಧನ್ವೀರ್, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದರೆ ಎಂಬ ಅನುಮಾನ ಮೂಡಿದೆ.

ಜೈಲಿನಲ್ಲಿ ಇತರೆ ಖೈದಿಗಳಿಗೆ ವಿಶೇಷ ಸವಲತ್ತು ನೀಡುತ್ತಿರುವ ಚಿತ್ರ ಹಾಗೂ ವಿಡಿಯೋಗಳನ್ನು ಧನ್ವೀರ್ ಅವರೇ ಹಂಚಿಕೊಂಡಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು ಈ ಬಗ್ಗೆ ಧನ್ವೀರ್ ಅವರ ವಿಚಾರಣೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ವೀರ್ ಅವರ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದ ಪೊಲೀಸರು ಡಾಟಾ ರಿಟ್ರೀವ್ ಮಾಡಲು ಸೈಬರ್ ಸೆಲ್​​ನ ಲ್ಯಾಬ್​​ಗೆ ಕಳುಹಿಸಿದ್ದರು. ಇದೀಗ ಲ್ಯಾಬ್ ವರದಿ ಬಂದಾಗಿದೆ. ಆದರೆ ಧನ್ವೀರ್ ಮೊಬೈಲ್​​ನಿಂದ ಯಾವುದೇ ಡಾಟಾ ರಿಕವರಿ ಆಗಿಲ್ಲ.

ಪೊಲೀಸರಿಗೆ ಮೊಬೈಲ್ ನೀಡುವ ಮೊದಲೇ ಧನ್ವೀರ್ ಅವರು ಫೋನಿನಲ್ಲಿದ್ದ ಎಲ್ಲ ಡಾಟಾ ಅನ್ನು ಎರೇಸ್ ಮಾಡಿದ್ದರೆ ಎಂಬ ಅನುಮಾನ ಮೂಡಿದೆ. ಅಥವಾ ಬೇರೊಂದು ಫೋನನ್ನು ಪೊಲೀಸರಿಗೆ ನೀಡಿದರೆ ಎಂಬ ಅನುಮಾನವೂ ಪೊಲೀಸರಿಗಿದೆ. ಪೊಲೀಸರು ಇದೀಗ ಎಫ್​​ಎಸ್​​ಎಲ್​ ವರದಿಗಾಗಿ ನಿರೀಕ್ಷೆ ಮಾಡುತ್ತಿದ್ದಾರೆ. ಎಫ್​​ಎಸ್​​ಎಲ್ ವರದಿ ಬಂದ ಬಳಿಕ ಚಾರ್ಜ್​​ಶೀಟ್​​ನಲ್ಲಿ ಧನ್ವೀರ್ ವಿರುದ್ಧ ಸಾಕ್ಷ್ಯನಾಶದ ಕೇಸು ದಾಖಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:ನೀವು ನನ್ನ ಶಕ್ತಿ; ‘ಡೆವಿಲ್’ ರಿಲೀಸ್​​ಗೂ ಮೊದಲು ಅಭಿಮಾನಿಗಳಿಗೆ ದರ್ಶನ್ ಪತ್ರ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದಾಗಿನಿಂದಲೂ ಧನ್ವೀರ್ ಗೌಡ, ದರ್ಶನ್ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ದರ್ಶನ್​​ಗೆ ಬಹಳ ಆಪ್ತರಾಗಿರುವ ಧನ್ವೀರ್ ಗೌಡ, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ನ್ಯಾಯಾಲಯದ ವಿಚಾರಣೆ, ವಕೀಲರ ನೇಮಕ ಇನ್ನಿತರೆ ವಿಷಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್, ಬಳ್ಳಾರಿ ಜೈಲಿನಲ್ಲಿದ್ದಾಗಲೂ ಸಹ ಕೆಲವು ಬಾರಿ ಜೈಲಿಗೆ ಭೇಟಿ ನೀಡಿದ್ದರು. ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗಲೂ ಅವರ ಭೇಟಿ ಮಾಡುತ್ತಲೇ ಇರುತ್ತಾರೆ. ಆದರೆ ಇದೀಗ ಅವರ ಕೊರಳಿಗೆ ಪ್ರಕರಣವೊಂದು ಸುತ್ತಿಕೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Wed, 10 December 25

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!