AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದರಿಂದಲೇ ಈ ದುರಂತ ನಡೆಯಿತು. ಹಾಗಾದರೆ ಆ ಮೆಸೇಜ್​ ಏನು ಹಾಗೂ ಅದಕ್ಕೆ ಪವಿತ್ರಾ ಗೌಡ ಯಾವ ರೀತಿ ಪ್ರತಿಕ್ರಿಯೆ ನೀಡಿದ್ದರು ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ರೇಣುಕಾ ಸ್ವಾಮಿ ಮೊಬೈಲ್​ ರಿಟ್ರೀವ್​ ಮಾಡಿದ ಬಳಿಕ ಎಲ್ಲ ವಿವರಗಳು ಪೊಲೀಸರಿಗೆ ಸಿಕ್ಕಿವೆ.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ
ರೇಣುಕಾಸ್ವಾಮಿ, ಪವಿತ್ರಾ ಗೌಡ
Kiran HV
| Edited By: |

Updated on: Aug 02, 2024 | 7:02 PM

Share

ದೇಶಾದ್ಯಂತ ಸುದ್ದಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರು ಜೈಲುವಾಸ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣದಿಂದಲೇ ಈ ಕಿರಿಕ್​ ಶುರುವಾಗಿದ್ದು. ಅಂತಿಮವಾಗಿ ಅದು ಕೊಲೆಯಲ್ಲಿ ಅಂತ್ಯವಾಯ್ತು. ಇಡೀ ದುರಂತಕ್ಕೆ ಕಾರಣವಾದ ಆ ಮೆಸೇಜ್​ಗಳು ಯಾವವು ಎಂಬುದು ಈಗ ಪೊಲೀಸರಿಗೆ ಲಭ್ಯವಾಗಿವೆ. ಈ ಹೈಪ್ರೊಫೈಲ್​ ಕೇಸ್​ಗೆ ಪ್ರಮುಖ ಸಾಕ್ಷಿಯಾಗಿ ಈ ಮಾಹಿತಿ ಸಿಕ್ಕಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ.

ಕೊಲೆ ಕೇಸ್​​ನಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್​ ಹಾಗೂ ಗ್ಯಾಂಗ್​ ವಿರುದ್ಧ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಅನೇಕ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿ ಮೊಬೈಲ್‌ ಅನ್ನು ಡಿ ಗ್ಯಾಂಗ್​ನವರು ಮೋರಿಯಲ್ಲಿ ಎಸೆದಿದ್ದರು. ಆ ಮೊಬೈಲ್​ಗಾಗಿ ಪೊಲೀಸರು ಸಿಕ್ಕಾಪಟ್ಟೆ ಹುಡುಕಾಟ ನಡೆಸಿದ್ದರು. ಕಡೆಗೂ ಪೊಲೀಸರಿಗೆ ಆ ಮೊಬೈಲ್​ನಲ್ಲಿದ್ದ ಸಂಪೂರ್ಣ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ದರ್ಶನ್​ ಮನೆ ಸಿಸಿಟಿವಿಯಲ್ಲಿ ಶಾಕಿಂಗ್​ ವಿಚಾರ ಬಯಲು; ಕೊಲೆ ಕೇಸ್​ನಲ್ಲಿ ನಟನಿಗೆ ಹೆಚ್ಚಿತು ಸಂಕಷ್ಟ

ರೇಣುಕಾ ಸ್ವಾಮಿಯ ಮೊಬೈಲ್​ ರಿಟ್ರೀವ್​ನಿಂದಾಗಿ ದರ್ಶನ್​ಗೆ ಕಂಟಕ ಎದುರಾಗಿದೆ. ರೇಣುಕಾ ಸ್ವಾಮಿ ಬಳಸಿದ್ದ ನಂಬರ್​ನಲ್ಲೇ ಹೊಸ ಸಿಮ್​ ಪಡೆದುಕೊಂಡು ಡೇಟಾ ರಿಟ್ರೀವ್​ ಮಾಡಲಾಯಿತು. ಆತ ಬಳಕೆ ಮಾಡಿದ್ದ ವಾಟ್ಸಪ್ ,ಇನ್‌ಸ್ಟಾಗ್ರಾಂ, ಫೇಸ್‌ ಬುಕ್ ಮುಂತಾದ ಆ್ಯಪ್​ಗಳ ಮಾಹಿತಿ ಈಗ ಪೊಲೀಸರ ಕೈ ಸೇರಿದೆ. ಯಾರಿಗೆಲ್ಲ ಆತ ಸಂದೇಶ ಕಳಿಸಿದ್ದ? ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಕಳಿಸಿದ ಮೆಸೇಜ್​ ಏನು? ಅದಕ್ಕೆ ಪವಿತ್ರಾ ನೀಡಿದ್ದ ರಿಪ್ಲೇ ಏನು ಎಂಬುದು ಪೊಲೀಸರಿಗೆ ಗೊತ್ತಾಗಿದೆ.

ಇದನ್ನೂ ಓದಿ: ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..

ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೇಜರ್ ಸಾಕ್ಷಿ ಆಗಲಿದೆ. ಜೊತೆಗೆ, ವಾಹನದಲ್ಲಿ ಮೃತದೇಹ ಸಾಗಾಟ ಮಾಡಿದ್ದವರ ಫಿಂಗರ್ ಪ್ರಿಂಟ್ ಹೊಂದಿಕೆ ಆಗಿದೆ. ಕೊಲೆಯಾದ ಮೂರು ದಿನಗಳ ಸಿಸಿಟಿವಿ ದೃಶ್ಯಗಳನ್ನು ಕೂಡ ರಿಟ್ರೀವ್​ ಮಾಡಲಾಗಿದೆ. ದರ್ಶನ್ ಮನೆಗೆ ಸಿಸಿಟಿವಿಯಲ್ಲಿ ಜೂನ್ 8, 9 ಹಾಗೂ 10ರಂದು ಸೆರೆಯಾದ ದೃಶ್ಯಗಳನ್ನು ಪೊಲೀಸರು ರಿಟ್ರೀವ್​ ಮಾಡಿದ್ದಾರೆ. ಸಾಕ್ಷಿ ನಾಶದ ಉದ್ದೇಶದಿಂದ ಡಿಲೀಟ್ ಆಗಿದ್ದ ದೃಶ್ಯಗಳೆಲ್ಲ ಪೊಲೀಸರಿಗೆ ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Kiran HV
Kiran HV
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!