AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದರಿಂದಲೇ ಈ ದುರಂತ ನಡೆಯಿತು. ಹಾಗಾದರೆ ಆ ಮೆಸೇಜ್​ ಏನು ಹಾಗೂ ಅದಕ್ಕೆ ಪವಿತ್ರಾ ಗೌಡ ಯಾವ ರೀತಿ ಪ್ರತಿಕ್ರಿಯೆ ನೀಡಿದ್ದರು ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ರೇಣುಕಾ ಸ್ವಾಮಿ ಮೊಬೈಲ್​ ರಿಟ್ರೀವ್​ ಮಾಡಿದ ಬಳಿಕ ಎಲ್ಲ ವಿವರಗಳು ಪೊಲೀಸರಿಗೆ ಸಿಕ್ಕಿವೆ.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ
ರೇಣುಕಾಸ್ವಾಮಿ, ಪವಿತ್ರಾ ಗೌಡ
Kiran HV
| Edited By: |

Updated on: Aug 02, 2024 | 7:02 PM

Share

ದೇಶಾದ್ಯಂತ ಸುದ್ದಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರು ಜೈಲುವಾಸ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣದಿಂದಲೇ ಈ ಕಿರಿಕ್​ ಶುರುವಾಗಿದ್ದು. ಅಂತಿಮವಾಗಿ ಅದು ಕೊಲೆಯಲ್ಲಿ ಅಂತ್ಯವಾಯ್ತು. ಇಡೀ ದುರಂತಕ್ಕೆ ಕಾರಣವಾದ ಆ ಮೆಸೇಜ್​ಗಳು ಯಾವವು ಎಂಬುದು ಈಗ ಪೊಲೀಸರಿಗೆ ಲಭ್ಯವಾಗಿವೆ. ಈ ಹೈಪ್ರೊಫೈಲ್​ ಕೇಸ್​ಗೆ ಪ್ರಮುಖ ಸಾಕ್ಷಿಯಾಗಿ ಈ ಮಾಹಿತಿ ಸಿಕ್ಕಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ.

ಕೊಲೆ ಕೇಸ್​​ನಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್​ ಹಾಗೂ ಗ್ಯಾಂಗ್​ ವಿರುದ್ಧ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಅನೇಕ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿ ಮೊಬೈಲ್‌ ಅನ್ನು ಡಿ ಗ್ಯಾಂಗ್​ನವರು ಮೋರಿಯಲ್ಲಿ ಎಸೆದಿದ್ದರು. ಆ ಮೊಬೈಲ್​ಗಾಗಿ ಪೊಲೀಸರು ಸಿಕ್ಕಾಪಟ್ಟೆ ಹುಡುಕಾಟ ನಡೆಸಿದ್ದರು. ಕಡೆಗೂ ಪೊಲೀಸರಿಗೆ ಆ ಮೊಬೈಲ್​ನಲ್ಲಿದ್ದ ಸಂಪೂರ್ಣ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ದರ್ಶನ್​ ಮನೆ ಸಿಸಿಟಿವಿಯಲ್ಲಿ ಶಾಕಿಂಗ್​ ವಿಚಾರ ಬಯಲು; ಕೊಲೆ ಕೇಸ್​ನಲ್ಲಿ ನಟನಿಗೆ ಹೆಚ್ಚಿತು ಸಂಕಷ್ಟ

ರೇಣುಕಾ ಸ್ವಾಮಿಯ ಮೊಬೈಲ್​ ರಿಟ್ರೀವ್​ನಿಂದಾಗಿ ದರ್ಶನ್​ಗೆ ಕಂಟಕ ಎದುರಾಗಿದೆ. ರೇಣುಕಾ ಸ್ವಾಮಿ ಬಳಸಿದ್ದ ನಂಬರ್​ನಲ್ಲೇ ಹೊಸ ಸಿಮ್​ ಪಡೆದುಕೊಂಡು ಡೇಟಾ ರಿಟ್ರೀವ್​ ಮಾಡಲಾಯಿತು. ಆತ ಬಳಕೆ ಮಾಡಿದ್ದ ವಾಟ್ಸಪ್ ,ಇನ್‌ಸ್ಟಾಗ್ರಾಂ, ಫೇಸ್‌ ಬುಕ್ ಮುಂತಾದ ಆ್ಯಪ್​ಗಳ ಮಾಹಿತಿ ಈಗ ಪೊಲೀಸರ ಕೈ ಸೇರಿದೆ. ಯಾರಿಗೆಲ್ಲ ಆತ ಸಂದೇಶ ಕಳಿಸಿದ್ದ? ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಕಳಿಸಿದ ಮೆಸೇಜ್​ ಏನು? ಅದಕ್ಕೆ ಪವಿತ್ರಾ ನೀಡಿದ್ದ ರಿಪ್ಲೇ ಏನು ಎಂಬುದು ಪೊಲೀಸರಿಗೆ ಗೊತ್ತಾಗಿದೆ.

ಇದನ್ನೂ ಓದಿ: ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..

ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೇಜರ್ ಸಾಕ್ಷಿ ಆಗಲಿದೆ. ಜೊತೆಗೆ, ವಾಹನದಲ್ಲಿ ಮೃತದೇಹ ಸಾಗಾಟ ಮಾಡಿದ್ದವರ ಫಿಂಗರ್ ಪ್ರಿಂಟ್ ಹೊಂದಿಕೆ ಆಗಿದೆ. ಕೊಲೆಯಾದ ಮೂರು ದಿನಗಳ ಸಿಸಿಟಿವಿ ದೃಶ್ಯಗಳನ್ನು ಕೂಡ ರಿಟ್ರೀವ್​ ಮಾಡಲಾಗಿದೆ. ದರ್ಶನ್ ಮನೆಗೆ ಸಿಸಿಟಿವಿಯಲ್ಲಿ ಜೂನ್ 8, 9 ಹಾಗೂ 10ರಂದು ಸೆರೆಯಾದ ದೃಶ್ಯಗಳನ್ನು ಪೊಲೀಸರು ರಿಟ್ರೀವ್​ ಮಾಡಿದ್ದಾರೆ. ಸಾಕ್ಷಿ ನಾಶದ ಉದ್ದೇಶದಿಂದ ಡಿಲೀಟ್ ಆಗಿದ್ದ ದೃಶ್ಯಗಳೆಲ್ಲ ಪೊಲೀಸರಿಗೆ ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Kiran HV
Kiran HV
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್