AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದರಿಂದಲೇ ಈ ದುರಂತ ನಡೆಯಿತು. ಹಾಗಾದರೆ ಆ ಮೆಸೇಜ್​ ಏನು ಹಾಗೂ ಅದಕ್ಕೆ ಪವಿತ್ರಾ ಗೌಡ ಯಾವ ರೀತಿ ಪ್ರತಿಕ್ರಿಯೆ ನೀಡಿದ್ದರು ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ರೇಣುಕಾ ಸ್ವಾಮಿ ಮೊಬೈಲ್​ ರಿಟ್ರೀವ್​ ಮಾಡಿದ ಬಳಿಕ ಎಲ್ಲ ವಿವರಗಳು ಪೊಲೀಸರಿಗೆ ಸಿಕ್ಕಿವೆ.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ
ರೇಣುಕಾಸ್ವಾಮಿ, ಪವಿತ್ರಾ ಗೌಡ
Kiran HV
| Updated By: ಮದನ್​ ಕುಮಾರ್​|

Updated on: Aug 02, 2024 | 7:02 PM

Share

ದೇಶಾದ್ಯಂತ ಸುದ್ದಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರು ಜೈಲುವಾಸ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣದಿಂದಲೇ ಈ ಕಿರಿಕ್​ ಶುರುವಾಗಿದ್ದು. ಅಂತಿಮವಾಗಿ ಅದು ಕೊಲೆಯಲ್ಲಿ ಅಂತ್ಯವಾಯ್ತು. ಇಡೀ ದುರಂತಕ್ಕೆ ಕಾರಣವಾದ ಆ ಮೆಸೇಜ್​ಗಳು ಯಾವವು ಎಂಬುದು ಈಗ ಪೊಲೀಸರಿಗೆ ಲಭ್ಯವಾಗಿವೆ. ಈ ಹೈಪ್ರೊಫೈಲ್​ ಕೇಸ್​ಗೆ ಪ್ರಮುಖ ಸಾಕ್ಷಿಯಾಗಿ ಈ ಮಾಹಿತಿ ಸಿಕ್ಕಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ.

ಕೊಲೆ ಕೇಸ್​​ನಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್​ ಹಾಗೂ ಗ್ಯಾಂಗ್​ ವಿರುದ್ಧ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಅನೇಕ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿ ಮೊಬೈಲ್‌ ಅನ್ನು ಡಿ ಗ್ಯಾಂಗ್​ನವರು ಮೋರಿಯಲ್ಲಿ ಎಸೆದಿದ್ದರು. ಆ ಮೊಬೈಲ್​ಗಾಗಿ ಪೊಲೀಸರು ಸಿಕ್ಕಾಪಟ್ಟೆ ಹುಡುಕಾಟ ನಡೆಸಿದ್ದರು. ಕಡೆಗೂ ಪೊಲೀಸರಿಗೆ ಆ ಮೊಬೈಲ್​ನಲ್ಲಿದ್ದ ಸಂಪೂರ್ಣ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ದರ್ಶನ್​ ಮನೆ ಸಿಸಿಟಿವಿಯಲ್ಲಿ ಶಾಕಿಂಗ್​ ವಿಚಾರ ಬಯಲು; ಕೊಲೆ ಕೇಸ್​ನಲ್ಲಿ ನಟನಿಗೆ ಹೆಚ್ಚಿತು ಸಂಕಷ್ಟ

ರೇಣುಕಾ ಸ್ವಾಮಿಯ ಮೊಬೈಲ್​ ರಿಟ್ರೀವ್​ನಿಂದಾಗಿ ದರ್ಶನ್​ಗೆ ಕಂಟಕ ಎದುರಾಗಿದೆ. ರೇಣುಕಾ ಸ್ವಾಮಿ ಬಳಸಿದ್ದ ನಂಬರ್​ನಲ್ಲೇ ಹೊಸ ಸಿಮ್​ ಪಡೆದುಕೊಂಡು ಡೇಟಾ ರಿಟ್ರೀವ್​ ಮಾಡಲಾಯಿತು. ಆತ ಬಳಕೆ ಮಾಡಿದ್ದ ವಾಟ್ಸಪ್ ,ಇನ್‌ಸ್ಟಾಗ್ರಾಂ, ಫೇಸ್‌ ಬುಕ್ ಮುಂತಾದ ಆ್ಯಪ್​ಗಳ ಮಾಹಿತಿ ಈಗ ಪೊಲೀಸರ ಕೈ ಸೇರಿದೆ. ಯಾರಿಗೆಲ್ಲ ಆತ ಸಂದೇಶ ಕಳಿಸಿದ್ದ? ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಕಳಿಸಿದ ಮೆಸೇಜ್​ ಏನು? ಅದಕ್ಕೆ ಪವಿತ್ರಾ ನೀಡಿದ್ದ ರಿಪ್ಲೇ ಏನು ಎಂಬುದು ಪೊಲೀಸರಿಗೆ ಗೊತ್ತಾಗಿದೆ.

ಇದನ್ನೂ ಓದಿ: ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..

ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೇಜರ್ ಸಾಕ್ಷಿ ಆಗಲಿದೆ. ಜೊತೆಗೆ, ವಾಹನದಲ್ಲಿ ಮೃತದೇಹ ಸಾಗಾಟ ಮಾಡಿದ್ದವರ ಫಿಂಗರ್ ಪ್ರಿಂಟ್ ಹೊಂದಿಕೆ ಆಗಿದೆ. ಕೊಲೆಯಾದ ಮೂರು ದಿನಗಳ ಸಿಸಿಟಿವಿ ದೃಶ್ಯಗಳನ್ನು ಕೂಡ ರಿಟ್ರೀವ್​ ಮಾಡಲಾಗಿದೆ. ದರ್ಶನ್ ಮನೆಗೆ ಸಿಸಿಟಿವಿಯಲ್ಲಿ ಜೂನ್ 8, 9 ಹಾಗೂ 10ರಂದು ಸೆರೆಯಾದ ದೃಶ್ಯಗಳನ್ನು ಪೊಲೀಸರು ರಿಟ್ರೀವ್​ ಮಾಡಿದ್ದಾರೆ. ಸಾಕ್ಷಿ ನಾಶದ ಉದ್ದೇಶದಿಂದ ಡಿಲೀಟ್ ಆಗಿದ್ದ ದೃಶ್ಯಗಳೆಲ್ಲ ಪೊಲೀಸರಿಗೆ ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ