AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದರಿಂದಲೇ ಈ ದುರಂತ ನಡೆಯಿತು. ಹಾಗಾದರೆ ಆ ಮೆಸೇಜ್​ ಏನು ಹಾಗೂ ಅದಕ್ಕೆ ಪವಿತ್ರಾ ಗೌಡ ಯಾವ ರೀತಿ ಪ್ರತಿಕ್ರಿಯೆ ನೀಡಿದ್ದರು ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ರೇಣುಕಾ ಸ್ವಾಮಿ ಮೊಬೈಲ್​ ರಿಟ್ರೀವ್​ ಮಾಡಿದ ಬಳಿಕ ಎಲ್ಲ ವಿವರಗಳು ಪೊಲೀಸರಿಗೆ ಸಿಕ್ಕಿವೆ.

ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್​ಗೆ ಪವಿತ್ರಾ ಗೌಡ ಮಾಡಿದ ರಿಪ್ಲೇ ಏನು? ಪೊಲೀಸರಿಗೆ ಸಿಕ್ತು ಪಕ್ಕಾ ಮಾಹಿತಿ
ರೇಣುಕಾಸ್ವಾಮಿ, ಪವಿತ್ರಾ ಗೌಡ
ಕಿರಣ ಹೆಚ್​. ವಿ.
| Edited By: |

Updated on: Aug 02, 2024 | 7:02 PM

Share

ದೇಶಾದ್ಯಂತ ಸುದ್ದಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರು ಜೈಲುವಾಸ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣದಿಂದಲೇ ಈ ಕಿರಿಕ್​ ಶುರುವಾಗಿದ್ದು. ಅಂತಿಮವಾಗಿ ಅದು ಕೊಲೆಯಲ್ಲಿ ಅಂತ್ಯವಾಯ್ತು. ಇಡೀ ದುರಂತಕ್ಕೆ ಕಾರಣವಾದ ಆ ಮೆಸೇಜ್​ಗಳು ಯಾವವು ಎಂಬುದು ಈಗ ಪೊಲೀಸರಿಗೆ ಲಭ್ಯವಾಗಿವೆ. ಈ ಹೈಪ್ರೊಫೈಲ್​ ಕೇಸ್​ಗೆ ಪ್ರಮುಖ ಸಾಕ್ಷಿಯಾಗಿ ಈ ಮಾಹಿತಿ ಸಿಕ್ಕಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ.

ಕೊಲೆ ಕೇಸ್​​ನಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್​ ಹಾಗೂ ಗ್ಯಾಂಗ್​ ವಿರುದ್ಧ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಅನೇಕ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿ ಮೊಬೈಲ್‌ ಅನ್ನು ಡಿ ಗ್ಯಾಂಗ್​ನವರು ಮೋರಿಯಲ್ಲಿ ಎಸೆದಿದ್ದರು. ಆ ಮೊಬೈಲ್​ಗಾಗಿ ಪೊಲೀಸರು ಸಿಕ್ಕಾಪಟ್ಟೆ ಹುಡುಕಾಟ ನಡೆಸಿದ್ದರು. ಕಡೆಗೂ ಪೊಲೀಸರಿಗೆ ಆ ಮೊಬೈಲ್​ನಲ್ಲಿದ್ದ ಸಂಪೂರ್ಣ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ದರ್ಶನ್​ ಮನೆ ಸಿಸಿಟಿವಿಯಲ್ಲಿ ಶಾಕಿಂಗ್​ ವಿಚಾರ ಬಯಲು; ಕೊಲೆ ಕೇಸ್​ನಲ್ಲಿ ನಟನಿಗೆ ಹೆಚ್ಚಿತು ಸಂಕಷ್ಟ

ರೇಣುಕಾ ಸ್ವಾಮಿಯ ಮೊಬೈಲ್​ ರಿಟ್ರೀವ್​ನಿಂದಾಗಿ ದರ್ಶನ್​ಗೆ ಕಂಟಕ ಎದುರಾಗಿದೆ. ರೇಣುಕಾ ಸ್ವಾಮಿ ಬಳಸಿದ್ದ ನಂಬರ್​ನಲ್ಲೇ ಹೊಸ ಸಿಮ್​ ಪಡೆದುಕೊಂಡು ಡೇಟಾ ರಿಟ್ರೀವ್​ ಮಾಡಲಾಯಿತು. ಆತ ಬಳಕೆ ಮಾಡಿದ್ದ ವಾಟ್ಸಪ್ ,ಇನ್‌ಸ್ಟಾಗ್ರಾಂ, ಫೇಸ್‌ ಬುಕ್ ಮುಂತಾದ ಆ್ಯಪ್​ಗಳ ಮಾಹಿತಿ ಈಗ ಪೊಲೀಸರ ಕೈ ಸೇರಿದೆ. ಯಾರಿಗೆಲ್ಲ ಆತ ಸಂದೇಶ ಕಳಿಸಿದ್ದ? ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಕಳಿಸಿದ ಮೆಸೇಜ್​ ಏನು? ಅದಕ್ಕೆ ಪವಿತ್ರಾ ನೀಡಿದ್ದ ರಿಪ್ಲೇ ಏನು ಎಂಬುದು ಪೊಲೀಸರಿಗೆ ಗೊತ್ತಾಗಿದೆ.

ಇದನ್ನೂ ಓದಿ: ದರ್ಶನ್​ ಜೈಲುವಾಸ ಮುಂದುವರಿಯಲು ಪೊಲೀಸರು ಕೋರ್ಟ್​ಗೆ ನೀಡಿದ ಮುಖ್ಯ ಕಾರಣಗಳು ಇಲ್ಲಿವೆ..

ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೇಜರ್ ಸಾಕ್ಷಿ ಆಗಲಿದೆ. ಜೊತೆಗೆ, ವಾಹನದಲ್ಲಿ ಮೃತದೇಹ ಸಾಗಾಟ ಮಾಡಿದ್ದವರ ಫಿಂಗರ್ ಪ್ರಿಂಟ್ ಹೊಂದಿಕೆ ಆಗಿದೆ. ಕೊಲೆಯಾದ ಮೂರು ದಿನಗಳ ಸಿಸಿಟಿವಿ ದೃಶ್ಯಗಳನ್ನು ಕೂಡ ರಿಟ್ರೀವ್​ ಮಾಡಲಾಗಿದೆ. ದರ್ಶನ್ ಮನೆಗೆ ಸಿಸಿಟಿವಿಯಲ್ಲಿ ಜೂನ್ 8, 9 ಹಾಗೂ 10ರಂದು ಸೆರೆಯಾದ ದೃಶ್ಯಗಳನ್ನು ಪೊಲೀಸರು ರಿಟ್ರೀವ್​ ಮಾಡಿದ್ದಾರೆ. ಸಾಕ್ಷಿ ನಾಶದ ಉದ್ದೇಶದಿಂದ ಡಿಲೀಟ್ ಆಗಿದ್ದ ದೃಶ್ಯಗಳೆಲ್ಲ ಪೊಲೀಸರಿಗೆ ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ