AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಪೊಲೀಸರ ವಶಕ್ಕೆ

‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಗುರುತಿಸಿಕೊಂಡ ನಟ ಮಡೆನೂರು ಮನು ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಡೆನೂರು ಮನು ವಿರುದ್ಧ ನಟಿಯೊಬ್ಬರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗಾಗಿ ಮನು ಅವರನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಪೊಲೀಸರ ವಶಕ್ಕೆ
Madenur Manu
ಮದನ್​ ಕುಮಾರ್​
|

Updated on:May 22, 2025 | 3:48 PM

Share

ಕಿರುತೆರೆ ಕಲಾವಿದ ಮಡೆನೂರು ಮನು (Madenur Manu) ವಿರುದ್ಧ ಅತ್ಯಾಚಾರ ಆರೋಪ ಎದುರಾಗಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇಲೆ ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ಮಡೆನೂರಿನಲ್ಲಿ ಮನು ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರಿಂದ (Bengaluru Police) ವಶಕ್ಕೆ ಪಡೆಯಲಾಗಿದೆ. ಮನು ಅವರನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಕಾನೂನು ಪ್ರಕ್ರಿಯೆ ಮುಂದುವರಿಸಲಾಗುವುದು. ಬಳಿಕ ಇಂದು (ಮೇ 22) ರಾತ್ರಿ ಬಂಧಿಸಿ ಜಡ್ಜ್‌ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.

ಮಡೆನೂರು ಮನು ಮತ್ತು ಯುವತಿ ಮಧ್ಯೆ 2018ರಲ್ಲಿ ಪರಿಚಯ ಬೆಳೆದಿತ್ತು. ಮನು ಅವರೇ ಯುವತಿಗೆ ಬಾಡಿಗೆ ಮನೆ ಹುಡುಕಿಕೊಟ್ಟಿದ್ದ. ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದರು. ಯುವತಿ ಜೊತೆಗೆ ಆಪ್ತತೆ ಬೆಳೆಸಿಕೊಂಡಿದ್ದ ಮನುಗೆ ಈ ಮೊದಲೇ ಮದುವೆ ಆಗಿ ಒಂದು ಮಗು ಸಹ ಇತ್ತು! ಮನು ಜೊತೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದಾಗ ಅತ್ಯಾಚಾರ ನಡೆದಿದೆ ಎಂದು ಯುವತಿ ಆರೋಪ ಹೊರಿಸಿದ್ದಾರೆ.

ಪೊಲೀಸರ ವಶಕ್ಕೆ ಮಡೆನೂರು ಮನು:

ಇದನ್ನೂ ಓದಿ
Image
ಎರಡು ಬಾರಿ ಪ್ರೆಗ್ನೆಂಟ್ ಆಗಿದ್ದೆ; ‘ಕಾಮಿಡಿ ಕಿಲಾಡಿ’ ಕಲಾವಿದರ ಜಗಳ ಬೀದಿಗೆ
Image
ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ; ನಟ ಮಡೆನೂರು ಮನು ವಿರುದ್ಧ FIR
Image
ಮೇ 23ಕ್ಕೆ ಕುಲದಲ್ಲಿ ಕೀಳ್ಯಾವುದೋ ರಿಲೀಸ್; ಕಾಮಿಡಿ ಕಿಲಾಡಿ ನಟನ ಹೊಸ ಜರ್ನಿ
Image
‘ಕುಲದಲ್ಲಿ ಕೀಳ್ಯಾವುದೋ’ ಟೈಟಲ್ ಸಿಕ್ಕಿದ್ದು ಅಣ್ಣಾವ್ರ ಆಶೀರ್ವಾದ: ಮಡೆನೂರು

‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ಮಡೆನೂರು ಮನು ಅವರು ಹೀರೋ ಆಗಿ ನಟಿಸಿದ್ದಾರೆ. ಆ ಸಿನಿಮಾ ಮೇ 23ರಂದು ಬಿಡುಗಡೆ ಆಗಲಿದೆ. ಬಿಡುಗಡೆಗೆ ಇನ್ನು ಒಂದು ದಿನ ಬಾಕಿ ಇದೆ ಎನ್ನುವಾಗ ಅವರಿಗೆ ವಿವಾದ ಎದುರಾಗಿದೆ. ಸಿನಿಮಾದ ರಿಲೀಸ್ ಸಂಭ್ರಮದಲ್ಲಿ ಭಾಗಿಯಾಗಬೇಕಿದ್ದ ಅವರು ಈಗ ಪೊಲೀಸರ ಅತಿಥಿ ಆಗುವಂತಾಗಿದೆ. ತಮ್ಮ ಮೇಲಿನ ಆರೋಪಗಳಿಗೆ ಮನು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ಅತ್ಯಾಚಾರ ಆಗಿದೆ, ಎರಡು ಬಾರಿ ಪ್ರೆಗ್ನೆಂಟ್ ಆಗಿದ್ದೆ’; ‘ಕಾಮಿಡಿ ಕಿಲಾಡಿ’ ಕಲಾವಿದರ ಜಗಳ ಬೀದಿಗೆ

ಫೇಸ್ ಬುಕ್ ಲೈವ್ ಮೂಲಕ ಮಡೆನೂರು ಮನು ಸ್ಪಷ್ಟನೆ ನೀಡಿದ್ದಾರೆ. ‘ಹರಿದಾಡ್ತಿರೋ ವಿಚಾರದ ಬಗ್ಗೆ ಸಾಕ್ಷಿ ಸಮೇತ ಕ್ಲಾರಿಟಿ ಕೊಡುತ್ತೇನೆ. ಇದರ ಹಿಂದೆ ಯಾರೆಲ್ಲ ಇದಾರೆ ಎಂಬುದನ್ನು ಹೇಳುತ್ತೇನೆ. ಸಿನಿಮಾ ನಿಲ್ಲಿಸ್ಬೇಕು ಅಂತ ಒದ್ದಾಡ್ತಿದಾರೆ. ಈ ಸಿನಿಮಾ ಪ್ರಮೋಷನ್ ನೋಡಿ ಯಾರೆಲ್ಲ ನನಗೆ ಬೆದರಿಕೆ ಹಾಕ್ತಿದಾರೆ ಎಂಬುದನ್ನು ಸಾಕ್ಷಿ ಸಮೇತ ತೋರಿಸುತ್ತೇನೆ. ಕಷ್ಟಪಟ್ಟು ಸಿನಿಮಾ ಮಾಡಿದೀವಿ. ಸಿನಿಮಾಗೆ ಯಾವುದೇ ತೊಂದರೆ ಆಗಬಾರದು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Thu, 22 May 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!