ಆರೋಪಿ ಬದಲು ಸಾಕ್ಷಿ ಮಾಡುವಂತೆ ದರ್ಶನ್ ಪ್ರಕರಣದಲ್ಲಿ ರಾಜಕಾರಣಿಗಳ ಒತ್ತಡ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಅನ್ನು ಬಂಧಿಸದಂತೆ ಪೊಲೀಸರ ಮೇಲೆ ಕೆಲ ರಾಜಕಾರಣಿಗಳು, ಸ್ಯಾಂಡಲ್​ವುಡ್​ನ ಕೆಲವು ದೊಡ್ಡ ವ್ಯಕ್ತಿಗಳು ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಆರೋಪಿ ಬದಲು ಸಾಕ್ಷಿ ಮಾಡುವಂತೆ ದರ್ಶನ್ ಪ್ರಕರಣದಲ್ಲಿ ರಾಜಕಾರಣಿಗಳ ಒತ್ತಡ
Follow us
|

Updated on:Jun 11, 2024 | 4:00 PM

ಅಭಿಮಾನಿಯನ್ನೇ ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ (Darshan Thoogudeepa) ಅನ್ನು ಪೊಲೀಸರು ಬಂಧಿಸಿದ್ದಾರೆ. ಇಂದು (ಜೂನ್ 11) ಬೆಳಿಗ್ಗೆ ಮೈಸೂರಿಗೆ ತೆರಳಿ ರ್ಯಾಡಿಸನ್ ಹೋಟೆಲ್​ನಲ್ಲಿ ತಂಗಿದ್ದ ದರ್ಶನ್ ಅನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಬೆಂಗಳೂರಿಗೆ ಕರೆಸಿ ವಿಚಾರಣೆ ನಡೆಸಿದ ಬಳಿಕ ದರ್ಶನ್ ಅನ್ನು ಬಂಧಿಸಿದ್ದಾರೆ. ಸಂಜೆ ನಾಲ್ಕು ಗಂಟೆ ವೇಳೆಗೆ ದರ್ಶನ್​ರ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ಆರಂಭಿಸಿದ್ದಾರೆ. ಆದರೆ ದರ್ಶನ್ ಪ್ರಕರಣದಲ್ಲಿ ರಾಜಕಾರಣಿಗಳು ಕೆಲವರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ (ಜೂನ್ 10) ಯಿಂದಲೇ ಈ ಪ್ರಕರಣ ಕುರಿತಾಗಿ ಪೊಲೀಸರ ಮೇಲೆ ಕೆಲ ರಾಜಕಾರಣಿಗಳು ಹಾಗೂ ಸ್ಯಾಂಡಲ್​ವುಡ್​ನ ಪ್ರಮುಖರು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅನ್ನು ಆರೋಪಿಯ ಬದಲಿಗೆ ಸಾಕ್ಷಿಯನ್ನಾಗಿ ಮಾಡಿ ಎಂದು ಸಹ ಕೆಲ ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹೇರಿದ್ದಾರಂತೆ. ಆದರೆ ಈ ಒತ್ತಡಗಳಿಗೆಲ್ಲ ಬಗ್ಗದ ಪೊಲೀಸರು, ದರ್ಶನ್ ಅನ್ನು ಪ್ರಕರಣದ ಮುಖ್ಯ ಆರೋಪಿಯನ್ನಾಗಿ ಪರಿಗಣಿಸಿ ಎಫ್​ಐಆರ್ ದಾಖಲು ಮಾಡಿದ್ದಾರೆ.

ಪೊಲೀಸ್ ಆಯುಕ್ತ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೆಲ ರಾಜಕಾರಣಿಗಳು ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಆದರೆ ಎಲ್ಲ ಸಾಕ್ಷ್ಯಗಳು, ಇತರ ಆರೋಪಿಗಳ ಹೇಳಿಕೆಗಳು ದರ್ಶನ್ ಅವರೇ ಮುಖ್ಯ ಆರೋಪಿ ಎಂದು ಸಾರಿ ಹೇಳುತ್ತಿರುವ ಕಾರಣ ದರ್ಶನ್ ಅನ್ನೇ ಎ1 ಅನ್ನಾಗಿ ಪೊಲೀಸರು ಮಾಡುವ ಸಾಧ್ಯತೆಯೇ ದಟ್ಟವಾಗಿದೆ.

ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆಯಾದಾಗ ಇರಲಿಲ್ಲ ಎಂದಿದ್ದ ದರ್ಶನ್​ ಈಗ ಪೊಲೀಸರ ಬಳಿ ಹೇಳಿದ್ದೇ ಬೇರೆ!

ದರ್ಶನ್​ಗೆ ಹಲವು ರಾಜಕಾರಣಿಗಳು ಆಪ್ತ ಗೆಳೆಯರಾಗಿದ್ದಾರೆ. ಇಂಥಹುದೇ ಪಕ್ಷ ಎಂದೆನದೆ ರಾಜ್ಯದ ಮೂರು ಪ್ರಮುಖ ಪಕ್ಷಗಳಲ್ಲಿಯೂ ಆತ್ಮೀಯರಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಬೇರೆ ಬೇರೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರವನ್ನೂ ಸಹ ದರ್ಶನ್ ಮಾಡಿದ್ದಾರೆ. ಇತ್ತೀಚೆಗಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ, ಕುಮಾರಸ್ವಾಮಿ ಎದುರಾಗಿ ಚುನಾವಣಾ ಪ್ರಚಾರ ಮಾಡಿದ್ದರು. ಅದಕ್ಕೆ ಮುನ್ನ ಬಿಜೆಪಿಯ ಪಿಸಿ ಮೋಹನ್, ಎಂ ಸತೀಶ್ ರೆಡ್ಡಿ, ಮಂಡ್ಯದಲ್ಲಿ ಸುಮಲತಾ, ದಾವಣಗೆರೆಯಲ್ಲಿ ಎಸ್​ಎಸ್ ಮಲ್ಲಿಕಾರ್ಜುನ್ ಇನ್ನೂ ಕೆಲವರ ಪರವಾಗಿ ಈ ಹಿಂದೆ ದರ್ಶನ್ ಪ್ರಚಾರ ಮಾಡಿದ್ದರು.

ಚಿತ್ರದುರ್ಗದ ರೇಣುಕಾ ಸ್ವಾಮಿ, ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಕಾರಣಕ್ಕೆ ರೇಣುಕಾ ಸ್ವಾಮಿಯನ್ನು ಜೂನ್ 8 ರಂದು ಚಿತ್ರದುರ್ಗದಿಂದ ಅಪಹರಣ ಮಾಡಿಸಿ ಬೆಂಗಳೂರಿನ ಹೊರವಲಯದ ಶೆಡ್​ಗೆ ಕರೆತಂದು ಅಲ್ಲಿ ಆತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಶವವನ್ನು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸುಮನಹಳ್ಳಿ ದೊಡ್ಡ ಮೋರಿಯಲ್ಲಿ ಎಸೆದು ಪರಾರಿಯಾಗಿದ್ದಾರೆ ದರ್ಶನ್ ಆಪ್ತರು. ಹೆಣ ಪತ್ತೆಯಾದ ಬಳಿಕ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದಾಗ ದರ್ಶನ್ ಹಸ್ತಕ್ಷೇಪ ಇದೆ ಎಂಬುದು ಪತ್ತೆಯಾಗಿದ್ದು ಇದೀಗ ದರ್ಶನ್ ಅನ್ನು ಬಂಧಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Tue, 11 June 24

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!