AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಪುತ್ಥಳಿ ಮೆರವಣಿಗೆ ವೇಳೆ ಗಲಭೆ, ಶಾಸಕರ ಪುತ್ರನಿಂದ ಎಸ್​ಐ ಮೇಲೆ ಹಲ್ಲೆ

ಪುನೀತ್ ರಾಜ್​ಕುಮಾರ್ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಸಿಂಧನೂರಿನಲ್ಲಿ ಜೆಡಿಎಸ್ ಶಾಸಕರ ಪುತ್ರ ಅಭಿಷೇಕ್ ನಾಡಗೌಡ, ನೂತನ ಕಲಾಮಂದಿರಕ್ಕೆ ಪುನೀತ್ ಹೆಸರಿಡಬೇಕೆಂದು ಒತ್ತಾಯಿಸಿ, ಪುನೀತ್ ಪುತ್ಥಳಿಯನ್ನು ಮೆರವಣಿಗೆ ಮಾಡುವಾಗ ಗಲಭೆ ಉಂಟಾಗಿದೆ.

ಪುನೀತ್ ರಾಜ್​ಕುಮಾರ್ ಪುತ್ಥಳಿ ಮೆರವಣಿಗೆ ವೇಳೆ ಗಲಭೆ, ಶಾಸಕರ ಪುತ್ರನಿಂದ ಎಸ್​ಐ ಮೇಲೆ ಹಲ್ಲೆ
ಸಿಂಧನೂರಿನಲ್ಲಿ ಗಲಾಟೆ
ಮಂಜುನಾಥ ಸಿ.
|

Updated on:Mar 15, 2023 | 3:55 PM

Share

ರಾಯಚೂರು (Raichur) ಜಿಲ್ಲೆ ಸಿಂಧನೂರಿನಲ್ಲಿ ಪುನೀತ್ ರಾಜ್​ಕುಮಾರ್ (Puneeth Rajkumar) ಪುತ್ಥಳಿ ಮೆರವಣಿಗೆ ವೇಳೆ ಗಲಭೆ ಸಂಭವಿಸಿದ್ದು, ಮೆರವಣಿಗೆ ನೇತೃತ್ವ ವಹಿಸಿದ್ದ ಜೆಡಿಎಸ್ ಶಾಸಕ (JDS MLA) ವೆಂಕಟರಮಣ ನಾಡಗೌಡ ಅವರ ಪುತ್ರ ಅಭಿಷೇಕ್ ನಾಡಗೌಡ ಪಿಎಸ್​ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ಸಿಂಧನೂರಿನಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ರಂಗಮಂದಿರಕ್ಕೆ ಯಾರ ಹೆಸರು ಇಡಬೇಕೆಂಬ ವಿಷಯವು ರಾಜಕೀಯ ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ರಾಜಕೀಯಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ.

ಕಲಾಮಂದಿರಕ್ಕೆ ಯಾರ ಹೆಸರು ಇಡಬೇಕು ಎಂಬುದು ಕೆಲ ದಿನಗಳಿಂದಲೂ ತುರುಸಿನ ರಾಜಕೀಯಕ್ಕೆ ಕಾರಣವಾಗಿತ್ತು. ಸ್ಥಳೀಯರೇ ಆದ ಮೃಡದೇವ ಗವಾಯಿಯವರ ಹೆಸರಿಡಬೇಕೆಂದು ಹಲವರು ಒತ್ತಾಯಿಸಿದ್ದರು. ಆದರೆ ಶಾಸಕರ ಪುತ್ರ ಹಾಗೂ ಅವರ ಬೆಂಬಲಿಗರು ಕಲಾಮಂದಿರಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇಡಬೇಕು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ನಗರಸಭೆಯಲ್ಲಿ ಚರ್ಚೆಯಾಗಿ ವಿಷಯ ಇತ್ಯರ್ಥವಾಗದೇ ಇದ್ದ ಕಾರಣ ನಿರ್ಣಯ ಮುಂದೂಡಲಾಗಿತ್ತು.

ವಿಷಯ ತೀರ್ಮಾನವಾಗುವ ಮುನ್ನವೇ ಶಾಸಕರ ಪುತ್ರ ಅಭಿಷೇಕ್ ಗೌಡ, ಕಲಾಮಂದಿರಕ್ಕೆ ಪುನೀತ್ ರಾಜ್​ಕುಮಾರ್ ಹೆಸರಿಡುವುದಾಗಿ ನಿಶ್ಚಯಿಸಿ, ಕಲಾಮಂದಿರದ ಮುಂದೆ ಪುನೀತ್ ಪುತ್ಥಳಿ ಸ್ಥಾಪಿಸಲು ಪುತ್ಥಳಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದರು. ಅನುಮತಿ ರಹಿತ ಮೆರವಣಿಗೆಯನ್ನು ಪೊಲೀಸರು ಹಾಗೂ ತಹಶೀಲ್ದಾರ್ ತಡೆದರು. ಈ ವೇಳೆ ಗಲಭೆ ಉಂಟಾಗಿ ಅಭಿಷೇಕ್ ಗೌಡ ಪಿಎಸ್​ಐ ಮಣಿಕಂಠ ಮೇಲೆ ಹಲ್ಲೆ ನಡೆಸಿದರು. ಮೆರವಣಿಗೆ ತಡೆಯುವ ವೇಳೆಯಲ್ಲಿ ಪಿಎಸ್​ಐ ಸಹ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ಮಾಡಿದ್ದರು.

ಗಲಭೆಯ ಬಳಿಕ ಅಭಿಷೇಕ್ ಹಾಗೂ ಕೆಲವು ಸಂಗಡಿಗರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಯೂ ಸುಮ್ಮನಾಗದ ಅಭಿಷೇಕ್, ಎಸ್​ಐಗೆ ಬೆದರಿಕೆಗಳನ್ನು ಹಾಕಿದ್ದಾರೆ. ಐದು ನಿಮಿಷ ಯೂನಿಫಾರಂ ಬಿಚ್ಚಿ ಹೊರಗೆ ಬಾ ನೋಡಿಕೊಳ್ತೀನಿ ಎಂದು ಠಾಣೆಯಲ್ಲಿ ನಿಂತು ಅಭಿಷೇಕ್ ಅಬ್ಬರಿಸುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಮಣ ನಾಡಗೌಡರ್, ಪುನೀತ್ ರಾಜ್​ಕುಮಾರ್ ಹೆಸರು ಇಡುವ ಕುರಿತಾಗಿ ಮಾರ್ಚ್ 21 ರ ವರೆಗೆ ನಗರಾಡಳಿತ ಕಾಲಾವಕಾಶ ಕೊಟ್ಟಿರುವ ಕಾರಣ ಆ ವರೆಗೆ ಪುನೀತ್ ಅಭಿಮಾನಿಗಳು ಸುಮ್ಮನಿರುವಂತೆ ಸೂಚಿಸಿದ್ದೆ. ಪುತ್ಥಳಿ ಅನುಷ್ಠಾನಕ್ಕೆ ಸಮ್ಮತಿ ಸಿಕ್ಕಲ್ಲದೇ ಇದ್ದರೂ ಪುತ್ಥಳಿಯನ್ನು ನಗರಸಭೆಯವರ ಸುಪರ್ಧಿಗೆ ನೀಡಲು ಅನುಮತಿಯನ್ನು ಪುನೀತ್ ಅಭಿಮಾನಿಗಳು ಪಡೆದಿದ್ದರು. ಮೆರವಣಿಗೆ ವೇಳೆ ಪಿಎಸ್​ಐ ಮಣಿಕಂಠ ಕಾರ್ಯಕರ್ತರನ್ನು ಹೊಡೆಯದೇ ಇದ್ದಿದ್ದರೆ ಈ ಗಲಾಟೆಯೇ ನಡೆಯುತ್ತಿರಲಿಲ್ಲ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 15 March 23

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ