AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಪುತ್ಥಳಿ ಮೆರವಣಿಗೆ ವೇಳೆ ಗಲಭೆ, ಶಾಸಕರ ಪುತ್ರನಿಂದ ಎಸ್​ಐ ಮೇಲೆ ಹಲ್ಲೆ

ಪುನೀತ್ ರಾಜ್​ಕುಮಾರ್ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಸಿಂಧನೂರಿನಲ್ಲಿ ಜೆಡಿಎಸ್ ಶಾಸಕರ ಪುತ್ರ ಅಭಿಷೇಕ್ ನಾಡಗೌಡ, ನೂತನ ಕಲಾಮಂದಿರಕ್ಕೆ ಪುನೀತ್ ಹೆಸರಿಡಬೇಕೆಂದು ಒತ್ತಾಯಿಸಿ, ಪುನೀತ್ ಪುತ್ಥಳಿಯನ್ನು ಮೆರವಣಿಗೆ ಮಾಡುವಾಗ ಗಲಭೆ ಉಂಟಾಗಿದೆ.

ಪುನೀತ್ ರಾಜ್​ಕುಮಾರ್ ಪುತ್ಥಳಿ ಮೆರವಣಿಗೆ ವೇಳೆ ಗಲಭೆ, ಶಾಸಕರ ಪುತ್ರನಿಂದ ಎಸ್​ಐ ಮೇಲೆ ಹಲ್ಲೆ
ಸಿಂಧನೂರಿನಲ್ಲಿ ಗಲಾಟೆ
ಮಂಜುನಾಥ ಸಿ.
|

Updated on:Mar 15, 2023 | 3:55 PM

Share

ರಾಯಚೂರು (Raichur) ಜಿಲ್ಲೆ ಸಿಂಧನೂರಿನಲ್ಲಿ ಪುನೀತ್ ರಾಜ್​ಕುಮಾರ್ (Puneeth Rajkumar) ಪುತ್ಥಳಿ ಮೆರವಣಿಗೆ ವೇಳೆ ಗಲಭೆ ಸಂಭವಿಸಿದ್ದು, ಮೆರವಣಿಗೆ ನೇತೃತ್ವ ವಹಿಸಿದ್ದ ಜೆಡಿಎಸ್ ಶಾಸಕ (JDS MLA) ವೆಂಕಟರಮಣ ನಾಡಗೌಡ ಅವರ ಪುತ್ರ ಅಭಿಷೇಕ್ ನಾಡಗೌಡ ಪಿಎಸ್​ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ಸಿಂಧನೂರಿನಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ರಂಗಮಂದಿರಕ್ಕೆ ಯಾರ ಹೆಸರು ಇಡಬೇಕೆಂಬ ವಿಷಯವು ರಾಜಕೀಯ ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ರಾಜಕೀಯಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ.

ಕಲಾಮಂದಿರಕ್ಕೆ ಯಾರ ಹೆಸರು ಇಡಬೇಕು ಎಂಬುದು ಕೆಲ ದಿನಗಳಿಂದಲೂ ತುರುಸಿನ ರಾಜಕೀಯಕ್ಕೆ ಕಾರಣವಾಗಿತ್ತು. ಸ್ಥಳೀಯರೇ ಆದ ಮೃಡದೇವ ಗವಾಯಿಯವರ ಹೆಸರಿಡಬೇಕೆಂದು ಹಲವರು ಒತ್ತಾಯಿಸಿದ್ದರು. ಆದರೆ ಶಾಸಕರ ಪುತ್ರ ಹಾಗೂ ಅವರ ಬೆಂಬಲಿಗರು ಕಲಾಮಂದಿರಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇಡಬೇಕು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ನಗರಸಭೆಯಲ್ಲಿ ಚರ್ಚೆಯಾಗಿ ವಿಷಯ ಇತ್ಯರ್ಥವಾಗದೇ ಇದ್ದ ಕಾರಣ ನಿರ್ಣಯ ಮುಂದೂಡಲಾಗಿತ್ತು.

ವಿಷಯ ತೀರ್ಮಾನವಾಗುವ ಮುನ್ನವೇ ಶಾಸಕರ ಪುತ್ರ ಅಭಿಷೇಕ್ ಗೌಡ, ಕಲಾಮಂದಿರಕ್ಕೆ ಪುನೀತ್ ರಾಜ್​ಕುಮಾರ್ ಹೆಸರಿಡುವುದಾಗಿ ನಿಶ್ಚಯಿಸಿ, ಕಲಾಮಂದಿರದ ಮುಂದೆ ಪುನೀತ್ ಪುತ್ಥಳಿ ಸ್ಥಾಪಿಸಲು ಪುತ್ಥಳಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದರು. ಅನುಮತಿ ರಹಿತ ಮೆರವಣಿಗೆಯನ್ನು ಪೊಲೀಸರು ಹಾಗೂ ತಹಶೀಲ್ದಾರ್ ತಡೆದರು. ಈ ವೇಳೆ ಗಲಭೆ ಉಂಟಾಗಿ ಅಭಿಷೇಕ್ ಗೌಡ ಪಿಎಸ್​ಐ ಮಣಿಕಂಠ ಮೇಲೆ ಹಲ್ಲೆ ನಡೆಸಿದರು. ಮೆರವಣಿಗೆ ತಡೆಯುವ ವೇಳೆಯಲ್ಲಿ ಪಿಎಸ್​ಐ ಸಹ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ಮಾಡಿದ್ದರು.

ಗಲಭೆಯ ಬಳಿಕ ಅಭಿಷೇಕ್ ಹಾಗೂ ಕೆಲವು ಸಂಗಡಿಗರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಯೂ ಸುಮ್ಮನಾಗದ ಅಭಿಷೇಕ್, ಎಸ್​ಐಗೆ ಬೆದರಿಕೆಗಳನ್ನು ಹಾಕಿದ್ದಾರೆ. ಐದು ನಿಮಿಷ ಯೂನಿಫಾರಂ ಬಿಚ್ಚಿ ಹೊರಗೆ ಬಾ ನೋಡಿಕೊಳ್ತೀನಿ ಎಂದು ಠಾಣೆಯಲ್ಲಿ ನಿಂತು ಅಭಿಷೇಕ್ ಅಬ್ಬರಿಸುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಮಣ ನಾಡಗೌಡರ್, ಪುನೀತ್ ರಾಜ್​ಕುಮಾರ್ ಹೆಸರು ಇಡುವ ಕುರಿತಾಗಿ ಮಾರ್ಚ್ 21 ರ ವರೆಗೆ ನಗರಾಡಳಿತ ಕಾಲಾವಕಾಶ ಕೊಟ್ಟಿರುವ ಕಾರಣ ಆ ವರೆಗೆ ಪುನೀತ್ ಅಭಿಮಾನಿಗಳು ಸುಮ್ಮನಿರುವಂತೆ ಸೂಚಿಸಿದ್ದೆ. ಪುತ್ಥಳಿ ಅನುಷ್ಠಾನಕ್ಕೆ ಸಮ್ಮತಿ ಸಿಕ್ಕಲ್ಲದೇ ಇದ್ದರೂ ಪುತ್ಥಳಿಯನ್ನು ನಗರಸಭೆಯವರ ಸುಪರ್ಧಿಗೆ ನೀಡಲು ಅನುಮತಿಯನ್ನು ಪುನೀತ್ ಅಭಿಮಾನಿಗಳು ಪಡೆದಿದ್ದರು. ಮೆರವಣಿಗೆ ವೇಳೆ ಪಿಎಸ್​ಐ ಮಣಿಕಂಠ ಕಾರ್ಯಕರ್ತರನ್ನು ಹೊಡೆಯದೇ ಇದ್ದಿದ್ದರೆ ಈ ಗಲಾಟೆಯೇ ನಡೆಯುತ್ತಿರಲಿಲ್ಲ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 15 March 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!