AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಪುತ್ಥಳಿ ಮೆರವಣಿಗೆ ವೇಳೆ ಗಲಭೆ, ಶಾಸಕರ ಪುತ್ರನಿಂದ ಎಸ್​ಐ ಮೇಲೆ ಹಲ್ಲೆ

ಪುನೀತ್ ರಾಜ್​ಕುಮಾರ್ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಸಿಂಧನೂರಿನಲ್ಲಿ ಜೆಡಿಎಸ್ ಶಾಸಕರ ಪುತ್ರ ಅಭಿಷೇಕ್ ನಾಡಗೌಡ, ನೂತನ ಕಲಾಮಂದಿರಕ್ಕೆ ಪುನೀತ್ ಹೆಸರಿಡಬೇಕೆಂದು ಒತ್ತಾಯಿಸಿ, ಪುನೀತ್ ಪುತ್ಥಳಿಯನ್ನು ಮೆರವಣಿಗೆ ಮಾಡುವಾಗ ಗಲಭೆ ಉಂಟಾಗಿದೆ.

ಪುನೀತ್ ರಾಜ್​ಕುಮಾರ್ ಪುತ್ಥಳಿ ಮೆರವಣಿಗೆ ವೇಳೆ ಗಲಭೆ, ಶಾಸಕರ ಪುತ್ರನಿಂದ ಎಸ್​ಐ ಮೇಲೆ ಹಲ್ಲೆ
ಸಿಂಧನೂರಿನಲ್ಲಿ ಗಲಾಟೆ
ಮಂಜುನಾಥ ಸಿ.
|

Updated on:Mar 15, 2023 | 3:55 PM

Share

ರಾಯಚೂರು (Raichur) ಜಿಲ್ಲೆ ಸಿಂಧನೂರಿನಲ್ಲಿ ಪುನೀತ್ ರಾಜ್​ಕುಮಾರ್ (Puneeth Rajkumar) ಪುತ್ಥಳಿ ಮೆರವಣಿಗೆ ವೇಳೆ ಗಲಭೆ ಸಂಭವಿಸಿದ್ದು, ಮೆರವಣಿಗೆ ನೇತೃತ್ವ ವಹಿಸಿದ್ದ ಜೆಡಿಎಸ್ ಶಾಸಕ (JDS MLA) ವೆಂಕಟರಮಣ ನಾಡಗೌಡ ಅವರ ಪುತ್ರ ಅಭಿಷೇಕ್ ನಾಡಗೌಡ ಪಿಎಸ್​ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ಸಿಂಧನೂರಿನಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ರಂಗಮಂದಿರಕ್ಕೆ ಯಾರ ಹೆಸರು ಇಡಬೇಕೆಂಬ ವಿಷಯವು ರಾಜಕೀಯ ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ರಾಜಕೀಯಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ.

ಕಲಾಮಂದಿರಕ್ಕೆ ಯಾರ ಹೆಸರು ಇಡಬೇಕು ಎಂಬುದು ಕೆಲ ದಿನಗಳಿಂದಲೂ ತುರುಸಿನ ರಾಜಕೀಯಕ್ಕೆ ಕಾರಣವಾಗಿತ್ತು. ಸ್ಥಳೀಯರೇ ಆದ ಮೃಡದೇವ ಗವಾಯಿಯವರ ಹೆಸರಿಡಬೇಕೆಂದು ಹಲವರು ಒತ್ತಾಯಿಸಿದ್ದರು. ಆದರೆ ಶಾಸಕರ ಪುತ್ರ ಹಾಗೂ ಅವರ ಬೆಂಬಲಿಗರು ಕಲಾಮಂದಿರಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇಡಬೇಕು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ನಗರಸಭೆಯಲ್ಲಿ ಚರ್ಚೆಯಾಗಿ ವಿಷಯ ಇತ್ಯರ್ಥವಾಗದೇ ಇದ್ದ ಕಾರಣ ನಿರ್ಣಯ ಮುಂದೂಡಲಾಗಿತ್ತು.

ವಿಷಯ ತೀರ್ಮಾನವಾಗುವ ಮುನ್ನವೇ ಶಾಸಕರ ಪುತ್ರ ಅಭಿಷೇಕ್ ಗೌಡ, ಕಲಾಮಂದಿರಕ್ಕೆ ಪುನೀತ್ ರಾಜ್​ಕುಮಾರ್ ಹೆಸರಿಡುವುದಾಗಿ ನಿಶ್ಚಯಿಸಿ, ಕಲಾಮಂದಿರದ ಮುಂದೆ ಪುನೀತ್ ಪುತ್ಥಳಿ ಸ್ಥಾಪಿಸಲು ಪುತ್ಥಳಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದರು. ಅನುಮತಿ ರಹಿತ ಮೆರವಣಿಗೆಯನ್ನು ಪೊಲೀಸರು ಹಾಗೂ ತಹಶೀಲ್ದಾರ್ ತಡೆದರು. ಈ ವೇಳೆ ಗಲಭೆ ಉಂಟಾಗಿ ಅಭಿಷೇಕ್ ಗೌಡ ಪಿಎಸ್​ಐ ಮಣಿಕಂಠ ಮೇಲೆ ಹಲ್ಲೆ ನಡೆಸಿದರು. ಮೆರವಣಿಗೆ ತಡೆಯುವ ವೇಳೆಯಲ್ಲಿ ಪಿಎಸ್​ಐ ಸಹ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ಮಾಡಿದ್ದರು.

ಗಲಭೆಯ ಬಳಿಕ ಅಭಿಷೇಕ್ ಹಾಗೂ ಕೆಲವು ಸಂಗಡಿಗರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಯೂ ಸುಮ್ಮನಾಗದ ಅಭಿಷೇಕ್, ಎಸ್​ಐಗೆ ಬೆದರಿಕೆಗಳನ್ನು ಹಾಕಿದ್ದಾರೆ. ಐದು ನಿಮಿಷ ಯೂನಿಫಾರಂ ಬಿಚ್ಚಿ ಹೊರಗೆ ಬಾ ನೋಡಿಕೊಳ್ತೀನಿ ಎಂದು ಠಾಣೆಯಲ್ಲಿ ನಿಂತು ಅಭಿಷೇಕ್ ಅಬ್ಬರಿಸುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಮಣ ನಾಡಗೌಡರ್, ಪುನೀತ್ ರಾಜ್​ಕುಮಾರ್ ಹೆಸರು ಇಡುವ ಕುರಿತಾಗಿ ಮಾರ್ಚ್ 21 ರ ವರೆಗೆ ನಗರಾಡಳಿತ ಕಾಲಾವಕಾಶ ಕೊಟ್ಟಿರುವ ಕಾರಣ ಆ ವರೆಗೆ ಪುನೀತ್ ಅಭಿಮಾನಿಗಳು ಸುಮ್ಮನಿರುವಂತೆ ಸೂಚಿಸಿದ್ದೆ. ಪುತ್ಥಳಿ ಅನುಷ್ಠಾನಕ್ಕೆ ಸಮ್ಮತಿ ಸಿಕ್ಕಲ್ಲದೇ ಇದ್ದರೂ ಪುತ್ಥಳಿಯನ್ನು ನಗರಸಭೆಯವರ ಸುಪರ್ಧಿಗೆ ನೀಡಲು ಅನುಮತಿಯನ್ನು ಪುನೀತ್ ಅಭಿಮಾನಿಗಳು ಪಡೆದಿದ್ದರು. ಮೆರವಣಿಗೆ ವೇಳೆ ಪಿಎಸ್​ಐ ಮಣಿಕಂಠ ಕಾರ್ಯಕರ್ತರನ್ನು ಹೊಡೆಯದೇ ಇದ್ದಿದ್ದರೆ ಈ ಗಲಾಟೆಯೇ ನಡೆಯುತ್ತಿರಲಿಲ್ಲ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 15 March 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!