AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Gandhi: ಹೇಗಿದ್ದಾರೆ ನೋಡಿ ಪೂಜಾ ಗಾಂಧಿ ಮದುವೆ ಆಗಲಿರೋ ಹುಡುಗ..

Pooja Gandhi Wedding: ವಿಜಯ್ ಅವರು ಬೆಂಗಳೂರಿನಲ್ಲಿ ತಮ್ಮದೇ ಲಾಜಿಸ್ಟಿಕ್ ಕಂಪನಿ ಹೊಂದಿದ್ದಾರೆ. ವಿಜಯ್ ಹಾಗೂ ಪೂಜಾ ಗಾಂಧಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಇಬ್ಬರೂ ತಮ್ಮ ಪ್ರೀತಿಗೆ ಹೊಸ ಅರ್ಥ ನೀಡುತ್ತಿದ್ದಾರೆ.

Pooja Gandhi: ಹೇಗಿದ್ದಾರೆ ನೋಡಿ ಪೂಜಾ ಗಾಂಧಿ ಮದುವೆ ಆಗಲಿರೋ ಹುಡುಗ..
ಪೂಜಾ ಗಾಂಧಿ-ವಿಜಯ್
Mangala RR
| Edited By: |

Updated on: Nov 28, 2023 | 10:32 AM

Share

‘ಮುಂಗಾರು ಮಳೆ’ ಬೆಡಗಿ ಪೂಜಾ ಗಾಂಧಿ (Pooja Gandhi) ಅವರು ನವೆಂಬರ್ 29ರಂದು ಮದುವೆ ಆಗಲಿದ್ದಾರೆ ಎಂದು ವರದಿ ಆಗಿತ್ತು. ವಿಜಯ್ ಗೋರ್ಪಡೆ ಅವರನ್ನು ಪೂಜಾ ಗಾಂಧಿ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗ ವಿಜಯ್ ಅವರ ಫೋಟೋ ವೈರಲ್ ಆಗಿದೆ. ಬೆಂಗಳೂರಿನ ಯಲಹಂಕದಲ್ಲಿ ಪೂಜಾ ಗಾಂಧಿ ಅವರ ವಿವಾಹ ನೆರವೇರಲಿದೆ. ಅವರಿಗೆ ಮೊದಲೇ ಶುಭಾಶಯ ಬರುತ್ತಿದೆ.

ವಿಜಯ್ ಅವರು ಬೆಂಗಳೂರಿನಲ್ಲಿ ತಮ್ಮದೇ ಲಾಜಿಸ್ಟಿಕ್ ಕಂಪನಿ ಹೊಂದಿದ್ದಾರೆ. ವಿಜಯ್ ಹಾಗೂ ಪೂಜಾ ಗಾಂಧಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಇಬ್ಬರೂ ತಮ್ಮ ಪ್ರೀತಿಗೆ ಹೊಸ ಅರ್ಥ ನೀಡುತ್ತಿದ್ದಾರೆ. ಪೂಜಾ ಹಾಗೂ ವಿಜಯ್ ಜೋಡಿ ಉತ್ತಮವಾಗಿದೆ ಎಂದು ಅನೇಕರು ಹೇಳಿದ್ದಾರೆ.

ಪೂಜಾ ಗಾಂಧಿ ಅವರು ಮೂಲತಃ ಉತ್ತರ ಪ್ರದೇಶದವರು. ‘ಮುಂಗಾರು ಮಳೆ’ ಸಿನಿಮಾ ಗೆದ್ದ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲೂ ಪೂಜಾ ಗಾಂಧಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ವಿಜಯ್ ಅವರೇ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ: ಕನ್ನಡಿಗರೂ ಅಭಿಮಾನ ಪಡುವಂತೆ ಕನ್ನಡ ರಾಜ್ಯೋತ್ಸವ ಆಚರಿಸಿದ ಮುಂಗಾರು ಮಳೆ ಹುಡುಗಿ ಪೂಜಾ ಗಾಂಧಿ 

ಪೂಜಾ ಗಾಂಧಿ ಹಾಗೂ ಗಣೇಶ್ ನಟನೆಯ ‘ಮುಂಗಾರು ಮಳೆ’ ಸಿನಿಮಾ ಸೂಪರ್ ಹಿಟ್ ಆಯಿತು. ನಿರ್ದೇಶಕ ಯೋಗರಾಜ್ ಭಟ್ ಸ್ಯಾಡ್ ಎಂಡಿಂಗ್ ಕೊಟ್ಟಿದ್ದರಿಂದ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಬಗ್ಗೆ ಈಗಲೂ ಅನೇಕರು ಮಾತನಾಡುತ್ತಾರೆ.

ಇದನ್ನೂ ಓದಿ: ಸಿಂಪಲ್​ ಆಗಿ ಮದುವೆ ಆಗಲಿದ್ದಾರಾ ಪೂಜಾ ಗಾಂಧಿ? ‘ಮುಂಗಾರು ಮಳೆ’ ನಟಿಗೆ ಕಂಕಣ ಭಾಗ್ಯ

ಪೂಜಾ ಗಾಂಧಿ ಅವರು 2012ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಉದ್ಯಮಿ ಆನಂದ್ ಗೌಡ ಜೊತೆ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದರು. ಆದರೆ, ಇವರ ಸಂಬಂಧ ಹಾಳಾಯಿತು. ಆ ಬಳಿಕ ಅವರು ಮದುವೆ ಬಗ್ಗೆ ಆಲೋಚನೆ ಮಾಡಿರಲಿಲ್ಲ. ಈಗ ಅವರು ಸಿಂಪಲ್ ಆಗಿ ಮದುವೆ ಆಗೋಕೆ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ