AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Gandhi: ಹೇಗಿದ್ದಾರೆ ನೋಡಿ ಪೂಜಾ ಗಾಂಧಿ ಮದುವೆ ಆಗಲಿರೋ ಹುಡುಗ..

Pooja Gandhi Wedding: ವಿಜಯ್ ಅವರು ಬೆಂಗಳೂರಿನಲ್ಲಿ ತಮ್ಮದೇ ಲಾಜಿಸ್ಟಿಕ್ ಕಂಪನಿ ಹೊಂದಿದ್ದಾರೆ. ವಿಜಯ್ ಹಾಗೂ ಪೂಜಾ ಗಾಂಧಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಇಬ್ಬರೂ ತಮ್ಮ ಪ್ರೀತಿಗೆ ಹೊಸ ಅರ್ಥ ನೀಡುತ್ತಿದ್ದಾರೆ.

Pooja Gandhi: ಹೇಗಿದ್ದಾರೆ ನೋಡಿ ಪೂಜಾ ಗಾಂಧಿ ಮದುವೆ ಆಗಲಿರೋ ಹುಡುಗ..
ಪೂಜಾ ಗಾಂಧಿ-ವಿಜಯ್
ಮಂಗಳ ರಾಜಗೋಪಾಲ್​
| Edited By: |

Updated on: Nov 28, 2023 | 10:32 AM

Share

‘ಮುಂಗಾರು ಮಳೆ’ ಬೆಡಗಿ ಪೂಜಾ ಗಾಂಧಿ (Pooja Gandhi) ಅವರು ನವೆಂಬರ್ 29ರಂದು ಮದುವೆ ಆಗಲಿದ್ದಾರೆ ಎಂದು ವರದಿ ಆಗಿತ್ತು. ವಿಜಯ್ ಗೋರ್ಪಡೆ ಅವರನ್ನು ಪೂಜಾ ಗಾಂಧಿ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗ ವಿಜಯ್ ಅವರ ಫೋಟೋ ವೈರಲ್ ಆಗಿದೆ. ಬೆಂಗಳೂರಿನ ಯಲಹಂಕದಲ್ಲಿ ಪೂಜಾ ಗಾಂಧಿ ಅವರ ವಿವಾಹ ನೆರವೇರಲಿದೆ. ಅವರಿಗೆ ಮೊದಲೇ ಶುಭಾಶಯ ಬರುತ್ತಿದೆ.

ವಿಜಯ್ ಅವರು ಬೆಂಗಳೂರಿನಲ್ಲಿ ತಮ್ಮದೇ ಲಾಜಿಸ್ಟಿಕ್ ಕಂಪನಿ ಹೊಂದಿದ್ದಾರೆ. ವಿಜಯ್ ಹಾಗೂ ಪೂಜಾ ಗಾಂಧಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಇಬ್ಬರೂ ತಮ್ಮ ಪ್ರೀತಿಗೆ ಹೊಸ ಅರ್ಥ ನೀಡುತ್ತಿದ್ದಾರೆ. ಪೂಜಾ ಹಾಗೂ ವಿಜಯ್ ಜೋಡಿ ಉತ್ತಮವಾಗಿದೆ ಎಂದು ಅನೇಕರು ಹೇಳಿದ್ದಾರೆ.

ಪೂಜಾ ಗಾಂಧಿ ಅವರು ಮೂಲತಃ ಉತ್ತರ ಪ್ರದೇಶದವರು. ‘ಮುಂಗಾರು ಮಳೆ’ ಸಿನಿಮಾ ಗೆದ್ದ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲೂ ಪೂಜಾ ಗಾಂಧಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ವಿಜಯ್ ಅವರೇ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ: ಕನ್ನಡಿಗರೂ ಅಭಿಮಾನ ಪಡುವಂತೆ ಕನ್ನಡ ರಾಜ್ಯೋತ್ಸವ ಆಚರಿಸಿದ ಮುಂಗಾರು ಮಳೆ ಹುಡುಗಿ ಪೂಜಾ ಗಾಂಧಿ 

ಪೂಜಾ ಗಾಂಧಿ ಹಾಗೂ ಗಣೇಶ್ ನಟನೆಯ ‘ಮುಂಗಾರು ಮಳೆ’ ಸಿನಿಮಾ ಸೂಪರ್ ಹಿಟ್ ಆಯಿತು. ನಿರ್ದೇಶಕ ಯೋಗರಾಜ್ ಭಟ್ ಸ್ಯಾಡ್ ಎಂಡಿಂಗ್ ಕೊಟ್ಟಿದ್ದರಿಂದ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಬಗ್ಗೆ ಈಗಲೂ ಅನೇಕರು ಮಾತನಾಡುತ್ತಾರೆ.

ಇದನ್ನೂ ಓದಿ: ಸಿಂಪಲ್​ ಆಗಿ ಮದುವೆ ಆಗಲಿದ್ದಾರಾ ಪೂಜಾ ಗಾಂಧಿ? ‘ಮುಂಗಾರು ಮಳೆ’ ನಟಿಗೆ ಕಂಕಣ ಭಾಗ್ಯ

ಪೂಜಾ ಗಾಂಧಿ ಅವರು 2012ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಉದ್ಯಮಿ ಆನಂದ್ ಗೌಡ ಜೊತೆ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದರು. ಆದರೆ, ಇವರ ಸಂಬಂಧ ಹಾಳಾಯಿತು. ಆ ಬಳಿಕ ಅವರು ಮದುವೆ ಬಗ್ಗೆ ಆಲೋಚನೆ ಮಾಡಿರಲಿಲ್ಲ. ಈಗ ಅವರು ಸಿಂಪಲ್ ಆಗಿ ಮದುವೆ ಆಗೋಕೆ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ