AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ಇಷ್ಟದ ಕನ್ನಡ ನಟ ಯಾರು: ನಟಿಯೇ ಕೊಟ್ಟಿದ್ದಾರೆ ಉತ್ತರ

Pooja Hegde: ಮಂಗಳೂರಿನ ಮೂಲದ ಈ ಚೆಲುವೆ ಪೂಜಾ ಹೆಗ್ಡೆ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ತಮ್ಮ ಮೂಲವನ್ನು ಮರೆತಿಲ್ಲ. ಇತ್ತೀಚೆಗಷ್ಟೆ ಮಂಗಳೂರಿಗೆ ಬಂದಿದ್ದ ಪೂಜಾ ಹೆಗ್ಡೆ, ದೈವ ಕಾರ್ಯದಲ್ಲಿ ಭಾಗಿ ಆಗಿದ್ದರು. ಈ ವೇಳೆ ಕನ್ನಡ ಚಿತ್ರರಂಗ, ಕನ್ನಡದ ತಮ್ಮ ಮೆಚ್ಚಿನ ನಟ, ಕರ್ನಾಟಕದೊಟ್ಟಿಗಿನ ತಮ್ಮ ನಂಟಿನ ಬಗ್ಗೆ ಮಾತನಾಡಿದ್ದಾರೆ.

ಪೂಜಾ ಹೆಗ್ಡೆ ಇಷ್ಟದ ಕನ್ನಡ ನಟ ಯಾರು: ನಟಿಯೇ ಕೊಟ್ಟಿದ್ದಾರೆ ಉತ್ತರ
Pooja Hegde
ಮಂಜುನಾಥ ಸಿ.
|

Updated on: May 01, 2026 | 2:46 PM

Share

ಪೂಜಾ ಹೆಗ್ಡೆ (Pooja Hegde) ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​, ತೆಲುಗು, ತಮಿಳು ಸಿನಿಮಾಗಳಲ್ಲಿ ಬಲು ಬೇಡಿಕೆಯ ನಟಿಯಾಗಿರುವ ಪೂಜಾ ಹೆಗ್ಡೆ ಕನ್ನಡದ ಸಿನಿಮಾನಲ್ಲಿ ನಟಿಸಿಲ್ಲ ಆದರೆ ಅವರ ಮೂಲ ಕರ್ನಾಟಕವೇ. ಮಂಗಳೂರಿನ ಮೂಲದ ಈ ಚೆಲುವೆ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ತಮ್ಮ ಮೂಲವನ್ನು ಮರೆತಿಲ್ಲ. ಇತ್ತೀಚೆಗಷ್ಟೆ ಮಂಗಳೂರಿಗೆ ಬಂದಿದ್ದ ಪೂಜಾ ಹೆಗ್ಡೆ, ದೈವ ಕಾರ್ಯದಲ್ಲಿ ಭಾಗಿ ಆಗಿದ್ದರು. ಜೊತೆಗೆ ತುಳು ನಾಡಿನ ಹಲವು ದೇವಾಲಯಗಳಿಗೆ ಸಹ ಭೇಟಿ ಕೊಟ್ಟು ದರ್ಶನ ಪಡೆದುಕೊಂಡರು.

ತುಳುವನ್ನು ಸುಲಲಿತವಾಗಿ ಮಾತನಾಡಬಲ್ಲ ಪೂಜಾ ಹೆಗ್ಡೆ, ತಮ್ಮ ಈ ಭೇಟಿಯ ಸಂದರ್ಭ ಸ್ಥಳೀಯ ಯೂಟ್ಯೂಬ್ ಚಾನೆಲ್​​ ಒಂದಕ್ಕೆ ಚುಟುಕು ಸಂದರ್ಶನ ನೀಡಿರುವ ನಟಿ ಪೂಜಾ ಹೆಗ್ಡೆ, ಕರ್ನಾಟಕದ ಬಗ್ಗೆ, ಕನ್ನಡ ಚಿತ್ರರಂಗದ ಬಗ್ಗೆ, ತಮ್ಮ ಹಾಗೂ ಕರ್ನಾಟಕದ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಕನ್ನಡ ಚಿತ್ರರಂಗದಲ್ಲಿ ಮೆಚ್ಚಿನ ಯಾರು ಎಂಬುದನ್ನು ಸಹ ನಟಿ ಪೂಜಾ ಹೆಗ್ಡೆ ಹೇಳಿಕೊಂಡಿದ್ದಾರೆ.

ಮೊದಲಿಗೆ ‘ಕಾಂತಾರ’ ಸಿನಿಮಾದ ಬಗ್ಗೆ ಮಾತನಾಡಿರುವ ನಟಿ ಪೂಜಾ ಹೆಗ್ಡೆ, ‘ಬಾಲ್ಯದಿಂದಲೂ ಭೂತ, ದೈವಗಳನ್ನು, ಆಚರಣೆಗಳನ್ನು ನೋಡುತ್ತಾ ಬೆಳೆದ ನನಗೆ ಅವುಗಳ ಮಹತ್ವ ಎಲ್ಲವೂ ತಿಳಿದಿತ್ತು. ಆದರೆ ‘ಕಾಂತಾರ’ ಸಿನಿಮಾ ಅದನ್ನು ಇಡೀ ದೇಶಕ್ಕೆ ಪರಿಚಯಿಸಿತು. ಉತ್ತರ ಭಾರತದ ಜನ ಸಹ ಆ ಕತೆಯೊಂದಿಗೆ ಕನೆಕ್ಟ್ ಆದರು. ಅಲ್ಲಿ ಹಲವಾರು ಮಂದಿ ನನ್ನನ್ನು ದೈವದ ಬಗ್ಗೆ ಭೂತದ ಬಗ್ಗೆ ಕೇಳಲು ಆರಂಭಿಸಿದ್ದರು’ ಎಂದಿದ್ದಾರೆ ಪೂಜಾ. ಕನ್ನಡ ಚಿತ್ರರಂಗದಲ್ಲಿ ತಮ್ಮ ನೆಚ್ಚಿನ ನಟ ರಾಜ್ ಬಿ ಶೆಟ್ಟಿ ಎಂದ ಪೂಜಾ, ‘ನನಗೆ ರಾಜ್ ಬಿ ಶೆಟ್ಟಿ ನಟನೆ ಇಷ್ಟವಾಗುತ್ತದೆ. ಅವರು ಬಹಳ ಚೆನ್ನಾಗಿ ನಟಿಸುತ್ತಾರೆ. ‘ಸು ಫ್ರಂ ಸೋ’ ಸಿನಿಮಾ ನೋಡಿದ್ದೇನೆ. ಆ ಸಿನಿಮಾನಲ್ಲಿ ಅವರು ತುಳುವಿನಲ್ಲಿ ಸಹ ಮಾತನಾಡಿದ್ದಾರೆ’ ಎಂದಿದ್ದಾರೆ ಪೂಜಾ ಹೆಗ್ಡೆ.

ಇದನ್ನೂ ಓದಿ:ಗ್ಲಾಮರಸ್ ಅವತಾರದಲ್ಲಿ ನಟಿ ಪೂಜಾ ಹೆಗ್ಡೆ: ವಿಡಿಯೋ ನೋಡಿ

ತುಳು ನಾಡಿನೊಂದಿಗೆ ತಮ್ಮ ನಂಟಿನ ಬಗ್ಗೆ ಮಾತನಾಡಿರುವ ಪೂಜಾ ಹೆಗ್ಡೆ, ‘ನಾನು ಪ್ರತಿ ಬಾರಿ ಬೇಸಿಗೆ ರಜೆ ಕಳೆಯಲು ಇಲ್ಲಿಗೆ ಬರುತ್ತಿದ್ದೆ. ನಮ್ಮ ಕಸಿನ್ಸ್ ಎಲ್ಲರೂ ಆ ಸಮಯದಲ್ಲಿ ಬರುತ್ತಿದ್ದರು. ನಾವೆಲ್ಲ ಆಟ ಆಡುತ್ತಿದ್ದೆವು. ಇಲ್ಲಿ ಬಂದು ನೇರಳೆ ಹಣ್ಣು ತಿನ್ನುತ್ತಿದ್ದ ನೆನಪು ನನಗೆ ಈಗಲೂ ಇದೆ. ಬಹಳ ಅದ್ಭುತ ದಿನಗಳನ್ನು ಇಲ್ಲಿ ಕಳೆದಿದ್ದೇನೆ’ ಎಂದು ಪೂಜಾ ಹೆಗ್ಡೆ ಹೇಳಿಕೊಂಡಿದ್ದಾರೆ.

ಪೂಜಾ ಹೆಗ್ಡೆ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ನಟನೆಯ ‘ಜನ ನಾಯಗನ್’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ದುಲ್ಕರ್ ಸಲ್ಮಾನ್ ಜೊತೆಗೆ ತೆಲುಗು ಸಿನಿಮಾ ಒಂದರಲ್ಲಿ ಪೂಜಾ ನಟಿಸುತ್ತಿದ್ದಾರೆ. ವರುಣ್ ಧವನ್ ಜೊತೆಗೆ ಹಿಂದಿ ಸಿನಿಮಾ ಒಂದರಲ್ಲಿ ನಟಿಸಿದ್ದಾರೆ. ಆ ಸಿನಿಮಾ ಸಹ ಶೀಘ್ರವೇ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಹೊಸದೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಒಟ್ಟಾರೆಯಾಗಿ ಪೂಜಾ ಸಖತ್ ಬ್ಯುಸಿ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು