AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟಕ ದೂರಾಗಲೆಂದು ಹೋಮ: ದೊಡ್ಡಣ್ಣ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

ಚಿತ್ರರಂಗಕ್ಕೆ ಇರುವ ಕಂಟಕ ದೂರಾಗಲೆಂದು ಕಲಾವಿದರ ಸಂಘದಲ್ಲಿ ಪೂಜೆ ಮಾಡಲಾಗಿದೆ. ಆದರೆ ಈ ಪೂಜೆಯಿಂದಲೇ ಕಲಾವಿದರ ಸಂಘಕ್ಕೆ ಕಂಟಕ ಬರುವಂತಿದೆ. ಕಲಾವಿದರ ಸಂಘವು ಸಹಕಾರ ಸಂಘಗಳ ನಿಯಮ ಪಾಲಿಸಿಲ್ಲ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಎನ್​ಆರ್ ರಮೇಶ್ ತನಿಖೆಗೆ ಒತ್ತಾಯಿಸಿದ್ದಾರೆ.

ಕಂಟಕ ದೂರಾಗಲೆಂದು ಹೋಮ: ದೊಡ್ಡಣ್ಣ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
Follow us
ಮಂಜುನಾಥ ಸಿ.
|

Updated on:Aug 16, 2024 | 1:14 PM

ಕನ್ನಡ ಚಿತ್ರರಂಗಕ್ಕೆ ಇರುವ ಕಂಟಕ ದೂರಾಗಲೆಂದು ಇತ್ತೀಚೆಗಷ್ಟೆ ಕಲಾವಿದರ ಸಂಘದ ವತಿಯಿಂದ ಹೋಮ, ಹವನ ವಿವಿಧ ರೀತಿಯ ಪೂಜೆಗಳನ್ನು ಮಾಡಿಸಲಾಯ್ತು. ನಟ ದೊಡ್ಡಣ್ಣ ದಂಪತಿ ಕಲಾವಿದರ ಪರವಾಗಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಾಕ್​ಲೈನ್ ವೆಂಕಟೇಶ್ ಸೇರಿದಂತೆ ಹಲವು ಕಲಾವಿದರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಗ್ಗೆ ಚಿತ್ರರಂಗದಲ್ಲಿ ಹೆಚ್ಚಿನ ಟೀಕೆಗಳೇನೂ ವ್ಯಕ್ತವಾಗಿರಲಿಲ್ಲ. ಆದರೆ ಈಗ ಸಾಮಾಜಿಕ ಕಾರ್ಯಕರ್ತರೊಬ್ಬರು ಕಲಾವಿದರ ಸಂಘದ ವಿರುದ್ಧ ಭ್ರಷ್ಟಾಚಾರ, ಅನೀತಿ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ ನಟ ದೊಡ್ಡಣ್ಣ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸಾಮಾಜಿಕ ಹೋರಾಟಗಾರ, ರಾಜಕಾರಣಿ ಎನ್​ಆರ್ ರಮೇಶ್ ಈ ಬಗ್ಗೆ ಮಾತನಾಡಿದ್ದು, ‘ಸಹಕಾರ ಸಂಘಗಳ ನಿಯಮದ ಅನುಸಾರ ಕಲಾವಿದರ ಸಂಘಕ್ಕೆ ಚುನಾವಣೆಗಳನ್ನು ನಡೆಸಲಾಗಿಲ್ಲ. ಕಲಾವಿದರ ಸಂಘದ ಯಾವೊಬ್ಬ ಪದಾಧಿಕಾರಿಯೂ ಸಹ ಸೂಕ್ತವಾಗಿ ಜವಾಬ್ದಾರಿಗಳನ್ನು ನಿಭಾಯಿಸಿಲ್ಲ. ನಿಯಮದ ಪ್ರಕಾರ ಲೆಕ್ಕ ಪರಿಶೋಧನಾ ವರದಿಯನ್ನು ಸಹ ಸಲ್ಲಿಸಿಲ್ಲ. ದೊಡ್ಡಣ್ಣ ಕಲಾವಿದರ ಸಂಘದ ಖಜಾಂಚಿ ಆಗಿದ್ದಾರೆ ಆದರೆ ಉಳಿದ ಪದಾಧಿಕಾರಿಗಳು ಯಾರು? ಅವರ ಕಾರ್ಯವೇನು ಎಂಬುದು ಯಾರಿಗೂ ಗೊತ್ತಿಲ್ಲ’ ಎಂದಿದ್ದಾರೆ ಎನ್​ಆರ್ ರಮೇಶ್.

ಸಂಘದಲ್ಲಿರುವ ಇತರೇ ಪದಾಧಿಕಾರಿಗಳು ಯಾರಿಗೂ ಒಂದೇ ಒಂದು ಸಂದೇಶವೂ ಹೋಗಲ್ಲ. ಸುಂದರ್ ರಾಜ್, ಜಗ್ಗೇಶ್, ಶ್ರೀನಾಥ್, ರಮೇಶ್ ಯಾರಿಗೂ ಸಹ ಸಂಘದಲ್ಲಿ ಏನಾಗುತ್ತಿದೆ ಎಂದ ಸಂದೇಶ ಸಹ ಹೋಗುವುದಿಲ್ಲ. ಕೇವಲ ಇಬ್ಬರು-ಮೂವರು ಕಲಾವಿದರ ಸಂಘವನ್ನು ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ. ಇದೆಲ್ಲ ನಿಲ್ಲಬೇಕು, ಸಹಕಾರ ಸಂಘಗಳ ನಿಯಮದ ಅನುಸಾರವಾಗಿ ಚುನಾವಣೆ ನಡೆದು ಪದಾಧಿಕಾರಿಗಳ ನೇಮಕ ಆಗಬೇಕು. ಅಲ್ಲದೆ ಲೆಕ್ಕ ಪರಿಶೋಧನಾ ವರದಿಯನ್ನು ಕೊಡದೇ ಇರುವ ಖಜಾಂಚಿ ದೊಡ್ಡಣ್ಣ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಬೇಕು ಎಂದು ಸಹ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಲಾವಿದರ ಸಂಘದಲ್ಲಿ ಪೂಜೆ, ಹೋಮ: ಪ್ರಮುಖ ನಟರೇ ಬಂದಿಲ್ಲ ಎಂದಿದ್ದಕೆ ಸುಮಲತಾ ಏನಂದ್ರು?

ಪೂಜೆ ನೆಪದಲ್ಲಿ ಕಲಾವಿದರು ಒಗ್ಗಟ್ಟಾಗಿದ್ದಾರೆ ಎಂಬ ಮಾತಿಗೆ ಪ್ರತಿಕ್ರಿಯಿಸಿ, ‘ಕಲಾವಿದರಲ್ಲಿ ಎಲ್ಲಿದೆ ಒಗ್ಗಟ್ಟು? ಕಲಾವಿದರಲ್ಲಿ ಒಗ್ಗಟ್ಟು ಎನ್ನುವುದು ಎಂಟನೇ ಅದ್ಭುತ. ಕಲಾವಿದರ ಸಂಘದಲ್ಲಿ ರಾಕ್​ಲೈನ್ ವೆಂಕಟೇಶ್ ಮತ್ತು ದೊಡ್ಡಣ್ಣ ಇಬ್ಬರೇ ಇರೋದು. ಇನ್ನುಳಿದವರೆಲ್ಲ ನಾಮ್​ಕೆ ವಾಸ್ತೆ ಅಷ್ಟೆ ಎಂದಿದ್ದಾರೆ ರಮೇಶ್.

ಕೆಲ ದಿನದ ಹಿಂದಷ್ಟೆ ಕಲಾವಿದರ ಸಂಘದಲ್ಲಿ ಅದ್ಧೂರಿಯಾಗಿ ಕೆಲ ವಿಶೇಷ ಪೂಜೆ, ಹೋಮ-ಹವನಗಳನ್ನು ಮಾಡಿಸಲಾಯ್ತು. ಈ ಪೂಜೆ ಕಾರ್ಯಕ್ರಮಗಳ ಮುಂದಾಳತ್ವವನ್ನು ದೊಡ್ಡಣ್ಣ ಮತ್ತು ರಾಕ್​ಲೈನ್ ವೆಂಕಟೇಶ್ ಹೊತ್ತಿದ್ದರು. ನಟ ದೊಡ್ಡಣ್ಣ ಮತ್ತು ಅವರ ಪತ್ನಿಯವರೇ ಪೂಜೆಗೆ ಕೂತಿದ್ದರು. ಪ್ರಕಾಶ್ ಅಮ್ಮಣ್ಣಾಯ ಸೇರಿದಂತೆ ಇನ್ನೂ ಕೆಲವು ಆಚಾರ್ಯರು, ಪೂಜಾರಿಗಳು ಪೂಜೆಗೆ ಆಗಮಿಸಿ ಪೂಜೆ ನಡೆಸಿಕೊಟ್ಟರು. ದೇವರ ನುಡಿಯನ್ನು ಸಹ ಈ ಸಂದರ್ಭದಲ್ಲಿ ಕೇಳಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Fri, 16 August 24

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ