AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kazan Khan: ಖ್ಯಾತ ಖಳನಟ ಕಝಾನ್​ ಖಾನ್​ ಇನ್ನಿಲ್ಲ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಕಲಾವಿದ

Kazan Khan Death: ಕನ್ನಡದ ‘ಹಬ್ಬ’, ‘ನಾಗದೇವತೆ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ಕಝಾನ್​ ಖಾನ್​ ನಿಧನಕ್ಕೆ ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

Kazan Khan: ಖ್ಯಾತ ಖಳನಟ ಕಝಾನ್​ ಖಾನ್​ ಇನ್ನಿಲ್ಲ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಕಲಾವಿದ
ಕಝಾನ್​ ಖಾನ್​
ಮದನ್​ ಕುಮಾರ್​
|

Updated on:Jun 13, 2023 | 10:12 AM

Share

ಜನಪ್ರಿಯ ನಟ ಕಝಾನ್​ ಖಾನ್​ (Kazan Khan) ಅವರು ಸೋಮವಾರ (ಜೂನ್​ 12) ನಿಧನರಾಗಿದ್ದಾರೆ. ತೀವ್ರ ಹೃದಯಾಘಾತ (Heart Attack) ಆದ ಬಳಿಕ ಅವರು ಇಹಲೋಕ ತ್ಯಜಿಸಿದ್ದಾರೆ ಎಂಬುದು ತಿಳಿದುಬಂದಿದೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ವಿಲನ್​ ಪಾತ್ರ ಮಾಡುವ ಮೂಲಕ ಕಝಾನ್​ ಖಾನ್​ ಅವರು ಫೇಮಸ್​ ಆಗಿದ್ದರು. ಮಲಯಾಳಂ, ತಮಿಳು ಸಿನಿಮಾಗಳಲ್ಲಿ ಅವರು ಹೆಚ್ಚಾಗಿ ನಟಿಸಿದ್ದರು. ಕನ್ನಡದ ‘ಹಬ್ಬ’, ‘ನಾಗದೇವತೆ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ಕಝಾನ್​ ಖಾನ್​ ನಿಧನಕ್ಕೆ (Kazan Khan Death) ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಖ್ಯಾತ ನಟನ ಸಾವಿನಿಂದ ಚಿತ್ರರಂಗಕ್ಕೆ ಆಘಾತ ಆಗಿದೆ.

ಕಝಾನ್​ ಖಾನ್​ ಅವರ ನಿಧನದ ಸುದ್ದಿಯನ್ನು ನಿರ್ಮಾಪಕ ಎನ್​ಬಿ ಬದುಶ ಅವರು ಖಚಿತಪಡಿಸಿದ್ದಾರೆ. ಈ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ‘ಗಂಧರ್ವಂ’, ‘ಸಿಐಡಿ ಮೂಸಾ’, ‘ದಿ ಕಿಂಗ್​’, ‘ಡ್ರೀಮ್ಸ್​’, ‘ಸೇತುಪತಿ ಐಪಿಎಸ್​’, ‘ವಾನತೈಪೋಲ’, ‘ಮೇಟ್ಟುಕುಡಿ’, ‘ವಲ್ಲರಸು’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕಝಾನ್​ ಖಾನ್​ ನಟಿಸಿದ್ದರು. ಅವರು ಮಾಡಿದ ಗಮನಾರ್ಹ ಪ್ರಾತ್ರಗಳನ್ನು ಅಭಿಮಾನಿಗಳು ಈಗ ನೆನಪು ಮಾಡಿಕೊಳ್ಳುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕಝಾನ್​ ಖಾನ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1992ರಲ್ಲಿ. ತಮಿಳು ಸಿನಿಮಾಗಳಿಂದ ಅವರ ಬಣ್ಣದ ಬದುಕು ಆರಂಭ ಆಯಿತು. ನಂತರ 1995ರಲ್ಲಿ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಅಲ್ಲಿಯೂ ಅವರಿಗೆ ಯಶಸ್ಸು ಸಿಕ್ಕಿತು.

ಇದನ್ನೂ ಓದಿ: ಸೋಮವಾರದಂದು ಅತಿ ಹೆಚ್ಚು ಹೃದಯಾಘಾತ ಸಂಭವಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? ಕಾರಣ ಹೀಗಿದೆ

ವಿಲನ್​ ಪಾತ್ರಗಳಲ್ಲಿ ಅವರನ್ನು ನೋಡಲು ಪ್ರೇಕ್ಷಕರು ಇಷ್ಟಪಡುತ್ತಿದ್ದಾರೆ. 50ಕ್ಕೂ ಅಧಿಕ ಸಿನಿಮಾಗಳಲ್ಲಿ ಕಝಾನ್​ ಖಾನ್​ ನಟಿಸಿದ್ದರು. ಅನೇಕ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:07 am, Tue, 13 June 23

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!