AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಬಳಿಕ ‘ರಾಜರಥ’ ಸಿನಿಮಾ ಮಾಡಿದರು. ಇದು ಮಿಶ್ರಪ್ರತಿಕ್ರಿಯೆ ಪಡೆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ್ದು ‘ವಿಕ್ರಾಂತ್ ರೋಣ’ ಸಿನಿಮಾ. ಈ ಚಿತ್ರ ಮುಗಿದ ಬಳಿಕ ಅವರು ‘ಬಿಲ್ಲ ರಂಗ ಭಾಷಾ’ ಸಿನಿಮಾ ಅನೌನ್ಸ್ ಮಾಡಲು ಕಾದಿದ್ದಾರೆ.

ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ
ಅನೂಪ್​-ಸುದೀಪ್
TV9 Web
| Edited By: |

Updated on: Sep 02, 2023 | 11:17 AM

Share

ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ಅನೂಪ್ ಭಂಡಾರಿ (Anup Bhandari) ಅವರ ಕಾಂಬಿನೇಷನ್​ನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ 3ಡಿಯಲ್ಲೂ ಮೂಡಿ ಬಂದಿತ್ತು. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಈ ಜೋಡಿ ಮತ್ತೊಮ್ಮೆ ಒಂದಾಗಲಿದೆ ಎಂಬುದು ಈ ಮೊದಲೇ ಘೋಷಣೆ ಆಗಿತ್ತು. ಆದರೆ, ಸಿನಿಮಾ ಬಗ್ಗೆ ಈವರೆಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಸುದೀಪ್ ಜನ್ಮದಿನದ ಪ್ರಯುಕ್ತ ಇಂದು (ಸೆಪ್ಟೆಂಬರ್ 2) ಸಿನಿಮಾ ಅನೌನ್ಸ್ ಆಗಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಅದು ಸುಳ್ಳಾಗಿದೆ. ಈ ಬಗ್ಗೆ ಅನೂಪ್ ಭಂಡಾರಿ ಅವರು ಮಾಹಿತಿ ನೀಡಿದ್ದಾರೆ.

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಬಳಿಕ ‘ರಾಜರಥ’ ಸಿನಿಮಾ ಮಾಡಿದರು. ಇದು ಮಿಶ್ರಪ್ರತಿಕ್ರಿಯೆ ಪಡೆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ್ದು ‘ವಿಕ್ರಾಂತ್ ರೋಣ’ ಸಿನಿಮಾ. ಈ ಚಿತ್ರ ಮುಗಿದ ಬಳಿಕ ಅವರು ‘ಬಿಲ್ಲ ರಂಗ ಭಾಷಾ’ ಸಿನಿಮಾ ಅನೌನ್ಸ್ ಮಾಡಲು ಕಾದಿದ್ದಾರೆ. ಆದರೆ, ಸುದೀಪ್ ಜನ್ಮದಿನಕ್ಕೆ ಈ ಬಗ್ಗೆ ಯಾವುದೇ ಅಪ್​ಡೇಟ್ ನೀಡುತ್ತಿಲ್ಲ. ಈ ಬಗ್ಗೆ ಅನೂಪ್ ಟ್ವೀಟ್ ಮಾಡಿದ್ದಾರೆ.

‘ನೀವು ನಾನು ನೀಡುವ ಅಪ್​ಡೇಟ್​ಗಾಗಿ ಕಾದಿದ್ದೀರಿ ಎಂಬುದು ಗೊತ್ತು. ನಾನು ಕೂಡ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಲು ನಿಮ್ಮಷ್ಟೇ ಕಾತುರದಿಂದ ಕಾದಿದ್ದೇನೆ. ಆದರೆ, ಸುದೀಪ್ ನಟನೆಯ ಹಲವು ಸಿನಿಮಾಗಳು ಘೋಷಣೆ ಆಗುತ್ತಿರುವುದರಿಂದ ಸದ್ಯಕ್ಕೆ ಅಪ್​ಡೇಟ್ ನೀಡದಿರಲು ನಮ್ಮ ತಂಡದವರು ನಿರ್ಧಾರ ತೆಗೆದುಕೊಂಡಿದ್ದಾರೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದ’ ಎಂದು ಅನೂಪ್ ಭಂಡಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Sanvi Sudeep: ‘ಮತ್ತಷ್ಟು ಬರೋದಿದೆ’; ಕುತೂಹಲ ಮೂಡಿಸಿದ ಸಾನ್ವಿ ಸುದೀಪ್ ಫೋಟೋಶೂಟ್

ಸುದೀಪ್ ಹೊಸ ಹೊಸ ಸಿನಿಮಾ ಘೋಷಣೆ

ಕಿಚ್ಚ ಸುದೀಪ್ ಅವರ 46ನೇ ಸಿನಿಮಾಗೆ ‘ಮ್ಯಾಕ್ಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೈಟಲ್ ಶೀರ್ಷಿಕೆ ಟೀಸರ್ ಗಮನ ಸೆಳೆಯುತ್ತಿದೆ. ಈ ಚಿತ್ರದ ಬಗ್ಗೆ ಇದ್ದ ನಿರೀಕ್ಷೆ ಹೆಚ್ಚಿದೆ. ಸುದೀಪ್ ಅವರು ಸಿನಿಮಾ ನಿರ್ದೇಶನಕ್ಕೆ ಮರಳಿದ್ದಾರೆ. ‘ಕೆಆರ್​ಜಿ ಸ್ಟುಡಿಯೋ’ ಮೂಲಕ ಈ ಚಿತ್ರ ಮೂಡಿಬರಲಿದೆ.  ಇನ್ನು ಆರ್ ಚಂದ್ರು ಜೊತೆಗೂ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ಇನ್ನು, ಅನೂಪ್ ಭಂಡಾರಿ ಜೊತೆಗಿನ ಸಿನಿಮಾ ಯಾವಾಗ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ