AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಬಳಿಕ ‘ರಾಜರಥ’ ಸಿನಿಮಾ ಮಾಡಿದರು. ಇದು ಮಿಶ್ರಪ್ರತಿಕ್ರಿಯೆ ಪಡೆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ್ದು ‘ವಿಕ್ರಾಂತ್ ರೋಣ’ ಸಿನಿಮಾ. ಈ ಚಿತ್ರ ಮುಗಿದ ಬಳಿಕ ಅವರು ‘ಬಿಲ್ಲ ರಂಗ ಭಾಷಾ’ ಸಿನಿಮಾ ಅನೌನ್ಸ್ ಮಾಡಲು ಕಾದಿದ್ದಾರೆ.

ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ
ಅನೂಪ್​-ಸುದೀಪ್
TV9 Web
| Edited By: |

Updated on: Sep 02, 2023 | 11:17 AM

Share

ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ಅನೂಪ್ ಭಂಡಾರಿ (Anup Bhandari) ಅವರ ಕಾಂಬಿನೇಷನ್​ನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ 3ಡಿಯಲ್ಲೂ ಮೂಡಿ ಬಂದಿತ್ತು. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಈ ಜೋಡಿ ಮತ್ತೊಮ್ಮೆ ಒಂದಾಗಲಿದೆ ಎಂಬುದು ಈ ಮೊದಲೇ ಘೋಷಣೆ ಆಗಿತ್ತು. ಆದರೆ, ಸಿನಿಮಾ ಬಗ್ಗೆ ಈವರೆಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಸುದೀಪ್ ಜನ್ಮದಿನದ ಪ್ರಯುಕ್ತ ಇಂದು (ಸೆಪ್ಟೆಂಬರ್ 2) ಸಿನಿಮಾ ಅನೌನ್ಸ್ ಆಗಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಅದು ಸುಳ್ಳಾಗಿದೆ. ಈ ಬಗ್ಗೆ ಅನೂಪ್ ಭಂಡಾರಿ ಅವರು ಮಾಹಿತಿ ನೀಡಿದ್ದಾರೆ.

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಬಳಿಕ ‘ರಾಜರಥ’ ಸಿನಿಮಾ ಮಾಡಿದರು. ಇದು ಮಿಶ್ರಪ್ರತಿಕ್ರಿಯೆ ಪಡೆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ್ದು ‘ವಿಕ್ರಾಂತ್ ರೋಣ’ ಸಿನಿಮಾ. ಈ ಚಿತ್ರ ಮುಗಿದ ಬಳಿಕ ಅವರು ‘ಬಿಲ್ಲ ರಂಗ ಭಾಷಾ’ ಸಿನಿಮಾ ಅನೌನ್ಸ್ ಮಾಡಲು ಕಾದಿದ್ದಾರೆ. ಆದರೆ, ಸುದೀಪ್ ಜನ್ಮದಿನಕ್ಕೆ ಈ ಬಗ್ಗೆ ಯಾವುದೇ ಅಪ್​ಡೇಟ್ ನೀಡುತ್ತಿಲ್ಲ. ಈ ಬಗ್ಗೆ ಅನೂಪ್ ಟ್ವೀಟ್ ಮಾಡಿದ್ದಾರೆ.

‘ನೀವು ನಾನು ನೀಡುವ ಅಪ್​ಡೇಟ್​ಗಾಗಿ ಕಾದಿದ್ದೀರಿ ಎಂಬುದು ಗೊತ್ತು. ನಾನು ಕೂಡ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಲು ನಿಮ್ಮಷ್ಟೇ ಕಾತುರದಿಂದ ಕಾದಿದ್ದೇನೆ. ಆದರೆ, ಸುದೀಪ್ ನಟನೆಯ ಹಲವು ಸಿನಿಮಾಗಳು ಘೋಷಣೆ ಆಗುತ್ತಿರುವುದರಿಂದ ಸದ್ಯಕ್ಕೆ ಅಪ್​ಡೇಟ್ ನೀಡದಿರಲು ನಮ್ಮ ತಂಡದವರು ನಿರ್ಧಾರ ತೆಗೆದುಕೊಂಡಿದ್ದಾರೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದ’ ಎಂದು ಅನೂಪ್ ಭಂಡಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Sanvi Sudeep: ‘ಮತ್ತಷ್ಟು ಬರೋದಿದೆ’; ಕುತೂಹಲ ಮೂಡಿಸಿದ ಸಾನ್ವಿ ಸುದೀಪ್ ಫೋಟೋಶೂಟ್

ಸುದೀಪ್ ಹೊಸ ಹೊಸ ಸಿನಿಮಾ ಘೋಷಣೆ

ಕಿಚ್ಚ ಸುದೀಪ್ ಅವರ 46ನೇ ಸಿನಿಮಾಗೆ ‘ಮ್ಯಾಕ್ಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೈಟಲ್ ಶೀರ್ಷಿಕೆ ಟೀಸರ್ ಗಮನ ಸೆಳೆಯುತ್ತಿದೆ. ಈ ಚಿತ್ರದ ಬಗ್ಗೆ ಇದ್ದ ನಿರೀಕ್ಷೆ ಹೆಚ್ಚಿದೆ. ಸುದೀಪ್ ಅವರು ಸಿನಿಮಾ ನಿರ್ದೇಶನಕ್ಕೆ ಮರಳಿದ್ದಾರೆ. ‘ಕೆಆರ್​ಜಿ ಸ್ಟುಡಿಯೋ’ ಮೂಲಕ ಈ ಚಿತ್ರ ಮೂಡಿಬರಲಿದೆ.  ಇನ್ನು ಆರ್ ಚಂದ್ರು ಜೊತೆಗೂ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ಇನ್ನು, ಅನೂಪ್ ಭಂಡಾರಿ ಜೊತೆಗಿನ ಸಿನಿಮಾ ಯಾವಾಗ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!