AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವನೇ ಶ್ರೀನಿವಾಸ’ ಸಿನಿಮಾಗೆ ಹೀರೋ ಆದ ಪೌರಕಾರ್ಮಿಕ ಪ್ರತಾಪ್; ಬೆಂಬಲ ನೀಡಿದ ಶಿವಣ್ಣ

ಪೌರಕಾರ್ಮಿಕನಾಗಿ ಕೆಲಸ ಮಾಡುವ ಪ್ರತಾಪ್ ಅವರು ‘ಇವನೇ ಶ್ರೀನಿವಾಸ’ ಸಿನಿಮಾಗೆ ಹೀರೋ ಆಗಿದ್ದಾರೆ. ಈ ಸಿನಿಮಾ ಈಗ ಬಿಡುಗಡೆಗೆ ಸಿದ್ದವಾಗಿದೆ. ಜನವರಿ ವೇಳೆಗೆ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಶಿವರಾಜ್​​ಕುಮಾರ್ ಅವರು ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

‘ಇವನೇ ಶ್ರೀನಿವಾಸ’ ಸಿನಿಮಾಗೆ ಹೀರೋ ಆದ ಪೌರಕಾರ್ಮಿಕ ಪ್ರತಾಪ್; ಬೆಂಬಲ ನೀಡಿದ ಶಿವಣ್ಣ
Ivane Srinivasa Movie Team With Shivarajkumar
ಮದನ್​ ಕುಮಾರ್​
|

Updated on: Nov 18, 2025 | 7:30 PM

Share

ಸಿನಿಮಾ ಬಗ್ಗೆ ಆಸಕ್ತಿ ಇದ್ದರೆ ಯಾರು ಬೇಕಾದರೂ ಈ ಕ್ಷೇತ್ರಕ್ಕೆ ಬರಬಹುದು ಎಂಬುದಕ್ಕೆ ‘ಇವನೇ ಶ್ರೀನಿವಾಸ’ (Ivane Srinivasa) ಸಿನಿಮಾ ಸಾಕ್ಷಿ. ಬಿಬಿಎಂಪಿಯಲ್ಲಿ ಡ್ರೈವರ್, ಅಂದರೆ ಪೌರಕಾರ್ಮಿಕನಾಗಿ (Pourakarmika) ಕೆಲಸ ಮಾಡುತ್ತಿರುವ ಪ್ರತಾಪ್ ಅವರು ಈ ಸಿನಿಮಾಗೆ ಹೀರೋ ಆಗಿದ್ದಾರೆ. ಅವರಿಗೆ ನಟನೆ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇತ್ತು. ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಅವರ ಆಸೆ ಈಗ ಈಡೇರಿದೆ. ಅದಕ್ಕೆ ಮನೆಯವರು ಸಹಕಾರ ನೀಡಿದ್ದಾರೆ. ಇತ್ತೀಚೆಗೆ ಶಿವರಾಜ್​​ಕುಮಾರ್ (Shivarajkumar) ಅವರು ‘ಇವನೇ ಶ್ರೀನಿವಾಸ’ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ.

‘ಇವನೇ ಶ್ರೀನಿವಾಸ’ ಸಿನಿಮಾಗೆ ಎಸ್. ಕುಮಾರ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ಸಿನಿಮಾ ಬಗ್ಗೆ ತಂಡದವರು ಮಾಹಿತಿ ಹಂಚಿಕೊಂಡರು. ನಿರ್ದೇಶಕ ಕುಮಾರ್ ಅವರು ಮಾತನಾಡಿ, ‘ಸೋಷಿಯಲ್ ಮೀಡಿಯಾದಿಂದ ಏನೇನೆಲ್ಲ ತೊಂದರೆ ಆಗುತ್ತಿದೆ ಅನ್ನೋದನ್ನು ಈ ಚಿತ್ರದಲ್ಲಿ ಹೇಳಿದ್ದೇವೆ. ಬೆಂಗಳೂರು, ಮೈಸೂರು, ಕೋಲಾರ, ತುಮಕೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ’ ಎಂದು ಹೇಳಿದರು.

ಪ್ರತಾಪ್ ಅವರು ಹೀರೋ ಆಗಿ ಅಭಿನಯಿಸುವುದರ ಜೊತೆಗೆ ನಿರ್ಮಾಣ ಕೂಡ ಮಾಡಿದ್ದಾರೆ. ನಾಯಕಿಯಾಗಿ ಪ್ರಿಯಾ ಆರಾಧ್ಯ ಅಭಿನಯಿಸಿದ್ದಾರೆ. ರೋಹಿತ್ ಕುಮಾರ್ ಅವರು ಕಥೆ ಬರೆದಿದ್ದಾರೆ. ‘ಪ್ರತಿದಿನ ಸಾಮಾಜಿಕ‌ ಜಾಲತಾಣಗಳ ಮೂಲಕ ನಡೆಯುತ್ತಿರುವ ಕ್ರೈಂ ಬಗ್ಗೆ ಇವನೇ ಶ್ರೀನಿವಾಸ ಸಿನಿಮಾದ ಮೂಲಕ ಹೇಳಹೊರಟಿದ್ದೇವೆ. ಮೋಹನ್ ಜುನೇಜಾ ಅವರು ನಟಿಸಿದ ಕೊನೆಯ ಸಿನಿಮಾ ಇದು’ ಎಂದು ನಿರ್ದೇಶಕರು ಹೇಳಿದರು.

ಚಿಲ್ಲರ್ ಮಂಜು, ಸುಶ್ಮಿತಾ ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ನಾಯಕ ನಟ ಪ್ರತಾಪ್ ಮಾತನಾಡಿ, ‘ನಾನೊಬ್ಬ ಪೌರ ಕಾರ್ಮಿಕ. ನಾಟಕಗಳಲ್ಲಿ ಅಭಿನಯಿಸುತ್ತಿದ್ದೆ. ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದಿದ್ದೇನೆ. ಶ್ರೀನಿವಾಸ ಯಾರು ಎನ್ನುವುದೇ ಈ ಸಿನಿಮಾದ ಸಸ್ಪೆನ್ಸ್. ನಮ್ಮ ಸಿನಿಮಾದ ಮೂಲಕ ಸಮಾಜಕ್ಕೆ ಒಂದು ಮೆಸೇಜ್ ನೀಡಲಿದ್ದೇವೆ’ ಎಂದರು.

ಇದನ್ನೂ ಓದಿ: ಕಪ್ಪು-ಕಪ್ಪು ಸಿನಿಮಾಗಳಿಂದ ಕಗ್ಗತ್ತಲ ಸಿನಿಮಾಗಳ ಕಡೆ ಹೊರಳಿದ ಪ್ರಶಾಂತ್ ನೀಲ್

ಹರ್ಷ ಕೋಗೂಡ್, ಶ್ರೀಹರಿ, ಸುಭಾಶ್ ಅವರು ತಲಾ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ‘ಲಕ್ಷ್ಮಿ ನರಸಿಂಹಸ್ವಾಮಿ ಮೂವೀ ಮೇಕರ್ಸ್’ ಮತ್ತು ‘ಎಲ್.ಎನ್.ಡಿ. ಕ್ರಿಯೇಶನ್ಸ್’ ಮೂಲಕ ಪ್ರತಾಪ್ ಎನ್. ಹಾಗೂ ನವೀನ್ ಕುಮಾರ್ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಶಿವಣ್ಣ ಅವರು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಮತ್ತೊಬ್ಬ ನಿರ್ಮಾಪಕ ನವೀನ್ ಕುಮಾರ್ ಹಿರಿಯೂರಿ ಅವರು ಸಂತಸ ವ್ಯಕ್ತಪಡಿಸಿದರು. ಮುಂಜಾನೆ ಮಂಜು ಅವರ ಛಾಯಾಗ್ರಹಣ, ಅರವಿಂದ ರಾಜ್ ಅವರ ಸಂಕಲನ, ರಮೇಶ್ ರಂಜಿತ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು