ಯುವರತ್ನಕ್ಕೆ ಮೊದಲ ದಿನವೇ ಶುರುವಾಯ್ತು ಪೈರಸಿ ಕಾಟ; ಎಲ್ಲೇ ಪೈರಸಿ ಲಿಂಕ್ ಸಿಕ್ಕರೂ ರಿಪೋರ್ಟ್ ಮಾಡಿ ಎಂದ ಚಿತ್ರತಂಡ

ಯುವರತ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಅವರ ಮನವಿಗೆ ಓಗೊಟ್ಟಿರುವ ಸಿನಿಮಾ ಅಭಿಮಾನಿಗಳು ಟೆಲಿಗ್ರಾಂನಲ್ಲಿ ತಮಗೆ ಸಿಕ್ಕ ಪೈರಸಿ ಲಿಂಕ್​ಗಳ ಸ್ಕ್ರೀನ್​ಶಾಟ್​ಗಳನ್ನು ಹಂಚಿಕೊಂಡಿದ್ದಾರೆ. ದಯವಿಟ್ಟು ತಕ್ಷಣವೇ ಈ ಪೈರಸಿ ಲಿಂಕ್​ಗಳನ್ನು ರಿಪೋರ್ಟ್ ಮಾಡಿ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಸಹ ಕೋರಿಕೊಂಡಿದ್ದಾರೆ.

ಯುವರತ್ನಕ್ಕೆ ಮೊದಲ ದಿನವೇ ಶುರುವಾಯ್ತು ಪೈರಸಿ ಕಾಟ; ಎಲ್ಲೇ ಪೈರಸಿ ಲಿಂಕ್ ಸಿಕ್ಕರೂ ರಿಪೋರ್ಟ್ ಮಾಡಿ ಎಂದ ಚಿತ್ರತಂಡ
ಪುನೀತ್​ ರಾಜ್​ಕುಮಾರ್
Follow us
| Updated By: Skanda

Updated on: Apr 02, 2021 | 10:46 AM

ಬೆಂಗಳೂರು: ರಾಬರ್ಟ್ ಸಿನಿಮಾದ ನಂತರ ಇದೀಗ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅದ್ದೂರಿ ಸಿನಿಮಾ ಯುವರತ್ನಕ್ಕೂ ಪೈರಸಿ ಕಾಟ ಶುರುವಾಗಿದೆ. ಮೊದಲ ದಿನವೇ ಯುವರತ್ನ ಸಿನಿಮಾ ಪೈರಸಿ ಆಗಿದ್ದು, ಟೆಲಿಗ್ರಾಂನಲ್ಲಿ ಯುವರತ್ನ ಸಿನಿಮಾದ ಲಿಂಕ್​ಗಳು ಹರಿದಾಡ್ತಿವೆ. ಯುವರತ್ನ ಚಿತ್ರದ ಪೈರಸಿ ಲಿಂಕ್​ಗಳು ಎಲ್ಲೇ ಸಿಕ್ಕರೂ ರಿಪೋರ್ಟ್ ಮಾಡಿ ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಮನವಿ ಮಾಡಿಕೊಂಡಿದ್ದಾರೆ.

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ ‘ರಾಜಕುಮಾರ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಹಾಗಾಗಿ, ಅವರಿಬ್ಬರು ಜೊತೆಯಾಗಿ ಮಾಡಿರುವ ‘ಯುವರತ್ನ’ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಮೂಡಿರುವುದು ಸಹಜ. ರಾಜಕುಮಾರ ಚಿತ್ರದ ರೀತಿಯೇ ಯುವರತ್ನದಲ್ಲಿಯೂ ಒಂದು ಮೆಸೇಜ್​ ನೀಡುವ ಪ್ರಯತ್ನವನ್ನು ಮಾಡಲಾಗಿದೆ. ಈ ಬಾರಿ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಸಂತೋಷ್​ ಆನಂದ್​ ರಾಮ್​ ಟಾರ್ಗೆಟ್​ ಮಾಡಿದ್ದಾರೆ.

ಯುವರತ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಅವರ ಮನವಿಗೆ ಓಗೊಟ್ಟಿರುವ ಸಿನಿಮಾ ಅಭಿಮಾನಿಗಳು ಟೆಲಿಗ್ರಾಂನಲ್ಲಿ ತಮಗೆ ಸಿಕ್ಕ ಪೈರಸಿ ಲಿಂಕ್​ಗಳ ಸ್ಕ್ರೀನ್​ಶಾಟ್​ಗಳನ್ನು ಹಂಚಿಕೊಂಡಿದ್ದಾರೆ. ದಯವಿಟ್ಟು ತಕ್ಷಣವೇ ಈ ಪೈರಸಿ ಲಿಂಕ್​ಗಳನ್ನು ರಿಪೋರ್ಟ್ ಮಾಡಿ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಸಹ ಕೋರಿಕೊಂಡಿದ್ದಾರೆ.

ಕಳೆದ 2 ವರ್ಷಗಳಿಂದ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳಿಗೆ ಚಿತ್ರಮಂದಿರದಲ್ಲಿ ತಮ್ಮ ನೆಚ್ಚಿನ ನಟನ ದರ್ಶನ ಆಗಿರಲಿಲ್ಲ. ಹಾಗಾಗಿ ಎಲ್ಲರಲ್ಲೂ ಹೆಚ್ಚಿನ ಕಾತರ ಇತ್ತು. ಅದಕ್ಕೆ ತಕ್ಕಂತೆಯೇ ದೊಡ್ಡಮಟ್ಟದಲ್ಲಿ ಸಿನಿಮಾ ಸೌಂಡ್ ಮಾಡುತ್ತಿದೆ. ಕರ್ನಾಟಕದ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯುವರತ್ನನ ಆಗಮನ ಆಗಿದೆ. ಕನ್ನಡದ ಜೊತೆಗೆ ತೆಲುಗಿಗೂ ಈ ಸಿನಿಮಾ ಡಬ್​ ಆಗಿದೆ. ಆಂಧ್ರ ಮತ್ತು ತೆಲಂಗಾಣದ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ.

ಸ್ಟಾರ್​ ಸಿನಿಮಾಗಳನ್ನು ಮುಂಜಾನೆಯೇ ಕಣ್ತುಂಬಿಕೊಳ್ಳದಿದ್ದರೆ ಅಭಿಮಾನಿಗಳಿಗೆ ಸಮಾಧಾನವೇ ಆಗುವುದಿಲ್ಲ. ಅಪ್ಪು ಫ್ಯಾನ್ಸ್​ಗೂ ಈ ಮಾತು ಅನ್ವಯ.  ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ, ಸಿದ್ದಲಿಂಗೇಶ್ವರ, ತಾವರೆಕರೆಯ ಬಾಲಾಜಿ ಚಿತ್ರಮಂದಿರ ಸೇರಿದಂತೆ ಅನೇಕ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ಶೋ ಶುರುವಾಗಿತ್ತು. ಎಲ್ಲಾ ಕಡೆಗಳಲ್ಲಿ ಪುನೀತ್​ ಕಟೌಟ್​ಗಳು ರಾರಾಜಿಸುತ್ತಿವೆ.

ಬೆಂಗಳೂರಿನಲ್ಲಿ ಮೊದಲ ದಿನವೇ ಯುವರತ್ನ ಚಿತ್ರಕ್ಕೆ 650 ಶೋಗಳು ಮೀಸಲಾಗಿವೆ. ಬಹುತೇಕ ಕಡೆಗಳಲ್ಲಿ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿವೆ. ಇನ್ನು, ವಿದೇಶದಲ್ಲೂ ಪುನೀತ್​ ಹವಾ ಜೋರಾಗಿದೆ. ಕರ್ನಾಟಕದ ರೀತಿಯೇ ಅಮೆರಿಕಾ, ಸಿಂಗಾಪುರ, ದುಬೈ ಮುಂತಾದ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಆಗುತ್ತಿದೆ.

ಆದರೆ ಟೆಲಿಗ್ರಾಂನಲ್ಲಿ ಯುವರತ್ನ ಸಿನಿಮಾದ ಪೈರಸಿ ಲಿಂಕ್​ಗಳು ಸಿಗುತ್ತಿರುವುದು ನಿಜಕ್ಕೂ ಖೇದಕರವೇ ಆಗಿದೆ.  ಕನ್ನಡ ಸಿನಿಮಾಗಳನ್ನು ಪೈರಸಿ ಲಿಂಕ್ ಮೂಲಕ ವೀಕ್ಷಿಸಬೇಡಿ, ಲಿಂಕ್ ಸಿಕ್ಕರೆ ತಕ್ಷಣವೇ ರಿಪೋರ್ಟ್ ಮಾಡಿ ಎಂದು ಹಲವು ಕನ್ನಡ ಸಿನಿಮಾ ಅಭಿಮಾನಿಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Yuvarathnaa Movie Review: ಸೂಪರ್​ ಸಂದೇಶ ಸಾರುವ ಯುವರತ್ನ; ಫ್ಯಾನ್ಸ್​ ಮೆಚ್ಚಿಸುವ ಯತ್ನ!

ಸೌಂಡ್ ಸರಿಯಾಗಿ ಕೇಳಿಸಲ್ಲ ಎಂದು ಗಲಾಟೆ ಮಾಡಿದ ‘ಯುವರತ್ನ’ ಪ್ರೇಕ್ಷಕರು; ಹಣ ಮರಳಿಸಿದ ಊರ್ವಶಿ ಥಿಯೇಟರ್ ಮಾಲೀಕರು

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ