AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರತ್ನಕ್ಕೆ ಮೊದಲ ದಿನವೇ ಶುರುವಾಯ್ತು ಪೈರಸಿ ಕಾಟ; ಎಲ್ಲೇ ಪೈರಸಿ ಲಿಂಕ್ ಸಿಕ್ಕರೂ ರಿಪೋರ್ಟ್ ಮಾಡಿ ಎಂದ ಚಿತ್ರತಂಡ

ಯುವರತ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಅವರ ಮನವಿಗೆ ಓಗೊಟ್ಟಿರುವ ಸಿನಿಮಾ ಅಭಿಮಾನಿಗಳು ಟೆಲಿಗ್ರಾಂನಲ್ಲಿ ತಮಗೆ ಸಿಕ್ಕ ಪೈರಸಿ ಲಿಂಕ್​ಗಳ ಸ್ಕ್ರೀನ್​ಶಾಟ್​ಗಳನ್ನು ಹಂಚಿಕೊಂಡಿದ್ದಾರೆ. ದಯವಿಟ್ಟು ತಕ್ಷಣವೇ ಈ ಪೈರಸಿ ಲಿಂಕ್​ಗಳನ್ನು ರಿಪೋರ್ಟ್ ಮಾಡಿ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಸಹ ಕೋರಿಕೊಂಡಿದ್ದಾರೆ.

ಯುವರತ್ನಕ್ಕೆ ಮೊದಲ ದಿನವೇ ಶುರುವಾಯ್ತು ಪೈರಸಿ ಕಾಟ; ಎಲ್ಲೇ ಪೈರಸಿ ಲಿಂಕ್ ಸಿಕ್ಕರೂ ರಿಪೋರ್ಟ್ ಮಾಡಿ ಎಂದ ಚಿತ್ರತಂಡ
ಪುನೀತ್​ ರಾಜ್​ಕುಮಾರ್
guruganesh bhat
| Edited By: |

Updated on: Apr 02, 2021 | 10:46 AM

Share

ಬೆಂಗಳೂರು: ರಾಬರ್ಟ್ ಸಿನಿಮಾದ ನಂತರ ಇದೀಗ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅದ್ದೂರಿ ಸಿನಿಮಾ ಯುವರತ್ನಕ್ಕೂ ಪೈರಸಿ ಕಾಟ ಶುರುವಾಗಿದೆ. ಮೊದಲ ದಿನವೇ ಯುವರತ್ನ ಸಿನಿಮಾ ಪೈರಸಿ ಆಗಿದ್ದು, ಟೆಲಿಗ್ರಾಂನಲ್ಲಿ ಯುವರತ್ನ ಸಿನಿಮಾದ ಲಿಂಕ್​ಗಳು ಹರಿದಾಡ್ತಿವೆ. ಯುವರತ್ನ ಚಿತ್ರದ ಪೈರಸಿ ಲಿಂಕ್​ಗಳು ಎಲ್ಲೇ ಸಿಕ್ಕರೂ ರಿಪೋರ್ಟ್ ಮಾಡಿ ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಮನವಿ ಮಾಡಿಕೊಂಡಿದ್ದಾರೆ.

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ ‘ರಾಜಕುಮಾರ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಹಾಗಾಗಿ, ಅವರಿಬ್ಬರು ಜೊತೆಯಾಗಿ ಮಾಡಿರುವ ‘ಯುವರತ್ನ’ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಮೂಡಿರುವುದು ಸಹಜ. ರಾಜಕುಮಾರ ಚಿತ್ರದ ರೀತಿಯೇ ಯುವರತ್ನದಲ್ಲಿಯೂ ಒಂದು ಮೆಸೇಜ್​ ನೀಡುವ ಪ್ರಯತ್ನವನ್ನು ಮಾಡಲಾಗಿದೆ. ಈ ಬಾರಿ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಸಂತೋಷ್​ ಆನಂದ್​ ರಾಮ್​ ಟಾರ್ಗೆಟ್​ ಮಾಡಿದ್ದಾರೆ.

ಯುವರತ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಅವರ ಮನವಿಗೆ ಓಗೊಟ್ಟಿರುವ ಸಿನಿಮಾ ಅಭಿಮಾನಿಗಳು ಟೆಲಿಗ್ರಾಂನಲ್ಲಿ ತಮಗೆ ಸಿಕ್ಕ ಪೈರಸಿ ಲಿಂಕ್​ಗಳ ಸ್ಕ್ರೀನ್​ಶಾಟ್​ಗಳನ್ನು ಹಂಚಿಕೊಂಡಿದ್ದಾರೆ. ದಯವಿಟ್ಟು ತಕ್ಷಣವೇ ಈ ಪೈರಸಿ ಲಿಂಕ್​ಗಳನ್ನು ರಿಪೋರ್ಟ್ ಮಾಡಿ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಸಹ ಕೋರಿಕೊಂಡಿದ್ದಾರೆ.

ಕಳೆದ 2 ವರ್ಷಗಳಿಂದ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳಿಗೆ ಚಿತ್ರಮಂದಿರದಲ್ಲಿ ತಮ್ಮ ನೆಚ್ಚಿನ ನಟನ ದರ್ಶನ ಆಗಿರಲಿಲ್ಲ. ಹಾಗಾಗಿ ಎಲ್ಲರಲ್ಲೂ ಹೆಚ್ಚಿನ ಕಾತರ ಇತ್ತು. ಅದಕ್ಕೆ ತಕ್ಕಂತೆಯೇ ದೊಡ್ಡಮಟ್ಟದಲ್ಲಿ ಸಿನಿಮಾ ಸೌಂಡ್ ಮಾಡುತ್ತಿದೆ. ಕರ್ನಾಟಕದ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯುವರತ್ನನ ಆಗಮನ ಆಗಿದೆ. ಕನ್ನಡದ ಜೊತೆಗೆ ತೆಲುಗಿಗೂ ಈ ಸಿನಿಮಾ ಡಬ್​ ಆಗಿದೆ. ಆಂಧ್ರ ಮತ್ತು ತೆಲಂಗಾಣದ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ.

ಸ್ಟಾರ್​ ಸಿನಿಮಾಗಳನ್ನು ಮುಂಜಾನೆಯೇ ಕಣ್ತುಂಬಿಕೊಳ್ಳದಿದ್ದರೆ ಅಭಿಮಾನಿಗಳಿಗೆ ಸಮಾಧಾನವೇ ಆಗುವುದಿಲ್ಲ. ಅಪ್ಪು ಫ್ಯಾನ್ಸ್​ಗೂ ಈ ಮಾತು ಅನ್ವಯ.  ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ, ಸಿದ್ದಲಿಂಗೇಶ್ವರ, ತಾವರೆಕರೆಯ ಬಾಲಾಜಿ ಚಿತ್ರಮಂದಿರ ಸೇರಿದಂತೆ ಅನೇಕ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ಶೋ ಶುರುವಾಗಿತ್ತು. ಎಲ್ಲಾ ಕಡೆಗಳಲ್ಲಿ ಪುನೀತ್​ ಕಟೌಟ್​ಗಳು ರಾರಾಜಿಸುತ್ತಿವೆ.

ಬೆಂಗಳೂರಿನಲ್ಲಿ ಮೊದಲ ದಿನವೇ ಯುವರತ್ನ ಚಿತ್ರಕ್ಕೆ 650 ಶೋಗಳು ಮೀಸಲಾಗಿವೆ. ಬಹುತೇಕ ಕಡೆಗಳಲ್ಲಿ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿವೆ. ಇನ್ನು, ವಿದೇಶದಲ್ಲೂ ಪುನೀತ್​ ಹವಾ ಜೋರಾಗಿದೆ. ಕರ್ನಾಟಕದ ರೀತಿಯೇ ಅಮೆರಿಕಾ, ಸಿಂಗಾಪುರ, ದುಬೈ ಮುಂತಾದ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಆಗುತ್ತಿದೆ.

ಆದರೆ ಟೆಲಿಗ್ರಾಂನಲ್ಲಿ ಯುವರತ್ನ ಸಿನಿಮಾದ ಪೈರಸಿ ಲಿಂಕ್​ಗಳು ಸಿಗುತ್ತಿರುವುದು ನಿಜಕ್ಕೂ ಖೇದಕರವೇ ಆಗಿದೆ.  ಕನ್ನಡ ಸಿನಿಮಾಗಳನ್ನು ಪೈರಸಿ ಲಿಂಕ್ ಮೂಲಕ ವೀಕ್ಷಿಸಬೇಡಿ, ಲಿಂಕ್ ಸಿಕ್ಕರೆ ತಕ್ಷಣವೇ ರಿಪೋರ್ಟ್ ಮಾಡಿ ಎಂದು ಹಲವು ಕನ್ನಡ ಸಿನಿಮಾ ಅಭಿಮಾನಿಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Yuvarathnaa Movie Review: ಸೂಪರ್​ ಸಂದೇಶ ಸಾರುವ ಯುವರತ್ನ; ಫ್ಯಾನ್ಸ್​ ಮೆಚ್ಚಿಸುವ ಯತ್ನ!

ಸೌಂಡ್ ಸರಿಯಾಗಿ ಕೇಳಿಸಲ್ಲ ಎಂದು ಗಲಾಟೆ ಮಾಡಿದ ‘ಯುವರತ್ನ’ ಪ್ರೇಕ್ಷಕರು; ಹಣ ಮರಳಿಸಿದ ಊರ್ವಶಿ ಥಿಯೇಟರ್ ಮಾಲೀಕರು

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!