AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ

ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ
ಪುನೀತ್ ಹೊಸ ಚಿತ್ರ
guruganesh bhat
|

Updated on: Apr 13, 2021 | 9:35 PM

Share

ಯುಗಾದಿಯ ಶುಭ ಸಂದರ್ಭದಲ್ಲಿ ಯುವರತ್ನ ಹೊಸ ಸುದ್ದಿ ನೀಡಿದ್ದಾನೆ. ಪವರ್​ ಸ್ಟಾರ್ ಪುನೀತ್ ರಾಜ್​ಕುಮಾರ್ ಮುಂದಿನ ಚಿತ್ರ ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿತ್ತು. ಈ ಚಿತ್ರಕ್ಕೆ ಎದುರಾಗಿದ್ದ ಅಡ್ಡಿ ಆತಂಕಗಳು ಒಂದೆರಡಲ್ಲ. ಯುವರತ್ನ ಬಿಡುಗಡೆಯಾದ ಸಮಯದಲ್ಲೇ ಕೊರೊನಾ ವೈರಸ್​ ಹಾವಳಿ ಹೆಚ್ಚಾಯಿತು. ಪೈರಸಿ​ ಕಾಟವನ್ನೂ ಈ ಸಿನಿಮಾ ಎದುರಿಸಬೇಕಾಯಿತು. ನಂತರ ಶೇ.50 ಆಸನ ಮಿತಿ ನಿಯಮ ಜಾರಿ ಆಯಿತು. ಇದೆಲ್ಲದರ ನಡುವೆಯೂ ಹೆಚ್ಚು ಜನರನ್ನು ತಲುಪುವ ಸಲುವಾಗಿ ಯುವರತ್ನ ಸಿನಿಮಾ ಓಟಿಟಿಗೆ ಲಗ್ಗೆ ಇಟ್ಟಿತ್ತು. ಇದಾದ ನಂತರ ಪುನೀತ್ ರಾಜ್​ಕುಮಾರ್  ಯಾರ ಜತೆಗೆ ಮುಂದಿನ ಸಿನಿಮಾ ಮಾಡಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಮುಂದಿನ ಸಿನಿಮಾವನ್ನೂ ವಿಜಯ್​ ಕಿರಗಂದೂರು ಅವರೇ ನಿರ್ಮಾಣ ಮಾಡಲಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ಅಂಟಿರುವ ಡ್ರಗ್ಸ್​ ನಂಟು ಮುಂತಾದ ಗಂಭೀರ ವಿಷಯದ ಕುರಿತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಯುವರತ್ನದಲ್ಲಿ ಮೆಸೇಜ್​ ನೀಡಿದ್ದಾರೆ. ಇದು ಎಲ್ಲ ರಾಜ್ಯಗಳ ಪ್ರೇಕ್ಷಕರಿಗೂ ಅನ್ವಯ ಆಗುವಂತಹ ವಸ್ತುವಿಷಯವಾಗಿತ್ತು.  ಹಾಗಾಗಿ ದೇಶಾದ್ಯಂತ ಇರುವ ಸಿನಿಪ್ರಿಯರಿಗೆ ಮತ್ತು ಪರಭಾಷೆಯ ಯುವಜನತೆಗೆ ‘ಯುವರತ್ನ’ ಮನರಂಜನೆ ನೀಡಿತ್ತು. ಇನ್ನು ಮುಂದಿನ ಸಿನಿಮಾದದಲ್ಲಿ ಲೂಸಿಯಾ ಪವನ್ ಪವರ್​ ಸ್ಟಾರ್​ಗೆ ಯಾವ ಕಥೆ ಹೆಣೆಯುತ್ತಾರೆ ಕಾದು ನೋಡಬೇಕಿದೆ.

(Powerstar Puneethrajkumar announced his next film with Lucia Pawan and Hombale films)

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು