AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ

ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ
ಪುನೀತ್ ಹೊಸ ಚಿತ್ರ
guruganesh bhat
|

Updated on: Apr 13, 2021 | 9:35 PM

Share

ಯುಗಾದಿಯ ಶುಭ ಸಂದರ್ಭದಲ್ಲಿ ಯುವರತ್ನ ಹೊಸ ಸುದ್ದಿ ನೀಡಿದ್ದಾನೆ. ಪವರ್​ ಸ್ಟಾರ್ ಪುನೀತ್ ರಾಜ್​ಕುಮಾರ್ ಮುಂದಿನ ಚಿತ್ರ ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿತ್ತು. ಈ ಚಿತ್ರಕ್ಕೆ ಎದುರಾಗಿದ್ದ ಅಡ್ಡಿ ಆತಂಕಗಳು ಒಂದೆರಡಲ್ಲ. ಯುವರತ್ನ ಬಿಡುಗಡೆಯಾದ ಸಮಯದಲ್ಲೇ ಕೊರೊನಾ ವೈರಸ್​ ಹಾವಳಿ ಹೆಚ್ಚಾಯಿತು. ಪೈರಸಿ​ ಕಾಟವನ್ನೂ ಈ ಸಿನಿಮಾ ಎದುರಿಸಬೇಕಾಯಿತು. ನಂತರ ಶೇ.50 ಆಸನ ಮಿತಿ ನಿಯಮ ಜಾರಿ ಆಯಿತು. ಇದೆಲ್ಲದರ ನಡುವೆಯೂ ಹೆಚ್ಚು ಜನರನ್ನು ತಲುಪುವ ಸಲುವಾಗಿ ಯುವರತ್ನ ಸಿನಿಮಾ ಓಟಿಟಿಗೆ ಲಗ್ಗೆ ಇಟ್ಟಿತ್ತು. ಇದಾದ ನಂತರ ಪುನೀತ್ ರಾಜ್​ಕುಮಾರ್  ಯಾರ ಜತೆಗೆ ಮುಂದಿನ ಸಿನಿಮಾ ಮಾಡಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಮುಂದಿನ ಸಿನಿಮಾವನ್ನೂ ವಿಜಯ್​ ಕಿರಗಂದೂರು ಅವರೇ ನಿರ್ಮಾಣ ಮಾಡಲಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ಅಂಟಿರುವ ಡ್ರಗ್ಸ್​ ನಂಟು ಮುಂತಾದ ಗಂಭೀರ ವಿಷಯದ ಕುರಿತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಯುವರತ್ನದಲ್ಲಿ ಮೆಸೇಜ್​ ನೀಡಿದ್ದಾರೆ. ಇದು ಎಲ್ಲ ರಾಜ್ಯಗಳ ಪ್ರೇಕ್ಷಕರಿಗೂ ಅನ್ವಯ ಆಗುವಂತಹ ವಸ್ತುವಿಷಯವಾಗಿತ್ತು.  ಹಾಗಾಗಿ ದೇಶಾದ್ಯಂತ ಇರುವ ಸಿನಿಪ್ರಿಯರಿಗೆ ಮತ್ತು ಪರಭಾಷೆಯ ಯುವಜನತೆಗೆ ‘ಯುವರತ್ನ’ ಮನರಂಜನೆ ನೀಡಿತ್ತು. ಇನ್ನು ಮುಂದಿನ ಸಿನಿಮಾದದಲ್ಲಿ ಲೂಸಿಯಾ ಪವನ್ ಪವರ್​ ಸ್ಟಾರ್​ಗೆ ಯಾವ ಕಥೆ ಹೆಣೆಯುತ್ತಾರೆ ಕಾದು ನೋಡಬೇಕಿದೆ.

(Powerstar Puneethrajkumar announced his next film with Lucia Pawan and Hombale films)

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ