AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ

ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ
ಪುನೀತ್ ಹೊಸ ಚಿತ್ರ
guruganesh bhat
|

Updated on: Apr 13, 2021 | 9:35 PM

Share

ಯುಗಾದಿಯ ಶುಭ ಸಂದರ್ಭದಲ್ಲಿ ಯುವರತ್ನ ಹೊಸ ಸುದ್ದಿ ನೀಡಿದ್ದಾನೆ. ಪವರ್​ ಸ್ಟಾರ್ ಪುನೀತ್ ರಾಜ್​ಕುಮಾರ್ ಮುಂದಿನ ಚಿತ್ರ ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿತ್ತು. ಈ ಚಿತ್ರಕ್ಕೆ ಎದುರಾಗಿದ್ದ ಅಡ್ಡಿ ಆತಂಕಗಳು ಒಂದೆರಡಲ್ಲ. ಯುವರತ್ನ ಬಿಡುಗಡೆಯಾದ ಸಮಯದಲ್ಲೇ ಕೊರೊನಾ ವೈರಸ್​ ಹಾವಳಿ ಹೆಚ್ಚಾಯಿತು. ಪೈರಸಿ​ ಕಾಟವನ್ನೂ ಈ ಸಿನಿಮಾ ಎದುರಿಸಬೇಕಾಯಿತು. ನಂತರ ಶೇ.50 ಆಸನ ಮಿತಿ ನಿಯಮ ಜಾರಿ ಆಯಿತು. ಇದೆಲ್ಲದರ ನಡುವೆಯೂ ಹೆಚ್ಚು ಜನರನ್ನು ತಲುಪುವ ಸಲುವಾಗಿ ಯುವರತ್ನ ಸಿನಿಮಾ ಓಟಿಟಿಗೆ ಲಗ್ಗೆ ಇಟ್ಟಿತ್ತು. ಇದಾದ ನಂತರ ಪುನೀತ್ ರಾಜ್​ಕುಮಾರ್  ಯಾರ ಜತೆಗೆ ಮುಂದಿನ ಸಿನಿಮಾ ಮಾಡಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಮುಂದಿನ ಸಿನಿಮಾವನ್ನೂ ವಿಜಯ್​ ಕಿರಗಂದೂರು ಅವರೇ ನಿರ್ಮಾಣ ಮಾಡಲಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ಅಂಟಿರುವ ಡ್ರಗ್ಸ್​ ನಂಟು ಮುಂತಾದ ಗಂಭೀರ ವಿಷಯದ ಕುರಿತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಯುವರತ್ನದಲ್ಲಿ ಮೆಸೇಜ್​ ನೀಡಿದ್ದಾರೆ. ಇದು ಎಲ್ಲ ರಾಜ್ಯಗಳ ಪ್ರೇಕ್ಷಕರಿಗೂ ಅನ್ವಯ ಆಗುವಂತಹ ವಸ್ತುವಿಷಯವಾಗಿತ್ತು.  ಹಾಗಾಗಿ ದೇಶಾದ್ಯಂತ ಇರುವ ಸಿನಿಪ್ರಿಯರಿಗೆ ಮತ್ತು ಪರಭಾಷೆಯ ಯುವಜನತೆಗೆ ‘ಯುವರತ್ನ’ ಮನರಂಜನೆ ನೀಡಿತ್ತು. ಇನ್ನು ಮುಂದಿನ ಸಿನಿಮಾದದಲ್ಲಿ ಲೂಸಿಯಾ ಪವನ್ ಪವರ್​ ಸ್ಟಾರ್​ಗೆ ಯಾವ ಕಥೆ ಹೆಣೆಯುತ್ತಾರೆ ಕಾದು ನೋಡಬೇಕಿದೆ.

(Powerstar Puneethrajkumar announced his next film with Lucia Pawan and Hombale films)

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!