AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ

ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ
ಪುನೀತ್ ಹೊಸ ಚಿತ್ರ
guruganesh bhat
|

Updated on: Apr 13, 2021 | 9:35 PM

Share

ಯುಗಾದಿಯ ಶುಭ ಸಂದರ್ಭದಲ್ಲಿ ಯುವರತ್ನ ಹೊಸ ಸುದ್ದಿ ನೀಡಿದ್ದಾನೆ. ಪವರ್​ ಸ್ಟಾರ್ ಪುನೀತ್ ರಾಜ್​ಕುಮಾರ್ ಮುಂದಿನ ಚಿತ್ರ ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿತ್ತು. ಈ ಚಿತ್ರಕ್ಕೆ ಎದುರಾಗಿದ್ದ ಅಡ್ಡಿ ಆತಂಕಗಳು ಒಂದೆರಡಲ್ಲ. ಯುವರತ್ನ ಬಿಡುಗಡೆಯಾದ ಸಮಯದಲ್ಲೇ ಕೊರೊನಾ ವೈರಸ್​ ಹಾವಳಿ ಹೆಚ್ಚಾಯಿತು. ಪೈರಸಿ​ ಕಾಟವನ್ನೂ ಈ ಸಿನಿಮಾ ಎದುರಿಸಬೇಕಾಯಿತು. ನಂತರ ಶೇ.50 ಆಸನ ಮಿತಿ ನಿಯಮ ಜಾರಿ ಆಯಿತು. ಇದೆಲ್ಲದರ ನಡುವೆಯೂ ಹೆಚ್ಚು ಜನರನ್ನು ತಲುಪುವ ಸಲುವಾಗಿ ಯುವರತ್ನ ಸಿನಿಮಾ ಓಟಿಟಿಗೆ ಲಗ್ಗೆ ಇಟ್ಟಿತ್ತು. ಇದಾದ ನಂತರ ಪುನೀತ್ ರಾಜ್​ಕುಮಾರ್  ಯಾರ ಜತೆಗೆ ಮುಂದಿನ ಸಿನಿಮಾ ಮಾಡಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಮುಂದಿನ ಸಿನಿಮಾವನ್ನೂ ವಿಜಯ್​ ಕಿರಗಂದೂರು ಅವರೇ ನಿರ್ಮಾಣ ಮಾಡಲಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ಅಂಟಿರುವ ಡ್ರಗ್ಸ್​ ನಂಟು ಮುಂತಾದ ಗಂಭೀರ ವಿಷಯದ ಕುರಿತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಯುವರತ್ನದಲ್ಲಿ ಮೆಸೇಜ್​ ನೀಡಿದ್ದಾರೆ. ಇದು ಎಲ್ಲ ರಾಜ್ಯಗಳ ಪ್ರೇಕ್ಷಕರಿಗೂ ಅನ್ವಯ ಆಗುವಂತಹ ವಸ್ತುವಿಷಯವಾಗಿತ್ತು.  ಹಾಗಾಗಿ ದೇಶಾದ್ಯಂತ ಇರುವ ಸಿನಿಪ್ರಿಯರಿಗೆ ಮತ್ತು ಪರಭಾಷೆಯ ಯುವಜನತೆಗೆ ‘ಯುವರತ್ನ’ ಮನರಂಜನೆ ನೀಡಿತ್ತು. ಇನ್ನು ಮುಂದಿನ ಸಿನಿಮಾದದಲ್ಲಿ ಲೂಸಿಯಾ ಪವನ್ ಪವರ್​ ಸ್ಟಾರ್​ಗೆ ಯಾವ ಕಥೆ ಹೆಣೆಯುತ್ತಾರೆ ಕಾದು ನೋಡಬೇಕಿದೆ.

(Powerstar Puneethrajkumar announced his next film with Lucia Pawan and Hombale films)

Follow Us
guruganesh bhat
guruganesh bhat
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು