AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ

ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ
ಪುನೀತ್ ಹೊಸ ಚಿತ್ರ
guruganesh bhat
|

Updated on: Apr 13, 2021 | 9:35 PM

Share

ಯುಗಾದಿಯ ಶುಭ ಸಂದರ್ಭದಲ್ಲಿ ಯುವರತ್ನ ಹೊಸ ಸುದ್ದಿ ನೀಡಿದ್ದಾನೆ. ಪವರ್​ ಸ್ಟಾರ್ ಪುನೀತ್ ರಾಜ್​ಕುಮಾರ್ ಮುಂದಿನ ಚಿತ್ರ ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿತ್ತು. ಈ ಚಿತ್ರಕ್ಕೆ ಎದುರಾಗಿದ್ದ ಅಡ್ಡಿ ಆತಂಕಗಳು ಒಂದೆರಡಲ್ಲ. ಯುವರತ್ನ ಬಿಡುಗಡೆಯಾದ ಸಮಯದಲ್ಲೇ ಕೊರೊನಾ ವೈರಸ್​ ಹಾವಳಿ ಹೆಚ್ಚಾಯಿತು. ಪೈರಸಿ​ ಕಾಟವನ್ನೂ ಈ ಸಿನಿಮಾ ಎದುರಿಸಬೇಕಾಯಿತು. ನಂತರ ಶೇ.50 ಆಸನ ಮಿತಿ ನಿಯಮ ಜಾರಿ ಆಯಿತು. ಇದೆಲ್ಲದರ ನಡುವೆಯೂ ಹೆಚ್ಚು ಜನರನ್ನು ತಲುಪುವ ಸಲುವಾಗಿ ಯುವರತ್ನ ಸಿನಿಮಾ ಓಟಿಟಿಗೆ ಲಗ್ಗೆ ಇಟ್ಟಿತ್ತು. ಇದಾದ ನಂತರ ಪುನೀತ್ ರಾಜ್​ಕುಮಾರ್  ಯಾರ ಜತೆಗೆ ಮುಂದಿನ ಸಿನಿಮಾ ಮಾಡಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಮುಂದಿನ ಸಿನಿಮಾವನ್ನೂ ವಿಜಯ್​ ಕಿರಗಂದೂರು ಅವರೇ ನಿರ್ಮಾಣ ಮಾಡಲಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ಅಂಟಿರುವ ಡ್ರಗ್ಸ್​ ನಂಟು ಮುಂತಾದ ಗಂಭೀರ ವಿಷಯದ ಕುರಿತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಯುವರತ್ನದಲ್ಲಿ ಮೆಸೇಜ್​ ನೀಡಿದ್ದಾರೆ. ಇದು ಎಲ್ಲ ರಾಜ್ಯಗಳ ಪ್ರೇಕ್ಷಕರಿಗೂ ಅನ್ವಯ ಆಗುವಂತಹ ವಸ್ತುವಿಷಯವಾಗಿತ್ತು.  ಹಾಗಾಗಿ ದೇಶಾದ್ಯಂತ ಇರುವ ಸಿನಿಪ್ರಿಯರಿಗೆ ಮತ್ತು ಪರಭಾಷೆಯ ಯುವಜನತೆಗೆ ‘ಯುವರತ್ನ’ ಮನರಂಜನೆ ನೀಡಿತ್ತು. ಇನ್ನು ಮುಂದಿನ ಸಿನಿಮಾದದಲ್ಲಿ ಲೂಸಿಯಾ ಪವನ್ ಪವರ್​ ಸ್ಟಾರ್​ಗೆ ಯಾವ ಕಥೆ ಹೆಣೆಯುತ್ತಾರೆ ಕಾದು ನೋಡಬೇಕಿದೆ.

(Powerstar Puneethrajkumar announced his next film with Lucia Pawan and Hombale films)

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ