AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ

ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

Power Star Puneeth Rajkumar: ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾಕ್ಕೆ ಲೂಸಿಯಾ ಪವನ್ ನಿರ್ದೇಶಕ
ಪುನೀತ್ ಹೊಸ ಚಿತ್ರ
guruganesh bhat
|

Updated on: Apr 13, 2021 | 9:35 PM

Share

ಯುಗಾದಿಯ ಶುಭ ಸಂದರ್ಭದಲ್ಲಿ ಯುವರತ್ನ ಹೊಸ ಸುದ್ದಿ ನೀಡಿದ್ದಾನೆ. ಪವರ್​ ಸ್ಟಾರ್ ಪುನೀತ್ ರಾಜ್​ಕುಮಾರ್ ಮುಂದಿನ ಚಿತ್ರ ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ ನಿರ್ಮಿಸಲಿರುವ ಪುನೀತ್ ರಾಜ್​ಕುಮಾರ್ ಮುಂದಿನ ಸಿನಿಮಾವನ್ನು ಲೂಸಿಯಾ ಪವನ್ ನಿರ್ದೇಶಿಸಲಿದ್ದಾರೆ. ಈ ಕುರಿತು ಸ್ವತಃ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿತ್ತು. ಈ ಚಿತ್ರಕ್ಕೆ ಎದುರಾಗಿದ್ದ ಅಡ್ಡಿ ಆತಂಕಗಳು ಒಂದೆರಡಲ್ಲ. ಯುವರತ್ನ ಬಿಡುಗಡೆಯಾದ ಸಮಯದಲ್ಲೇ ಕೊರೊನಾ ವೈರಸ್​ ಹಾವಳಿ ಹೆಚ್ಚಾಯಿತು. ಪೈರಸಿ​ ಕಾಟವನ್ನೂ ಈ ಸಿನಿಮಾ ಎದುರಿಸಬೇಕಾಯಿತು. ನಂತರ ಶೇ.50 ಆಸನ ಮಿತಿ ನಿಯಮ ಜಾರಿ ಆಯಿತು. ಇದೆಲ್ಲದರ ನಡುವೆಯೂ ಹೆಚ್ಚು ಜನರನ್ನು ತಲುಪುವ ಸಲುವಾಗಿ ಯುವರತ್ನ ಸಿನಿಮಾ ಓಟಿಟಿಗೆ ಲಗ್ಗೆ ಇಟ್ಟಿತ್ತು. ಇದಾದ ನಂತರ ಪುನೀತ್ ರಾಜ್​ಕುಮಾರ್  ಯಾರ ಜತೆಗೆ ಮುಂದಿನ ಸಿನಿಮಾ ಮಾಡಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಮುಂದಿನ ಸಿನಿಮಾವನ್ನೂ ವಿಜಯ್​ ಕಿರಗಂದೂರು ಅವರೇ ನಿರ್ಮಾಣ ಮಾಡಲಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ಅಂಟಿರುವ ಡ್ರಗ್ಸ್​ ನಂಟು ಮುಂತಾದ ಗಂಭೀರ ವಿಷಯದ ಕುರಿತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಯುವರತ್ನದಲ್ಲಿ ಮೆಸೇಜ್​ ನೀಡಿದ್ದಾರೆ. ಇದು ಎಲ್ಲ ರಾಜ್ಯಗಳ ಪ್ರೇಕ್ಷಕರಿಗೂ ಅನ್ವಯ ಆಗುವಂತಹ ವಸ್ತುವಿಷಯವಾಗಿತ್ತು.  ಹಾಗಾಗಿ ದೇಶಾದ್ಯಂತ ಇರುವ ಸಿನಿಪ್ರಿಯರಿಗೆ ಮತ್ತು ಪರಭಾಷೆಯ ಯುವಜನತೆಗೆ ‘ಯುವರತ್ನ’ ಮನರಂಜನೆ ನೀಡಿತ್ತು. ಇನ್ನು ಮುಂದಿನ ಸಿನಿಮಾದದಲ್ಲಿ ಲೂಸಿಯಾ ಪವನ್ ಪವರ್​ ಸ್ಟಾರ್​ಗೆ ಯಾವ ಕಥೆ ಹೆಣೆಯುತ್ತಾರೆ ಕಾದು ನೋಡಬೇಕಿದೆ.

(Powerstar Puneethrajkumar announced his next film with Lucia Pawan and Hombale films)

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ