AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ದುರಂತಕ್ಕೆ ಮಿಡಿದ ಪ್ರಭಾಸ್; 2 ಕೋಟಿ ರೂಪಾಯಿ ದೇಣಿಗೆ

ವಯನಾಡಿನಲ್ಲಿ ನಡೆದ ದುರಂತ ನಿಜಕ್ಕೂ ಶಾಕಿಂಗ್. ಈ ಘಟನೆಯಲ್ಲಿ ಸುಮಾರು 400 ಜನರು ಮೃತಪಟ್ಟಿದ್ದಾರೆ. 150ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಪರಿಹಾರಕ್ಕೆ ನೆರವಾಗಲು ಹಣ ನೀಡುತ್ತಿದ್ದಾರೆ. ಕೇರಳದ ನೆರೆಯ ರಾಜ್ಯದವರೂ ಸಹಾಯಕ್ಕೆ ನಿಂತಿದ್ದಾರೆ.

ಕೇರಳದ ದುರಂತಕ್ಕೆ ಮಿಡಿದ ಪ್ರಭಾಸ್; 2 ಕೋಟಿ ರೂಪಾಯಿ ದೇಣಿಗೆ
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Aug 07, 2024 | 12:53 PM

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಸಾಕಷ್ಟು ಪ್ರವಾಹದಿಂದ ಕೇರಳ ತತ್ತರಿಸಿ ಹೋಗಿದೆ. ಈಗ ಅಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಮೋಹನ್​ಲಾಲ್ ಸೇರಿ ಅನೇಕ ಸೆಲೆಬ್ರಿಟಿಗಳು ಹಣ ನೀಡಿದ್ದಾರೆ. ಈಗ ಟಾಲಿವುಡ್ ನಟ ಪ್ರಭಾಸ್ ಕೂಡ ಕೇರಳ ಮುಖ್ಯಮಂತ್ರಿ ಪರಿಹಾರನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಮೂಲಕ ವಯನಾಡು ಜನರ ಸಹಾಯಕ್ಕೆ ನಿಂತಿದ್ದಾರೆ.

ವಯನಾಡಿನಲ್ಲಿ ನಡೆದ ದುರಂತದಲ್ಲಿ ಸುಮಾರು 400 ಜನರು ಮೃತಪಟ್ಟಿದ್ದಾರೆ. 150ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದು, ಅವರನ್ನು ಹಡುಕುವ ಕೆಲಸ ಆಗುತ್ತದೆ. ಅವರು ಬದುಕಿರುವ ಯಾವುದೇ ಸೂಚನೆ ಇಲ್ಲ. ಈ ಘಟನೆಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಜೊತೆಗೆ ಪರಿಹಾರಕ್ಕೆ ನೆರವಾಗಲು ಹಣ ನೀಡುತ್ತಿದ್ದಾರೆ. ಕೇರಳದ ನೆರೆಯ ರಾಜ್ಯದವರೂ ಸಹಾಯಕ್ಕೆ ನಿಂತಿದ್ದಾರೆ.

ಅಲ್ಲು ಅರ್ಜುನ್ ಅವರು 50 ಲಕ್ಷ ರೂಪಾಯಿ, ಚಿರಂಜೀವಿ, ರಾಮ್ ಚರಣ್ ತಲಾ 1 ಕೋಟಿ ರೂಪಾಯಿ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂಪಾಯಿ ಹಣವನ್ನು ಪರಿಹಾರ ನಿಧಿಗೆ ನೀಡಿದ್ದಾರೆ. ಇದನ್ನು ಸರ್ಕಾರ ಪರಿಹಾರ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ. ಸೆಲೆಬ್ರಿಟಿಗಳು ನೀಡಿರುವ ಹಣದಿಂದ ಆಹಾರ, ಬಟ್ಟೆ ಖರೀದಿಗೆ ಸಹಾಯ ಆಗಲಿದೆ. ಇದರ ಜೊತೆಗೆ ಸ್ಥಳೀಯರು ಆಹಾರ, ಬಟ್ಟೆ ಹಾಗೂ ಮೆಡಿಕಲ್ ಕಿಟ್​ಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಇದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದರು. ಇದರಲ್ಲಿ ಒಂದಷ್ಟು ಮೊತ್ತವನ್ನು ಅವರು ಒಳ್ಳೆಯ ಕೆಲಸಕ್ಕೆ ಬಳಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್​’ ಸಿನಿಮಾದಲ್ಲಿ ಜೋಡಿ ಆಗ್ತಾರಾ ತ್ರಿಶಾ-ಪ್ರಭಾಸ್​?

ಪ್ರಭಾಸ್ ಅವರು ‘ರಾಜಾ ಸಾಬ್’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಮಾರುತಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದಲ್ಲದೆ, ‘ಸ್ಪಿರಿಟ್ ಚಿತ್ರದ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದಾರೆ. ಈ ಚಿತ್ರವನ್ನು ಸಂದೀಪ್ ರೆಡ್ಡಿ ವಂಗ ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಅವರು ಹನು ರಾಘವಪುಡಿ ಚಿತ್ರದಲ್ಲೂ ನಟಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!