AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar: ‘ಸಲಾರ್​’ ಚಿತ್ರದಿಂದ ಬಿಗ್​ ಅಪ್​ಡೇಟ್​; ಪ್ರಭಾಸ್​ ಫ್ಯಾನ್ಸ್​ಗೆ ಆಗಸ್ಟ್​ 15ಕ್ಕೆ ಸಿಗಲಿದೆ ಗುಡ್​ ನ್ಯೂಸ್​

Prabhas | Hombale Films: ‘ಸಲಾರ್​’ ಚಿತ್ರತಂಡದ ಕಡೆಯಿಂದ ಆಗಸ್ಟ್​ 15ರಂದು ಹೊಸ ಮಾಹಿತಿ ಸಿಗಲಿದೆ. ಅದೇನು ಎಂಬುದನ್ನು ತಿಳಿಯಲು ಎಲ್ಲರೂ ಕಾಯುತ್ತಿದ್ದಾರೆ.

Salaar: ‘ಸಲಾರ್​’ ಚಿತ್ರದಿಂದ ಬಿಗ್​ ಅಪ್​ಡೇಟ್​; ಪ್ರಭಾಸ್​ ಫ್ಯಾನ್ಸ್​ಗೆ ಆಗಸ್ಟ್​ 15ಕ್ಕೆ ಸಿಗಲಿದೆ ಗುಡ್​ ನ್ಯೂಸ್​
ಪ್ರಭಾಸ್, ಪ್ರಶಾಂತ್ ನೀಲ್
TV9 Web
| Edited By: |

Updated on: Aug 13, 2022 | 4:04 PM

Share

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಬ್ಯಾನರ್​ ಮೂಲಕ ಹಲವು ಸಿನಿಮಾಗಳು ಮೂಡಿಬರುತ್ತಿವೆ. ಈ ಸಂಸ್ಥೆ ನಿರ್ಮಿಸುತ್ತಿರುವ ಎಲ್ಲ ಚಿತ್ರಗಳ ಮೇಲೂ ಸಖತ್​ ನಿರೀಕ್ಷೆ ಇದೆ. ಅದರಲ್ಲೂ ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ ಅಭಿನಯದ ‘ಸಲಾರ್​’ (Salaar Movie) ಸಿನಿಮಾಗಾಗಿ ಜನರು ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿರುವುದರಿಂದ ನಿರೀಕ್ಷೆ ಡಬಲ್​ ಆಗಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಬೇಕು ಎಂದು ಸಿನಿಪ್ರಿಯರು ಕಾದಿದ್ದಾರೆ. ಅದಕ್ಕಾಗಿ ಈಗ ದಿನಾಂಕ ನಿಗದಿ ಆಗಿದೆ. ಆಗಸ್ಟ್​ 15ರಂದು ಮಧ್ಯಾಹ್ನ 12.58ಕ್ಕೆ ದೊಡ್ಡ ಅನೌನ್ಸ್​ಮೆಂಟ್​ ಮಾಡುವುದಾಗಿ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಘೋಷಿಸಿದೆ. ಆ ಮೂಲಕ ಪ್ರಭಾಸ್​ (Prabhas) ಅಭಿಮಾನಿಗಳ ವಲಯದಲ್ಲಿ ಕಾತರ ಇನ್ನಷ್ಟು ಹೆಚ್ಚಾಗುವಂತೆ ಮಾಡಲಾಗಿದೆ.

‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾದ ಭಾರಿ ಸಕ್ಸಸ್​ ಬಳಿಕ ಪ್ರಶಾಂತ್​ ನೀಲ್​ ಅವರು ‘ಸಲಾರ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರು. ಅವರು ನಿರ್ದೇಶನ ಮಾಡುತ್ತಿರುವುದರಿಂದ ಅಭಿಮಾನಿಗಳಿಗೆ ಭಾರಿ ಕುತೂಹಲ ಇದೆ. ಈಗಾಗಲೇ ಚಿತ್ರದ ಬಗ್ಗೆ ಅನೇಕ ಬಗೆಯ ಗುಸುಗುಸು ಹರಿದಾಡುತ್ತಿವೆ. ಚಿತ್ರತಂಡದ ಕಡೆಯಿಂದಲೇ ಆಗಸ್ಟ್​ 15ರಂದು ಹೊಸ ಮಾಹಿತಿ ಸಿಗಲಿದೆ. ಅದೇನು ಎಂಬುದನ್ನು ತಿಳಿಯಲು ಎಲ್ಲರೂ ಕಾಯುತ್ತಿದ್ದಾರೆ.

ಇದನ್ನೂ ಓದಿ
Image
ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
Image
Prashanth Neel Birthday: ಬೆಂಗಳೂರಿಗೆ ಬಂದು ಪ್ರಶಾಂತ್​ ನೀಲ್​ ಬರ್ತ್​ಡೇ ಪಾರ್ಟಿಯಲ್ಲಿ ಭಾಗಿಯಾದ ಪ್ರಭಾಸ್​
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?
Image
‘ಬಾಹುಬಲಿ’ ಚಿತ್ರದಿಂದ ಪ್ರಭಾಸ್​ಗೆ ಆದ ದೊಡ್ಡ ನಷ್ಟ ಏನು? ಅಂತೂ ಬಾಯ್ಬಿಟ್ಟ ಪ್ಯಾನ್​ ಇಂಡಿಯಾ ಸ್ಟಾರ್​

ವಿಜಯ್​ ಕಿರಗಂದೂರು ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಪ್ರಭಾಸ್ ಅವರು ಸಂಪೂರ್ಣ ರಗಡ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಹೊರಬಂದಿರುವ ಪೋಸ್ಟರ್​ಗಳನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈಗ ಹೊಸ ಅಪ್​ಡೇಟ್​ ತಿಳಿಯುವ ಸಮಯ ಹತ್ತಿರ ಆಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಶ್ರುತಿ ಹಾಸನ್​ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಬೃಹತ್​ ಸೆಟ್​ಗಳಲ್ಲಿ ಈ ಸಿನಿಮಾವನ್ನು ಚಿತ್ರೀಕರಿಸಲಾಗುತ್ತಿದೆ.

ಪ್ರಭಾಸ್​ ಅವರಿಗೆ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಬಾಹುಬಲಿ’ ಬಳಿಕ ಅವರ ನಟಿಸಿದ ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಚಿತ್ರಗಳು ಸೋಲುಂಡವು. ಹಾಗಾಗಿ ಅವರು ‘ಸಲಾರ್​’ ಸಿನಿಮಾ ಮೂಲಕ ಒಂದು ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಬಹುತೇಕ ತಂತ್ರಜ್ಞರು ‘ಸಲಾರ್​’ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ರವಿ ಬಸ್ರೂರು ಸಂಗೀತ ನೀಡುತ್ತಿದ್ದು, ಭುವನ್​ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ