AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ನಿವಾಸಕ್ಕೆ ಪ್ರಭಾಸ್ ಭೇಟಿ; ಕುಟುಂಬದವರಿಗೆ ಸಾಂತ್ವನ ಹೇಳಿದ ನಟ

Prabhas: ಬಹುಭಾಷಾ ನಟ ಪ್ರಭಾಸ್ ನಿನ್ನೆ (ಮಂಗಳವಾರ) ಪುನೀತ್​ ರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿ, ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ.

Puneeth Rajkumar: ಪುನೀತ್ ನಿವಾಸಕ್ಕೆ ಪ್ರಭಾಸ್ ಭೇಟಿ; ಕುಟುಂಬದವರಿಗೆ ಸಾಂತ್ವನ ಹೇಳಿದ ನಟ
ಪ್ರಭಾಸ್, ಪುನೀತ್ ರಾಜ್​ಕುಮಾರ್
TV9 Web
| Updated By: shivaprasad.hs|

Updated on: Dec 29, 2021 | 12:22 PM

Share

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ ಎರಡು ತಿಂಗಳು ತುಂಬಿದೆ. ಕರುನಾಡು ಈ ಆಘಾತದಿಂದ ಇನ್ನೂ ಹೊರಬಂದಿಲ್ಲ. ವಿವಿಧ ಭಾಷೆಗಳ ಚಿತ್ರರಣಗದ ಗಣ್ಯರು ಪುನೀತ್ ಅವರ ನಿವಾಸಕ್ಕೆ ಆಗಮಿಸಿ ಅಶ್ವಿನಿ ಪುನೀತ್​ರಾಜ್​ಕುಮಾರ್ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. ನಿನ್ನೆ ಅಂದರೆ ಡಿಸೆಂಬರ್ 28ರಂದು (ಮಂಗಳವಾರ) ಬಹುಭಾಷಾ ನಟ ಪ್ರಭಾಸ್ ಪುನೀತ್ ನಿವಾಸಕ್ಕೆ ಆಗಮಿಸಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿದ ಪ್ರಭಾ,ಸ್ ಪುನೀತ್ ಪತ್ನಿ ಅಶ್ವಿನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ನಂತರ ರಾಘವೇಂದ್ರ ರಾಜ್​ಕುಮಾರ್ ಅವರೊಂದಿಗೆ ಚರ್ಚಿಸಿ ಪ್ರಭಾಸ್ ವಾಪಸ್ಸಾಗಿದ್ದಾರೆ.

ಪ್ರಭಾಸ್​​​ ಅವರ ಜನ್ಮದಿನಕ್ಕೆ ಶುಭಹಾರೈಸಲು ಅಕ್ಟೋಬರ್ 23ರಂದು ಪುನೀತ್ ಕರೆ ಮಾಡಿದ್ದರಂತೆ. ಅದನ್ನು ಪ್ರಭಾಸ್ ಸ್ಮರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಭಾಸ್ ಆಗಮಿಸಿದ್ದ ವೇಳೆ ಶಿವರಾಜ್​ಕುಮಾರ್ ಶಕ್ತಿಧಾಮಕ್ಕೆ ತೆರಳಿದ್ದರು.

ಪುನೀತ್ ನಿಧನರಾಗಿ ಎರಡು ತಿಂಗಳು; ಸಮಾಧಿಗೆ ಪೂಜೆ ನಟ ಪುನೀತ್ ರಾಜ್​ಕುಮಾರ್ ಇಹಲೋಕ ತ್ಯಜಿಸಿ ಎರಡು ತಿಂಗಳಾಗಿವೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್,  ‘ಪುನೀತ್​ ಮಾಡುತ್ತಿದ್ದ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಅಭಿಮಾನಿಗಳೇ ನಮಗೆ ಶಕ್ತಿ ನೀಡಬೇಕು. ಅವನ ಸಿನಿಮಾಗಳೆಲ್ಲ ಈಗ ಬದಿಗೆ ಸರಿದಿವೆ. ಅವನು ಮಾಡಿದ ಸಾಮಾಜಿಕ ಕೆಲಸಗಳೇ ಮುಂದೆ ಬಂದಿವೆ’ ಎಂದು ನುಡಿದಿದ್ದಾರೆ.

ಪುನೀತ್ ಅವರು ನೇತ್ರದಾನ ಮಾಡಿದ್ದನ್ನು ನೋಡಿ ರಾಜ್ಯದ ಜನರು ಅದರಿಂದ ಪ್ರಭಾವಿತರಾಗಿದ್ದಾರೆ. ಆದ್ದರಿಂದಲೇ ಕರ್ನಾಟಕದಲ್ಲಿ ನೇತ್ರದಾನ ಏರಿಕೆಯಾಗಿದೆ. ಇದೀಗ ಶಿವರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ದೇಹದಾನದ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತು ರಾಘಣ್ಣ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

‘ಶಿವಣ್ಣ, ನಾನು ದೇಹದಾನ ಮಾಡಿದ್ದೇವೆ’: ಅಪ್ಪು ನೆನಪಲ್ಲಿ ರಾಘಣ್ಣ ಹೇಳಿದ ಮಹತ್ವದ ವಿಚಾರಗಳು ಇಲ್ಲಿವೆ

ಅಪ್ಪು ಇಲ್ಲದೇ ಕಳೆಯಿತು 2 ತಿಂಗಳು; ನೇತ್ರದಾನದ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ರಾಘಣ್ಣ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!