AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pradeep Raj Death: ಕೊರೊನಾ ಸೋಂಕಿನಿಂದ ‘ಕಿರಾತಕ’ ಚಿತ್ರದ​ ನಿರ್ದೇಶಕ ಪ್ರದೀಪ್​ ರಾಜ್​ ನಿಧನ

Pradeep Raj: ಯಶ್​ ಅಭಿನಯದ ‘ಕಿರಾತಕ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಪ್ರದೀಪ್​ ರಾಜ್​ ಕೊರೊನಾದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.

Pradeep Raj Death: ಕೊರೊನಾ ಸೋಂಕಿನಿಂದ ‘ಕಿರಾತಕ’ ಚಿತ್ರದ​ ನಿರ್ದೇಶಕ ಪ್ರದೀಪ್​ ರಾಜ್​ ನಿಧನ
ಯಶ್​, ಪ್ರದೀಪ್​ ರಾಜ್​, ಓವಿಯಾ
TV9 Web
| Edited By: |

Updated on:Jan 20, 2022 | 8:42 AM

Share

ಕನ್ನಡದ ಚಿತ್ರರಂಗಕ್ಕೆ 2022ರ ಶುರುವಿನಲ್ಲೇ ಕಹಿ ಸುದ್ದಿ ಕೇಳಿಬಂದಿದೆ. ಸ್ಯಾಂಡಲ್​ವುಡ್​ನಲ್ಲಿ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿ ಫೇಮಸ್​ ಆಗಿದ್ದ ನಿರ್ದೇಶಕ ಪ್ರದೀಪ್​ ರಾಜ್​ (Pradeep Raj) ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಕುಟುಂಬದ ಸದಸ್ಯರು ಖಚಿತಪಡಿಸಿದ್ದಾರೆ. ಪ್ರದೀಪ್​ ರಾಜ್​ ಅವರಿಗೆ 46 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ಡಯಾಬಿಟಿಸ್​ನಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರಿಗೆ ಕೊರೊನಾ (Coronavirus) ಸೋಂಕು ತಗುಲಿತ್ತು. ಅದರಿಂದ ಅವರು ಇಂದು (ಜ.20) ಮೃತಪಟ್ಟರು ಎಂದು ಸಹೋದರ ಪ್ರಶಾಂತ್​ ರಾಜ್ ಅವರು ಟಿವಿ9ಗೆ ಮಾಹಿತಿ ನೀಡಿದ್ದಾರೆ. ಯಶ್​ ಅಭಿನಯದ ‘ಕಿರಾತಕ’ (Kirataka Kannada Movie) ಚಿತ್ರಕ್ಕೆ ಪ್ರದೀಪ್​ ರಾಜ್​ ನಿರ್ದೇಶನ ಮಾಡಿದ್ದರು. ಆ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತ್ತು. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಕನ್ನಡದಲ್ಲಿ ಹಲವು ಸಿನಿಮಾಗಳನ್ನು ಪ್ರದೀಪ್​ ರಾಜ್​ ನಿರ್ದೇಶಿಸಿದ್ದರು. ಸತೀಶ್​ ನೀನಾಸಂ ನಟನೆಯ ‘ಅಂಜದ ಗಂಡು’, ಕಾರ್ತಿಕ್​ ಜಯರಾಮ್​, ಚಿಕ್ಕಣ್ಣ ಮುಂತಾದವರು ಅಭಿನಯಿಸಿದ್ದ ‘ಬೆಂಗಳೂರು 560023’, ದುನಿಯಾ ವಿಜಯ್​ ನಟನೆಯ ‘ರಜನಿ ಕಾಂತ’ ಇತ್ಯಾದಿ ಸಿನಿಮಾಗಳಿಗೆ ಅವರ ನಿರ್ದೇಶನವಿತ್ತು.

ಕಳೆದ 6 ತಿಂಗಳಿನಿಂದ ಪ್ರದೀಪ್​ ರಾಜ್​ ಅವರಿಗೆ ಆರೋಗ್ಯ ಕೈಕೊಟ್ಟಿತ್ತು. ಆ ಬಗ್ಗೆ ಅವರ ಸಹೋದರ ಪ್ರಶಾಂತ್​ ರಾಜ್​ ಮಾಹಿತಿ ನೀಡಿದ್ದಾರೆ. ‘ಕೊರೊನಾ ಸೋಂಕು ತಗುಲಿತ್ತು. 6 ತಿಂಗಳಿಂದ ಲಿವರ್​ ಸಮಸ್ಯೆ ಆಗಿತ್ತು. ಅನೇಕ ಆಸ್ಪತ್ರೆಗಳಿಗೆ ತೋರಿಸಿದ್ದೆವು. ಕಳೆದ 15 ವರ್ಷದಿಂದಲೂ ಅವರಿಗೆ ಡಯಾಬಿಟಿಸ್​ ಇತ್ತು. ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಅವರು ಕಾಳಜಿ ವಹಿಸಲಿಲ್ಲ. ಅದರಿಂದ ಒಳಗಡೆ ಇನ್​ಫೆಕ್ಷನ್​ ಆಯಿತು’ ಎಂದು ಪ್ರಶಾಂತ್​ ರಾಜ್ ಮಾಹಿತಿ ನೀಡಿದ್ದಾರೆ.​

‘ನಮ್ಮ ಸ್ವಂತ ಊರು ಪಾಂಡಿಚೆರಿ. ಹಾಗಾಗಿ ಕಳೆದ ಆಗಸ್ಟ್​ನಿಂದ ಇಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೆವು. ಮಧ್ಯರಾತ್ರಿ 3 ಗಂಟೆಗೆ ಕೊನೆಯುಸಿರೆಳೆದರು. ತಮಗೆ ಇನ್ನೂ ಚಿಕ್ಕ ವಯಸ್ಸು, ಮಾತ್ರೆ ತಗೊಂಡ್ರೆ ಸರಿಯಾಗತ್ತೆ ಅಂತ ಅವರು ನಿರ್ಲಕ್ಷ್ಯ ಮಾಡಿದ್ರು’ ಎಂದು ಪ್ರಶಾಂತ್​ ರಾಜ್​ ಮಾಹಿತಿ ತಿಳಿಸಿದ್ದಾರೆ.

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಪ್ರದೀಪ್​ ರಾಜ್​ ಅಗಲಿದ್ದಾರೆ. ಗುರುವಾರ (ಜ.20) ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಾಂಡಿಚರಿಯಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ನಿಧನದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಅನೇಕರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ:

Covid-19: ಕೊವಿಡ್​ನಿಂದ ಮೃತಪಟ್ಟವರ ದೇಹದಲ್ಲೂ 9 ದಿನ ಕೊರೊನಾವೈರಸ್ ಜೀವಂತವಾಗಿರುತ್ತದೆ!

ಕೊರೊನಾ 3ನೇ ಅಲೆ ಉತ್ತುಂಗದಲ್ಲಿ ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು: ಆರೋಗ್ಯ ಸಚಿವ ಸುಧಾಕರ

Published On - 8:15 am, Thu, 20 January 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ