AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಪ್ರಜ್ವಲ್​ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ‘ಆನಂದ್​ ಆಡಿಯೋ’ ಮೂಲಕ ಈ ಸಿನಿಮಾದ ಹೊಸ ಸಾಂಗ್​ ರಿಲೀಸ್​ ಆಗಿದೆ.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ
ಅದಿತಿ ಪ್ರಭುದೇವ, ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Jan 04, 2024 | 6:35 PM

Share

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ (Prajwal Devaraj) ಅವರು ಹಲವು ಸಿನಿಮಾಗಳ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ಅಭಿನಯಿಸಿರುವ ‘ಮಾಫಿಯಾ’ ಸಿನಿಮಾ (Mafia Movie) ಒಂದಷ್ಟು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರತಂಡದಿಂದ ಈಗ ಒಂದು ರೊಮ್ಯಾಂಟಿಕ್ ಸಾಂಗ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಮತ್ತು ಅದಿತಿ ಪ್ರಭುದೇವ (Aditi Prabhudeva) ಅವರು ಜೋಡಿಯಾಗಿ ನಟಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಚಿತ್ರಗಳ ಖ್ಯಾತಿಯ ನಿರ್ದೇಶಕ ಲೋಹಿತ್ ಅವರು ‘ಮಾಫಿಯಾ’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾ ಟೀಸರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದೆ. ಈಗ ಹಾಡಿನ ಮೂಲಕ ಸದ್ದು ಮಾಡುತ್ತಿದೆ. ಈ ಸಾಂಗ್​ನಲ್ಲಿ ಅದಿತಿ ಪ್ರಭುದೇವ ಮತ್ತು ಪ್ರಜ್ವಲ್​ ದೇವರಾಜ್​ ಅವರು ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Aditi Prabhudeva: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

‘ತುಂಬಾನೇ ಕೇಳಲಾರೆ…’ ಎಂದು ಶುರುವಾಗುವ ಈ ಹಾಡಿಗೆ ಅನೂಪ್​ ಸಿಳೀನ್​ ಅವರು ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಹರಿಚರಣ್​ ಮತ್ತು ಸಾನ್ವಿ ಶೆಟ್ಟಿ ಅವರ ಕಂಠದಲ್ಲಿ ಈ ಸಾಂಗ್​ ಮೂಡಿಬಂದಿದೆ. ‘ಆನಂದ್​ ಆಡಿಯೋ’ದಲ್ಲಿ ಸದ್ಯ ರಿಲೀಸ್​ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಪೂರ್ತಿ ವಿಡಿಯೋ ಸಾಂಗ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಈಗಾಗಲೇ ‘ಮಾಫಿಯಾ’ ಚಿತ್ರಕ್ಕೆ ಶೂಟಿಂಗ್​ ಪೂರ್ಣಗೊಂಡಿದೆ. ಸಿನಿಮಾ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಟೀಸರ್ ಮತ್ತು ಹಾಡಿನ ಮೂಲಕ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದರೆ ಫೆಬ್ರವರಿಯಲ್ಲಿ ‘ಮಾಫಿಯಾ’ ಬಿಡುಗಡೆ ಆಗುವ ನಿರೀಕ್ಷೆ ಇದೆ. ಕುಮಾರ್ ಅವರು ಈ ಸಿನಿಮಾ ಬಂಡವಾಳ ಹೂಡಿದ್ದಾರೆ. ಪಾಂಡಿಕುಮಾರ್​ ಛಾಯಾಗ್ರಹಣ, ಸಿ. ರವಿಚಂದ್ರನ್​ ಅವರ ಸಂಕಲನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ