AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಪ್ರಜ್ವಲ್​ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ‘ಆನಂದ್​ ಆಡಿಯೋ’ ಮೂಲಕ ಈ ಸಿನಿಮಾದ ಹೊಸ ಸಾಂಗ್​ ರಿಲೀಸ್​ ಆಗಿದೆ.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ
ಅದಿತಿ ಪ್ರಭುದೇವ, ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Jan 04, 2024 | 6:35 PM

Share

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ (Prajwal Devaraj) ಅವರು ಹಲವು ಸಿನಿಮಾಗಳ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ಅಭಿನಯಿಸಿರುವ ‘ಮಾಫಿಯಾ’ ಸಿನಿಮಾ (Mafia Movie) ಒಂದಷ್ಟು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರತಂಡದಿಂದ ಈಗ ಒಂದು ರೊಮ್ಯಾಂಟಿಕ್ ಸಾಂಗ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಮತ್ತು ಅದಿತಿ ಪ್ರಭುದೇವ (Aditi Prabhudeva) ಅವರು ಜೋಡಿಯಾಗಿ ನಟಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಚಿತ್ರಗಳ ಖ್ಯಾತಿಯ ನಿರ್ದೇಶಕ ಲೋಹಿತ್ ಅವರು ‘ಮಾಫಿಯಾ’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾ ಟೀಸರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದೆ. ಈಗ ಹಾಡಿನ ಮೂಲಕ ಸದ್ದು ಮಾಡುತ್ತಿದೆ. ಈ ಸಾಂಗ್​ನಲ್ಲಿ ಅದಿತಿ ಪ್ರಭುದೇವ ಮತ್ತು ಪ್ರಜ್ವಲ್​ ದೇವರಾಜ್​ ಅವರು ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Aditi Prabhudeva: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

‘ತುಂಬಾನೇ ಕೇಳಲಾರೆ…’ ಎಂದು ಶುರುವಾಗುವ ಈ ಹಾಡಿಗೆ ಅನೂಪ್​ ಸಿಳೀನ್​ ಅವರು ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಹರಿಚರಣ್​ ಮತ್ತು ಸಾನ್ವಿ ಶೆಟ್ಟಿ ಅವರ ಕಂಠದಲ್ಲಿ ಈ ಸಾಂಗ್​ ಮೂಡಿಬಂದಿದೆ. ‘ಆನಂದ್​ ಆಡಿಯೋ’ದಲ್ಲಿ ಸದ್ಯ ರಿಲೀಸ್​ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಪೂರ್ತಿ ವಿಡಿಯೋ ಸಾಂಗ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಈಗಾಗಲೇ ‘ಮಾಫಿಯಾ’ ಚಿತ್ರಕ್ಕೆ ಶೂಟಿಂಗ್​ ಪೂರ್ಣಗೊಂಡಿದೆ. ಸಿನಿಮಾ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಟೀಸರ್ ಮತ್ತು ಹಾಡಿನ ಮೂಲಕ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದರೆ ಫೆಬ್ರವರಿಯಲ್ಲಿ ‘ಮಾಫಿಯಾ’ ಬಿಡುಗಡೆ ಆಗುವ ನಿರೀಕ್ಷೆ ಇದೆ. ಕುಮಾರ್ ಅವರು ಈ ಸಿನಿಮಾ ಬಂಡವಾಳ ಹೂಡಿದ್ದಾರೆ. ಪಾಂಡಿಕುಮಾರ್​ ಛಾಯಾಗ್ರಹಣ, ಸಿ. ರವಿಚಂದ್ರನ್​ ಅವರ ಸಂಕಲನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ
ಇಂದು ಉದ್ಘಾಟನೆಯಾಗಲಿರುವ ಮಾತಾ ತ್ರಿಪುರ ಸುಂದರಿ ದೇವಾಲಯ ಹೇಗಿದೆ ನೋಡಿ
ಇಂದು ಉದ್ಘಾಟನೆಯಾಗಲಿರುವ ಮಾತಾ ತ್ರಿಪುರ ಸುಂದರಿ ದೇವಾಲಯ ಹೇಗಿದೆ ನೋಡಿ