AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಪ್ರಜ್ವಲ್​ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ‘ಆನಂದ್​ ಆಡಿಯೋ’ ಮೂಲಕ ಈ ಸಿನಿಮಾದ ಹೊಸ ಸಾಂಗ್​ ರಿಲೀಸ್​ ಆಗಿದೆ.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ
ಅದಿತಿ ಪ್ರಭುದೇವ, ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Jan 04, 2024 | 6:35 PM

Share

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ (Prajwal Devaraj) ಅವರು ಹಲವು ಸಿನಿಮಾಗಳ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ಅಭಿನಯಿಸಿರುವ ‘ಮಾಫಿಯಾ’ ಸಿನಿಮಾ (Mafia Movie) ಒಂದಷ್ಟು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರತಂಡದಿಂದ ಈಗ ಒಂದು ರೊಮ್ಯಾಂಟಿಕ್ ಸಾಂಗ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಮತ್ತು ಅದಿತಿ ಪ್ರಭುದೇವ (Aditi Prabhudeva) ಅವರು ಜೋಡಿಯಾಗಿ ನಟಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಚಿತ್ರಗಳ ಖ್ಯಾತಿಯ ನಿರ್ದೇಶಕ ಲೋಹಿತ್ ಅವರು ‘ಮಾಫಿಯಾ’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾ ಟೀಸರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದೆ. ಈಗ ಹಾಡಿನ ಮೂಲಕ ಸದ್ದು ಮಾಡುತ್ತಿದೆ. ಈ ಸಾಂಗ್​ನಲ್ಲಿ ಅದಿತಿ ಪ್ರಭುದೇವ ಮತ್ತು ಪ್ರಜ್ವಲ್​ ದೇವರಾಜ್​ ಅವರು ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Aditi Prabhudeva: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

‘ತುಂಬಾನೇ ಕೇಳಲಾರೆ…’ ಎಂದು ಶುರುವಾಗುವ ಈ ಹಾಡಿಗೆ ಅನೂಪ್​ ಸಿಳೀನ್​ ಅವರು ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಹರಿಚರಣ್​ ಮತ್ತು ಸಾನ್ವಿ ಶೆಟ್ಟಿ ಅವರ ಕಂಠದಲ್ಲಿ ಈ ಸಾಂಗ್​ ಮೂಡಿಬಂದಿದೆ. ‘ಆನಂದ್​ ಆಡಿಯೋ’ದಲ್ಲಿ ಸದ್ಯ ರಿಲೀಸ್​ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಪೂರ್ತಿ ವಿಡಿಯೋ ಸಾಂಗ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಈಗಾಗಲೇ ‘ಮಾಫಿಯಾ’ ಚಿತ್ರಕ್ಕೆ ಶೂಟಿಂಗ್​ ಪೂರ್ಣಗೊಂಡಿದೆ. ಸಿನಿಮಾ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಟೀಸರ್ ಮತ್ತು ಹಾಡಿನ ಮೂಲಕ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದರೆ ಫೆಬ್ರವರಿಯಲ್ಲಿ ‘ಮಾಫಿಯಾ’ ಬಿಡುಗಡೆ ಆಗುವ ನಿರೀಕ್ಷೆ ಇದೆ. ಕುಮಾರ್ ಅವರು ಈ ಸಿನಿಮಾ ಬಂಡವಾಳ ಹೂಡಿದ್ದಾರೆ. ಪಾಂಡಿಕುಮಾರ್​ ಛಾಯಾಗ್ರಹಣ, ಸಿ. ರವಿಚಂದ್ರನ್​ ಅವರ ಸಂಕಲನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ