AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಪ್ರಜ್ವಲ್​ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ‘ಆನಂದ್​ ಆಡಿಯೋ’ ಮೂಲಕ ಈ ಸಿನಿಮಾದ ಹೊಸ ಸಾಂಗ್​ ರಿಲೀಸ್​ ಆಗಿದೆ.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ
ಅದಿತಿ ಪ್ರಭುದೇವ, ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Jan 04, 2024 | 6:35 PM

Share

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ (Prajwal Devaraj) ಅವರು ಹಲವು ಸಿನಿಮಾಗಳ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ಅಭಿನಯಿಸಿರುವ ‘ಮಾಫಿಯಾ’ ಸಿನಿಮಾ (Mafia Movie) ಒಂದಷ್ಟು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರತಂಡದಿಂದ ಈಗ ಒಂದು ರೊಮ್ಯಾಂಟಿಕ್ ಸಾಂಗ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಮತ್ತು ಅದಿತಿ ಪ್ರಭುದೇವ (Aditi Prabhudeva) ಅವರು ಜೋಡಿಯಾಗಿ ನಟಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಚಿತ್ರಗಳ ಖ್ಯಾತಿಯ ನಿರ್ದೇಶಕ ಲೋಹಿತ್ ಅವರು ‘ಮಾಫಿಯಾ’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾ ಟೀಸರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದೆ. ಈಗ ಹಾಡಿನ ಮೂಲಕ ಸದ್ದು ಮಾಡುತ್ತಿದೆ. ಈ ಸಾಂಗ್​ನಲ್ಲಿ ಅದಿತಿ ಪ್ರಭುದೇವ ಮತ್ತು ಪ್ರಜ್ವಲ್​ ದೇವರಾಜ್​ ಅವರು ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Aditi Prabhudeva: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

‘ತುಂಬಾನೇ ಕೇಳಲಾರೆ…’ ಎಂದು ಶುರುವಾಗುವ ಈ ಹಾಡಿಗೆ ಅನೂಪ್​ ಸಿಳೀನ್​ ಅವರು ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಹರಿಚರಣ್​ ಮತ್ತು ಸಾನ್ವಿ ಶೆಟ್ಟಿ ಅವರ ಕಂಠದಲ್ಲಿ ಈ ಸಾಂಗ್​ ಮೂಡಿಬಂದಿದೆ. ‘ಆನಂದ್​ ಆಡಿಯೋ’ದಲ್ಲಿ ಸದ್ಯ ರಿಲೀಸ್​ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಪೂರ್ತಿ ವಿಡಿಯೋ ಸಾಂಗ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಈಗಾಗಲೇ ‘ಮಾಫಿಯಾ’ ಚಿತ್ರಕ್ಕೆ ಶೂಟಿಂಗ್​ ಪೂರ್ಣಗೊಂಡಿದೆ. ಸಿನಿಮಾ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಟೀಸರ್ ಮತ್ತು ಹಾಡಿನ ಮೂಲಕ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದರೆ ಫೆಬ್ರವರಿಯಲ್ಲಿ ‘ಮಾಫಿಯಾ’ ಬಿಡುಗಡೆ ಆಗುವ ನಿರೀಕ್ಷೆ ಇದೆ. ಕುಮಾರ್ ಅವರು ಈ ಸಿನಿಮಾ ಬಂಡವಾಳ ಹೂಡಿದ್ದಾರೆ. ಪಾಂಡಿಕುಮಾರ್​ ಛಾಯಾಗ್ರಹಣ, ಸಿ. ರವಿಚಂದ್ರನ್​ ಅವರ ಸಂಕಲನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು